<p><strong>ಮುಂಡರಗಿ</strong>: ‘ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆ ಹಾಗೂ ನಾಡ ಹಬ್ಬ ಆಚರಣೆಗಳಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿದುಬಂದಿದೆ. ಅಂತಹ ವಿದ್ಯಾರ್ಥಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಡಾ.ಚಂದ್ರು ಲಮಾಣಿ ಸೂಚಿಸಿದರು.</p>.<p>ಪಟ್ಟಣದ ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ನಡೆದ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅನವಶ್ಯಕವಾಗಿ ತರಗತಿಗೆ ಗೈರಾಗುವ ವಿದ್ಯಾರ್ಥಿಗಳ ಪಾಲಕರಿಗೆ ಮಾಹಿತಿ ನೀಡುವ ಮೂಲಕ ಹಾಜರಾತಿ ಹೆಚ್ಚಿಸಬೇಕು’ ಎಂದರು.</p>.<p>ನಿವೃತ್ತ ಉಪನ್ಯಾಸಕ ಆರ್.ಎಲ್. ಪೊಲೀಸ್ಪಾಟೀಲ, ಕುಮಾರಸ್ವಾಮಿ ಹಿರೇಮಠ ಮಾತನಾಡಿದರು. ಪ್ರಾಚಾರ್ಯೆ ಉಮಾ ಕೊಳ್ಳಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾಲೇಜು ಮೇಲ್ವಿಚಾರಣಾ ಸಮಿತಿ ಸದಸ್ಯ ಎಂ.ವಿ. ಅರಳಿ, ಪ್ರಶಾಂತಗೌಡ ಪಾಟೀಲ, ಮಲ್ಲಿಕಾರ್ಜುನ ಹಣಜಿ, ಎಸ್.ಎಸ್. ಗಡ್ಡದ, ಅರುಣಾ ಪಾಟೀಲ, ರವಿಗೌಡ ಪಾಟೀಲ, ವಿರುಪಾಕ್ಷಗೌಡ ಎಚ್., ರುದ್ರಗೌಡ ಪಾಟೀಲ, ಪ್ರಿಯಾಂಕ ಗಡದರ, ಕಾವೇರಿ ಬೋಲಾ, ಮಿಟ್ಯಾನಾಯಕ, ಪ್ರಕಾಶ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆ ಹಾಗೂ ನಾಡ ಹಬ್ಬ ಆಚರಣೆಗಳಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿದುಬಂದಿದೆ. ಅಂತಹ ವಿದ್ಯಾರ್ಥಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಡಾ.ಚಂದ್ರು ಲಮಾಣಿ ಸೂಚಿಸಿದರು.</p>.<p>ಪಟ್ಟಣದ ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ನಡೆದ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅನವಶ್ಯಕವಾಗಿ ತರಗತಿಗೆ ಗೈರಾಗುವ ವಿದ್ಯಾರ್ಥಿಗಳ ಪಾಲಕರಿಗೆ ಮಾಹಿತಿ ನೀಡುವ ಮೂಲಕ ಹಾಜರಾತಿ ಹೆಚ್ಚಿಸಬೇಕು’ ಎಂದರು.</p>.<p>ನಿವೃತ್ತ ಉಪನ್ಯಾಸಕ ಆರ್.ಎಲ್. ಪೊಲೀಸ್ಪಾಟೀಲ, ಕುಮಾರಸ್ವಾಮಿ ಹಿರೇಮಠ ಮಾತನಾಡಿದರು. ಪ್ರಾಚಾರ್ಯೆ ಉಮಾ ಕೊಳ್ಳಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾಲೇಜು ಮೇಲ್ವಿಚಾರಣಾ ಸಮಿತಿ ಸದಸ್ಯ ಎಂ.ವಿ. ಅರಳಿ, ಪ್ರಶಾಂತಗೌಡ ಪಾಟೀಲ, ಮಲ್ಲಿಕಾರ್ಜುನ ಹಣಜಿ, ಎಸ್.ಎಸ್. ಗಡ್ಡದ, ಅರುಣಾ ಪಾಟೀಲ, ರವಿಗೌಡ ಪಾಟೀಲ, ವಿರುಪಾಕ್ಷಗೌಡ ಎಚ್., ರುದ್ರಗೌಡ ಪಾಟೀಲ, ಪ್ರಿಯಾಂಕ ಗಡದರ, ಕಾವೇರಿ ಬೋಲಾ, ಮಿಟ್ಯಾನಾಯಕ, ಪ್ರಕಾಶ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>