<p><strong>ನರಗುಂದ</strong>: ಸುಪ್ರೀಂಕೋರ್ಟ್ ನ್ಯಾಯಾಧೀಶ ಬಿ.ಆರ್.ಗವಾಯಿವರ ಮೇಲೆ ಅಲ್ಲಿನ ಹಿರಿಯರ ವಕೀಲರಿಂದ ನಡೆದ ಹಲ್ಲೆ ಖಂಡಿಸಿ ಪಟ್ಟಣದಲ್ಲಿ ದಲಿತ ಪರ, ಕನ್ನಡ ಪರ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದಿಂದ ತಹಶೀಲ್ದಾರ ಮೂಲಕ ಶುಕ್ರವಾರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ವಿಜಯ ಚಲವಾದಿ ಸುಪ್ರೀಂಕೋರ್ಟ್ ನಂತಹ ಪವಿತ್ರ ಸ್ಥಳದಲ್ಲಿ ಅಲ್ಲಿನ ನ್ಯಾಯಾಧೀಶ ರ ಮೇಲೆ ಶೂ ಎಸೆಯಲು ಮುಂದಾದ ವಕೀಲ ವೇಷ ಹಾಕಿದ ಭಯೋತ್ಪಾದಕ ರಾಕೇಶ ಕಿಶೋರನನ್ನು ಗಡಿಪಾರು ಮಾಡಬೇಕು. ಅವರ ಆಸ್ತಿಯನ್ನು ಮುಟ್ಟು ಗೋಲು ಹಾಕಬೇಕು.ಮನುವಾದಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದರು.</p>.<p>ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನದಲ್ಲಿ ಎಲ್ಲರೂ ಗೌರವದಿಂದ ಬದುಕಲು ಅವಕಾಶಗಳನ್ನು ಕಲ್ಪಿಸಿದ್ದಾರೆ. ಜಾತ್ಯತೀತ ಕಲ್ಪನೆಯನ್ನು ಸಹಿಸಲಾರದ ಮನುವಾದಿಗಳು, ಆಗಾಗ್ಗೆ ಸಂವಿಧಾನದ ಆಶಯಗಳಿಗೆ ಭಂಗ ತರುವ ತಂತ್ರ ಹೂಡುತ್ತಿರುವುದು ತೀವ್ರ ಖಂಡನೀಯ ಎಂದರು.</p>.<p>ಈ ಸಂದರ್ಭದಲ್ಲಿ ದತ್ತು ಜೋಗಣ್ಣವರ,ನಬೀಸಾಬ ಕಿಲ್ಲೇದಾರ, ಶರಣು ಚಲವಾದಿ, ಮಂಜು ರಂಗಣ್ಣವರ, ಗುರು ಕೆಂಗರಕರ, ಫಾರೂಕ್, ಬಸು ಪೂಜಾರ ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ</strong>: ಸುಪ್ರೀಂಕೋರ್ಟ್ ನ್ಯಾಯಾಧೀಶ ಬಿ.ಆರ್.ಗವಾಯಿವರ ಮೇಲೆ ಅಲ್ಲಿನ ಹಿರಿಯರ ವಕೀಲರಿಂದ ನಡೆದ ಹಲ್ಲೆ ಖಂಡಿಸಿ ಪಟ್ಟಣದಲ್ಲಿ ದಲಿತ ಪರ, ಕನ್ನಡ ಪರ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದಿಂದ ತಹಶೀಲ್ದಾರ ಮೂಲಕ ಶುಕ್ರವಾರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ವಿಜಯ ಚಲವಾದಿ ಸುಪ್ರೀಂಕೋರ್ಟ್ ನಂತಹ ಪವಿತ್ರ ಸ್ಥಳದಲ್ಲಿ ಅಲ್ಲಿನ ನ್ಯಾಯಾಧೀಶ ರ ಮೇಲೆ ಶೂ ಎಸೆಯಲು ಮುಂದಾದ ವಕೀಲ ವೇಷ ಹಾಕಿದ ಭಯೋತ್ಪಾದಕ ರಾಕೇಶ ಕಿಶೋರನನ್ನು ಗಡಿಪಾರು ಮಾಡಬೇಕು. ಅವರ ಆಸ್ತಿಯನ್ನು ಮುಟ್ಟು ಗೋಲು ಹಾಕಬೇಕು.ಮನುವಾದಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದರು.</p>.<p>ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನದಲ್ಲಿ ಎಲ್ಲರೂ ಗೌರವದಿಂದ ಬದುಕಲು ಅವಕಾಶಗಳನ್ನು ಕಲ್ಪಿಸಿದ್ದಾರೆ. ಜಾತ್ಯತೀತ ಕಲ್ಪನೆಯನ್ನು ಸಹಿಸಲಾರದ ಮನುವಾದಿಗಳು, ಆಗಾಗ್ಗೆ ಸಂವಿಧಾನದ ಆಶಯಗಳಿಗೆ ಭಂಗ ತರುವ ತಂತ್ರ ಹೂಡುತ್ತಿರುವುದು ತೀವ್ರ ಖಂಡನೀಯ ಎಂದರು.</p>.<p>ಈ ಸಂದರ್ಭದಲ್ಲಿ ದತ್ತು ಜೋಗಣ್ಣವರ,ನಬೀಸಾಬ ಕಿಲ್ಲೇದಾರ, ಶರಣು ಚಲವಾದಿ, ಮಂಜು ರಂಗಣ್ಣವರ, ಗುರು ಕೆಂಗರಕರ, ಫಾರೂಕ್, ಬಸು ಪೂಜಾರ ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>