ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಆತಂಕ: ಶಿಕ್ಷಕ ಆತ್ಮಹತ್ಯೆ

Last Updated 25 ಮೇ 2021, 3:05 IST
ಅಕ್ಷರ ಗಾತ್ರ

ನರೇಗಲ್:‌ ಇಲ್ಲಿಗೆ ಸಮೀಪದ ಜಕ್ಕಲಿ ಗ್ರಾಮದ ಶಿಕ್ಷಕ‌ರೊಬ್ಬರು ಕೊರೊನಾ ಆತಂಕದಿಂದ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಶಿಕ್ಷಕ ಮಹಾಂತೇಶ ಪ್ರಭುದೇವ ಕುದರಿ (33). ಇವರು ಗದಗ ತಾಲ್ಲೂಕಿನ ಕುರ್ತಕೋಟಿ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕರಾಗಿದ್ದರು.

ಮಹಾಂತೇಶ ಅವರಿಗೆ ವಾರದ ಹಿಂದೆ ಕೆಮ್ಮು, ನೆಗಡಿ, ಜ್ವರ ಕಾಣಿಸಿಕೊಂಡಿತ್ತು. ಮೇ 19ರಂದು ಅವರ ಕೋವಿಡ್‌ ಪರೀಕ್ಷಾ ವರದಿ ಪಾಸಿಟಿವ್‌ ಬಂದಿತ್ತು. ಮೇ 23ರವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದರು.

‘ಭಾನುವಾರ ರಾತ್ರಿ ಊಟ ಮಾಡಿ ಮನೆಯ ಮಹಡಿಯ ಮೇಲೆ ಒಬ್ಬನೇ ಮಲಗಿದ್ದ. ಕೋವಿಡ್‌ ದೃಢಪಟ್ಟಿರುವ ವಿಷಯವನ್ನು ಮನಸ್ಸಿಗೆ ತೆಗೆದುಕೊಂಡಿದ್ದ. ಇದರಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಕುಟುಂಬದವರು ದೂರಿನಲ್ಲಿ ತಿಳಿಸಿದ್ದಾರೆ.

‘ನನ್ನ ಸಾವಿಗೆ ನಾನೇ ಕಾರಣ’ ಎಂಬ ಡೆತ್‌ ನೋಟ್‌ ಮೃತ ಶಿಕ್ಷಕನ ಜೇಬಿನಲ್ಲಿ ಸಿಕ್ಕಿದೆ. ನರೇಗಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT