<p><strong>ಗದಗ</strong>: ವಿವಿಧ ಗ್ರಾಮಗಳು ಹಾಗೂ ಪಟ್ಟಣಗಳಲ್ಲಿ ಪ್ರತಿವರ್ಷ ಜಾತ್ರಾ ಮಹೋತ್ಸವ ನಡೆಯುತ್ತವೆ. ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತರು ಎತ್ತಿನ ಗಾಡಿ ಹಾಗೂ ಕುದುರೆ ಗಾಡಿಗಳನ್ನು ತೆಗೆದುಕೊಂಡು ಜಾತ್ರೆಗೆ ಹೋಗುತ್ತಾರೆ.</p>.<p>ಆದರೆ, ಎತ್ತಿನಗಾಡಿ, ಕುದುರೆಗಾಡಿಗೆ ಕಟ್ಟಿರುವ ಎತ್ತು, ಕುದುರೆ ಹಾಗೂ ಬೇರೆ ಪ್ರಾಣಿಗಳನ್ನು ಜೋಡಿ ಮಾಡಿ ಕಟ್ಟಿಕೊಂಡು ಮತ್ತು ಬರುವ ಔಷಧ ನೀಡಿ ಅವುಗಳಿಗೆ ಮನಬಂದಂತೆ ಹೊಡೆಯುತ್ತಾ ರಸ್ತೆಯಲ್ಲಿ ಓಡಿಸುತ್ತಾ, ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವುದು ಕಂಡುಬಂದಿದೆ.</p>.<p>ಈ ರೀತಿ ಮಾಡುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ 1960 ಸೆಕ್ಷನ್ 11 (1) ಹಾಗೂ ಭಾರತೀಯ ನ್ಯಾಯ ಸಂಹಿತೆ -2023, 285, 291 ಹಾಗೂ 325ನೇ ಪ್ರಕಾರ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ನರಗುಂದ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ತಿರಸ್ಕೃತಗೊಂಡ ಬೆಳೆವಿಮೆ ಪ್ರಸ್ತಾವಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ</p>.<p>ಗದಗ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ಇರುವ ಗದಗ ತಾಲ್ಲೂಕಿನ ಮುಂಗಾರು ಹಂಗಾಮಿನ 27 ಹಾಗೂ ಹಿಂಗಾರು ಹಂಗಾಮಿನ 1,570 ಒಟ್ಟಾರೆ 1,597 ಬೆಳೆವಿಮೆ ಪ್ರಸ್ತಾವನೆಗಳನ್ನು ಅಂತಿಮವಾಗಿ ವಿಮಾ ಸಂಸ್ಥೆಯವರು ತಿರಸ್ಕರಿಸಿರುತ್ತಾರೆ.</p>.<p>ಅಂತಹ ಪ್ರಸ್ತಾವನೆಗಳ ಮಾಹಿತಿಯನ್ನು ಆಯಾ ರೈತ ಸಂಪರ್ಕ ಕೇಂದ್ರಗಳು, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದ್ದು, ರೈತರು ತಮ್ಮ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.</p>.<p>2023-24ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ನಮೂದಾದ ಬೆಳೆಯ ಉತಾರ ಅಥವಾ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಮಾರಾಟ ಮಾಡಿದ್ದರೆ ಅದರ ರಸೀದಿ ಅಥವಾ ಎಪಿಎಂಸಿಯಲ್ಲಿ ಬೆಳೆ ಮಾರಾಟ ಮಾಡಿದ್ದರ ರಸೀದಿ<br />ಫೆ.28ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರು, ಗದಗ ಕಚೇರಿಗೆ ಸಲ್ಲಿಸಬಹುದಾಗಿದೆ.</p>.<p>ಮಾಹಿತಿಗೆ ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರ, ಹುಲಕೋಟಿ, ಬೆಟಗೇರಿ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಗದಗ ಇವರನ್ನು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರವನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ವಿವಿಧ ಗ್ರಾಮಗಳು ಹಾಗೂ ಪಟ್ಟಣಗಳಲ್ಲಿ ಪ್ರತಿವರ್ಷ ಜಾತ್ರಾ ಮಹೋತ್ಸವ ನಡೆಯುತ್ತವೆ. ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತರು ಎತ್ತಿನ ಗಾಡಿ ಹಾಗೂ ಕುದುರೆ ಗಾಡಿಗಳನ್ನು ತೆಗೆದುಕೊಂಡು ಜಾತ್ರೆಗೆ ಹೋಗುತ್ತಾರೆ.</p>.<p>ಆದರೆ, ಎತ್ತಿನಗಾಡಿ, ಕುದುರೆಗಾಡಿಗೆ ಕಟ್ಟಿರುವ ಎತ್ತು, ಕುದುರೆ ಹಾಗೂ ಬೇರೆ ಪ್ರಾಣಿಗಳನ್ನು ಜೋಡಿ ಮಾಡಿ ಕಟ್ಟಿಕೊಂಡು ಮತ್ತು ಬರುವ ಔಷಧ ನೀಡಿ ಅವುಗಳಿಗೆ ಮನಬಂದಂತೆ ಹೊಡೆಯುತ್ತಾ ರಸ್ತೆಯಲ್ಲಿ ಓಡಿಸುತ್ತಾ, ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವುದು ಕಂಡುಬಂದಿದೆ.</p>.<p>ಈ ರೀತಿ ಮಾಡುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ 1960 ಸೆಕ್ಷನ್ 11 (1) ಹಾಗೂ ಭಾರತೀಯ ನ್ಯಾಯ ಸಂಹಿತೆ -2023, 285, 291 ಹಾಗೂ 325ನೇ ಪ್ರಕಾರ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ನರಗುಂದ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ತಿರಸ್ಕೃತಗೊಂಡ ಬೆಳೆವಿಮೆ ಪ್ರಸ್ತಾವಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ</p>.<p>ಗದಗ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ಇರುವ ಗದಗ ತಾಲ್ಲೂಕಿನ ಮುಂಗಾರು ಹಂಗಾಮಿನ 27 ಹಾಗೂ ಹಿಂಗಾರು ಹಂಗಾಮಿನ 1,570 ಒಟ್ಟಾರೆ 1,597 ಬೆಳೆವಿಮೆ ಪ್ರಸ್ತಾವನೆಗಳನ್ನು ಅಂತಿಮವಾಗಿ ವಿಮಾ ಸಂಸ್ಥೆಯವರು ತಿರಸ್ಕರಿಸಿರುತ್ತಾರೆ.</p>.<p>ಅಂತಹ ಪ್ರಸ್ತಾವನೆಗಳ ಮಾಹಿತಿಯನ್ನು ಆಯಾ ರೈತ ಸಂಪರ್ಕ ಕೇಂದ್ರಗಳು, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದ್ದು, ರೈತರು ತಮ್ಮ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.</p>.<p>2023-24ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ನಮೂದಾದ ಬೆಳೆಯ ಉತಾರ ಅಥವಾ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಮಾರಾಟ ಮಾಡಿದ್ದರೆ ಅದರ ರಸೀದಿ ಅಥವಾ ಎಪಿಎಂಸಿಯಲ್ಲಿ ಬೆಳೆ ಮಾರಾಟ ಮಾಡಿದ್ದರ ರಸೀದಿ<br />ಫೆ.28ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರು, ಗದಗ ಕಚೇರಿಗೆ ಸಲ್ಲಿಸಬಹುದಾಗಿದೆ.</p>.<p>ಮಾಹಿತಿಗೆ ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರ, ಹುಲಕೋಟಿ, ಬೆಟಗೇರಿ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಗದಗ ಇವರನ್ನು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರವನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>