ಕೃಷಿ ಇಲಾಖೆ ಈ ತಂತ್ರಜ್ಞಾನದ ಬಗ್ಗೆ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಕ್ಷೇತ್ರ ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ತರಬೇತಿ ನೀಡುತ್ತಿದೆ. ಗಂಗಾಪುರ, ಬನಹಟ್ಟಿಗಳಲ್ಲಿ ಮೊದಲ ಹಂತದಲ್ಲಿ ತರಬೇತಿ ಮುಗಿದಿದೆ. ಈ ತಂತ್ರಜ್ಞಾನ ಬಳಕೆಯಿಂದ ಸಮಯ ಉಳಿತಾಯ, ಕಡಿಮೆ ಖರ್ಚು ಹಾಗೂ ಕುಡಿ ಚಿವುಟಿದ್ದರಿಂದ ಹೆಚ್ಚು ಇಳುವರಿ ಪಡೆಯಲು ಸಾಧ್ಯವಾಗುತ್ತಿರುವುದು ರೈತರಿಗೆ ಸಂತಸ ತಂದಿದೆ.