ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಿದ ಡಾ. ನಾಗನೂರ ಮಾತನಾಡಿ, ‘ದೂರದೃಷ್ಟಿ ವ್ಯಕ್ತಿತ್ವದ ಶಾಸಕ ಎಚ್.ಕೆ.ಪಾಟೀಲ ಅವರು ತಂದೆ ಕೆ.ಎಚ್.ಪಾಟೀಲ ಅವರ ಕನಸುಗಳನ್ನು ನನಸು ಮಾಡುವ ಹಾದಿಯಲ್ಲಿ ನಡೆಯುತ್ತಿದ್ದಾರೆ. ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕಿತರಿಗೆ ಅತ್ಯುತ್ತಮ ಸೇವೆ ಒದಗಿಸಿರುವ ವೈದ್ಯರ ತಂಡ, ಮೂರನೇ ಅಲೆಯ ವೇಳೆಯೂ ಸೇವೆ ನೀಡಲು ಸಿದ್ಧರಿದ್ದಾರೆ’ ಎಂದು ಹೇಳಿದರು.