<p>ಲಕ್ಷ್ಮೇಶ್ವರ: ಕಳೆದ ಸೋಮವಾರ ಸುರಿದ ಭಾರಿ ಮಳೆಗೆ ಗೊಜನೂರು–ಯಳವತ್ತಿ ರಸ್ತೆಯಲ್ಲಿನ ನೀರು ಸರಿಯಾಗಿ ಹರಿದುಹೋಗದೆ ರೈತರ ಹೊಲಕ್ಕೆ ನುಗ್ಗಿತ್ತು. ಇದರಿಂದಾಗಿ ಹತ್ತಾರು ಎಕರೆ ಜಮೀನಿನ ಮಣ್ಣು ಕೊಚ್ಚಿಕೊಂಡುಹೋಗಿ ರೈತರಿಗೆ ನಷ್ಟ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಶಾಸಕ ಡಾ.ಚಂದ್ರು ಲಮಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಮಳೆ ನೀರು ಹೊಲಗಳಿಗೆ ನುಗ್ಗದಂತೆ ವ್ಯವಸ್ಥೆ ಮಾಡಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು. ರೈತರು ದಾರಿಯ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಶಾಸಕರಿಗೆ ಮನವಿ ಮಾಡಿದ್ದರು.</p>.<p>ಗೊಜನೂರು–ಯಳವತ್ತಿ ರಸ್ತೆಯನ್ನು ಡಾಂಬರೀಕರಣ ಮಾಡುವ ಸಂದರ್ಭದಲ್ಲಿ ಕೆಲ ರೈತರು ತಕರಾರು ತೆಗೆದಿದ್ದರಿಂದ 200 ಮೀಟರ್ ರಸ್ತೆ ಹಾಗೆಯೇ ಉಳಿದುಕೊಂಡಿದೆ. ಈ ಮಣ್ಣು ರಸ್ತೆಯೇ ಈಗ ಸಮಸ್ಯೆಗೆ ಕಾರಣವಾಗಿದೆ. ಈ ಮೊದಲು ಹರಿಯುತ್ತಿದ್ದ ದಿಕ್ಕಿಗೆ ಮಳೆ ನೀರು ಹರಿಯದೆ ಬೇರೆ ದಿಕ್ಕಿಗೆ ಹರಿದ ಪರಿಣಾಮ ಹೊಲಗಳಿಗೆ ನೀರು ನುಗ್ಗಿತ್ತು.</p>.<p>ತಹಶೀಲ್ದಾರ ವಾಸುದೇವಸ್ವಾಮಿ, ಕಂದಾಯ ನಿರೀಕ್ಷಕ ಬಿ.ಎಂ. ಕಾತ್ರಾಳ ಮತ್ತು ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಷ್ಮೇಶ್ವರ: ಕಳೆದ ಸೋಮವಾರ ಸುರಿದ ಭಾರಿ ಮಳೆಗೆ ಗೊಜನೂರು–ಯಳವತ್ತಿ ರಸ್ತೆಯಲ್ಲಿನ ನೀರು ಸರಿಯಾಗಿ ಹರಿದುಹೋಗದೆ ರೈತರ ಹೊಲಕ್ಕೆ ನುಗ್ಗಿತ್ತು. ಇದರಿಂದಾಗಿ ಹತ್ತಾರು ಎಕರೆ ಜಮೀನಿನ ಮಣ್ಣು ಕೊಚ್ಚಿಕೊಂಡುಹೋಗಿ ರೈತರಿಗೆ ನಷ್ಟ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಶಾಸಕ ಡಾ.ಚಂದ್ರು ಲಮಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಮಳೆ ನೀರು ಹೊಲಗಳಿಗೆ ನುಗ್ಗದಂತೆ ವ್ಯವಸ್ಥೆ ಮಾಡಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು. ರೈತರು ದಾರಿಯ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಶಾಸಕರಿಗೆ ಮನವಿ ಮಾಡಿದ್ದರು.</p>.<p>ಗೊಜನೂರು–ಯಳವತ್ತಿ ರಸ್ತೆಯನ್ನು ಡಾಂಬರೀಕರಣ ಮಾಡುವ ಸಂದರ್ಭದಲ್ಲಿ ಕೆಲ ರೈತರು ತಕರಾರು ತೆಗೆದಿದ್ದರಿಂದ 200 ಮೀಟರ್ ರಸ್ತೆ ಹಾಗೆಯೇ ಉಳಿದುಕೊಂಡಿದೆ. ಈ ಮಣ್ಣು ರಸ್ತೆಯೇ ಈಗ ಸಮಸ್ಯೆಗೆ ಕಾರಣವಾಗಿದೆ. ಈ ಮೊದಲು ಹರಿಯುತ್ತಿದ್ದ ದಿಕ್ಕಿಗೆ ಮಳೆ ನೀರು ಹರಿಯದೆ ಬೇರೆ ದಿಕ್ಕಿಗೆ ಹರಿದ ಪರಿಣಾಮ ಹೊಲಗಳಿಗೆ ನೀರು ನುಗ್ಗಿತ್ತು.</p>.<p>ತಹಶೀಲ್ದಾರ ವಾಸುದೇವಸ್ವಾಮಿ, ಕಂದಾಯ ನಿರೀಕ್ಷಕ ಬಿ.ಎಂ. ಕಾತ್ರಾಳ ಮತ್ತು ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>