<p><strong>ರೋಣ:</strong> ತಾಲ್ಲೂಕಿನ ಸವಡಿ ಗ್ರಾಮದಿಂದ ಯರೇಸಿಗಮ್ಮ ದೇವಸ್ಥಾನಕ್ಕೆ ತೆರಳುವ ಮುಖ್ಯ ರಸ್ತೆಗೆ ಅಡ್ಡಲಾಗಿ ಕಂಟಿ ಬಸಪ್ಪನ ಹಳ್ಳ ಹರಿಯುತ್ತಿದ್ದು, ಸಮರ್ಪಕ ಸೇತುವೆ ಇಲ್ಲದ ಕಾರಣ ಜನರ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ.</p>.<p>ಯರೇಸಿಗಮ್ಮ ದೇವಸ್ಥಾನಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಎರಡು ಹಳ್ಳಗಳು ಹರಿಯುತ್ತಿದ್ದು ದೇವತಿ ಹಳ್ಳಕ್ಕೆ ಸೇತುವೆಯನ್ನು ಈಗಾಗಲೇ ನಿರ್ಮಿಸಲಾಗಿದೆ. ಆದರೆ, ಕಂಟಿ <br> ಬಸಪ್ಪನ ಹಳ್ಳಕ್ಕೆ ಸೇತುವೆ ನಿರ್ಮಾಣವಾಗಿಲ್ಲ. ಹಳ್ಳದ ರಸ್ತೆಯೂ ಸಹ ಸಂಪೂರ್ಣ ಹಾಳಾಗಿದೆ. ಮಳೆಗಾಲದ ಸಂದರ್ಭದಲ್ಲಿ ಜನರ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಈ ಭಾಗದಲ್ಲಿ ರೈತರ ಜಮೀನುಗಳಿದ್ದು ಮಳೆಗಾಲದ ಸಂದರ್ಭದಲ್ಲಿ ಹಳ್ಳ ತುಂಬಿ ಬಂದರೆ ಕೃಷಿ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತಿದೆ. </p>.<p><strong>ಮನವಿಗೆ ಸ್ಪಂದಿಸದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು:</strong></p>.<p>ಹಳ್ಳಕ್ಕೆ ಸಮರ್ಪಕ ಸೇತುವೆ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಮಳೆಗಾಲದಲ್ಲಿ ಜಮೀನುಗಳಿಗೆ ತೆರಳಲು ಹಾಗೂ ಪ್ರತಿ ತಿಂಗಳು ಅಮಾವಾಸ್ಯೆಯಂದು ಭಕ್ತರು ದೇವಸ್ಥಾನಕ್ಕೆ ತೆರಳಲು ಸಮಸ್ಯೆ ಉಂಟಾಗುತ್ತಿದೆ. ಸೇತುವೆ ನಿರ್ಮಾಣವಾದರೇ ಸುಗಮ ಸಂಚಾರಕ್ಕೆ ಉಪಯುಕ್ತವಾಗಲಿದೆ ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.</p>.<div><blockquote>ಮಳೆಗಾಲದಲ್ಲಿ ಹಳ್ಳ ತುಂಬಿ ಬಂದರೆ ಸಂಚಾರ ಮಾರ್ಗ ಸ್ಥಗಿತಗೊಳ್ಳಲಿದೆ. ಹೆಚ್ಚು ಮಳೆಯಾದಾಗ ಹಳ್ಳದಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು ದೇವಸ್ಥಾನಕ್ಕೆ ತೆರಳಲು ಸಹ ತೊಂದರೆ ಉಂಟಾಗುತ್ತಿದೆ.</blockquote><span class="attribution">ಚನ್ನಮ್ಮಲ್ಲಪ್ಪ ಗದಗ ಸವಡಿ ಗ್ರಾಮಸ್ಥ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ:</strong> ತಾಲ್ಲೂಕಿನ ಸವಡಿ ಗ್ರಾಮದಿಂದ ಯರೇಸಿಗಮ್ಮ ದೇವಸ್ಥಾನಕ್ಕೆ ತೆರಳುವ ಮುಖ್ಯ ರಸ್ತೆಗೆ ಅಡ್ಡಲಾಗಿ ಕಂಟಿ ಬಸಪ್ಪನ ಹಳ್ಳ ಹರಿಯುತ್ತಿದ್ದು, ಸಮರ್ಪಕ ಸೇತುವೆ ಇಲ್ಲದ ಕಾರಣ ಜನರ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ.</p>.<p>ಯರೇಸಿಗಮ್ಮ ದೇವಸ್ಥಾನಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಎರಡು ಹಳ್ಳಗಳು ಹರಿಯುತ್ತಿದ್ದು ದೇವತಿ ಹಳ್ಳಕ್ಕೆ ಸೇತುವೆಯನ್ನು ಈಗಾಗಲೇ ನಿರ್ಮಿಸಲಾಗಿದೆ. ಆದರೆ, ಕಂಟಿ <br> ಬಸಪ್ಪನ ಹಳ್ಳಕ್ಕೆ ಸೇತುವೆ ನಿರ್ಮಾಣವಾಗಿಲ್ಲ. ಹಳ್ಳದ ರಸ್ತೆಯೂ ಸಹ ಸಂಪೂರ್ಣ ಹಾಳಾಗಿದೆ. ಮಳೆಗಾಲದ ಸಂದರ್ಭದಲ್ಲಿ ಜನರ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಈ ಭಾಗದಲ್ಲಿ ರೈತರ ಜಮೀನುಗಳಿದ್ದು ಮಳೆಗಾಲದ ಸಂದರ್ಭದಲ್ಲಿ ಹಳ್ಳ ತುಂಬಿ ಬಂದರೆ ಕೃಷಿ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತಿದೆ. </p>.<p><strong>ಮನವಿಗೆ ಸ್ಪಂದಿಸದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು:</strong></p>.<p>ಹಳ್ಳಕ್ಕೆ ಸಮರ್ಪಕ ಸೇತುವೆ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಮಳೆಗಾಲದಲ್ಲಿ ಜಮೀನುಗಳಿಗೆ ತೆರಳಲು ಹಾಗೂ ಪ್ರತಿ ತಿಂಗಳು ಅಮಾವಾಸ್ಯೆಯಂದು ಭಕ್ತರು ದೇವಸ್ಥಾನಕ್ಕೆ ತೆರಳಲು ಸಮಸ್ಯೆ ಉಂಟಾಗುತ್ತಿದೆ. ಸೇತುವೆ ನಿರ್ಮಾಣವಾದರೇ ಸುಗಮ ಸಂಚಾರಕ್ಕೆ ಉಪಯುಕ್ತವಾಗಲಿದೆ ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.</p>.<div><blockquote>ಮಳೆಗಾಲದಲ್ಲಿ ಹಳ್ಳ ತುಂಬಿ ಬಂದರೆ ಸಂಚಾರ ಮಾರ್ಗ ಸ್ಥಗಿತಗೊಳ್ಳಲಿದೆ. ಹೆಚ್ಚು ಮಳೆಯಾದಾಗ ಹಳ್ಳದಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು ದೇವಸ್ಥಾನಕ್ಕೆ ತೆರಳಲು ಸಹ ತೊಂದರೆ ಉಂಟಾಗುತ್ತಿದೆ.</blockquote><span class="attribution">ಚನ್ನಮ್ಮಲ್ಲಪ್ಪ ಗದಗ ಸವಡಿ ಗ್ರಾಮಸ್ಥ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>