<p><strong>ಗದಗ</strong>: ‘ದೇಶದ 31 ರಾಜ್ಯಗಳಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪೂರ್ಣಗೊಳ್ಳುವ ವೇಳೆಗೆ, 20 ಕೋಟಿ ಜನರು ಪಟ್ಟಿಯಿಂದ ಹೊರಗುಳಿಯುತ್ತಾರೆ’ ಎಂದು ಚಿಂತಕ ಶಿವಸುಂದರ ಆತಂಕ ವ್ಯಕ್ತಪಡಿಸಿದರು. </p>.<p>ಮೇ ಸಾಹಿತ್ಯ ಮೇಳ, ಲಡಾಯಿ ಪ್ರಕಾಶನ ಹಾಗೂ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ನಗರದಲ್ಲಿ ಶುಕ್ರವಾರ ನಡೆದ ‘ಎಸ್ಐಆರ್: ಪೌರತ್ವದ ಪ್ರಶ್ನೆ– ಪ್ರಭುತ್ವದ ಹುನ್ನಾರಗಳು’ ಸಂವಾದ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಐಆರ್ನಲ್ಲಿರುವ ವಿಶೇಷ ಎಂಬ ಪದದಲ್ಲೇ ಅತಿದೊಡ್ಡ ಹುನ್ನಾರವಿದೆ. ಇದು ಕೇವಲ ಮತಪಟ್ಟಿಯ ವಿಶೇಷ ಪರಿಷ್ಕರಣೆ ಅಲ್ಲ. ಈ ದೇಶದ ನಾಗರಿಕರ ನಾಗರಿಕತ್ವದ ಪರಿಷ್ಕರಣೆ’ ಎಂದರು.</p>.<p>‘ಎಸ್ಐಆರ್ ಮೂಲಕ ಪ್ರಧಾನಿ ಮೋದಿ ಅವರು ದೇಶದ 140 ಕೋಟಿ ಜನರ ಮೇಲೆ ಆರೋಪ ಪಟ್ಟಿ ಹಾಕಿದ್ದಾರೆ. ಅಂದರೆ, ಈಗ ಇರುವವರೆಲ್ಲರೂ ಈ ದೇಶದ ನಾಗರಿಕರಲ್ಲ. ಅವರು ಕೇಳುವ ದಾಖಲೆಗಳನ್ನು ಒದಗಿಸಿ, ಭಾರತೀಯರು ಎಂದು ಸಾಬೀತು ಪಡಿಸಬೇಕೆಂದು ಅಗ್ನಿಪರೀಕ್ಷೆ ಇಟ್ಟಿದ್ದಾರೆ’ ಎಂದು ಹೇಳಿದರು.</p>.<p>‘12 ರಾಜ್ಯಗಳಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಎಸ್ಐಆರ್ ಪೂರ್ವ ಹಂತದಲ್ಲಿ ಮ್ಯಾಚಿಂಗ್ ಮತ್ತು ಮ್ಯಾಪಿಂಗ್ ನಡೆದಿದೆ. ಇಲ್ಲಿ ದಾಖಲೆಗಳು ಹೊಂದಾಣಿಕೆಯಾದರೆ ಸಮಸ್ಯೆ ಇಲ್ಲ. ಇಲ್ಲವಾದರೆ ದಾಖಲೆಗಳು ಒದಗಿಸಿಲ್ಲ ಎಂಬ ಕಾರಣಕ್ಕೆ ಈ ಹಂತದಲ್ಲಿ ಈಗಾಗಲೇ ಕೋಟ್ಯಂತರ ಜನರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಅವರಲ್ಲಿ ಮುಸ್ಲಿಮರು, ದಲಿತರು, ಆದಿವಾಸಿಗಳು, ಮಹಿಳೆಯರು ಹೆಚ್ಚಿದ್ದಾರೆ’ ಎಂದರು.</p>.<p>‘ದೇಶದ ನಾಗರಿಕ ಅಲ್ಲ ಎಂದು ಘೋಷಣೆಯಾದರೆ ವ್ಯಕ್ತಿ ಬದುಕನ್ನೇ ಕಳೆದುಕೊಳ್ಳುತ್ತಾನೆ. ಮಕ್ಕಳನ್ನು ಶಾಲೆಗೆ ಸೇರಿಸಲಾಗದು. ಸ್ವಂತ ಉದ್ಯೋಗ, ಕಷ್ಟಕಾಲದಲ್ಲಿ ಪೊಲೀಸರಿಗೆ ದೂರು ಕೊಡುವ ಅವಕಾಶವನ್ನೂ ಕಳೆದುಕೊಳ್ಳುತ್ತಾನೆ’ ಎಂದರು.</p>.<p>‘ದೇಶದ ಸಂವಿಧಾನವನ್ನು ಆರ್ಎಸ್ಎಸ್ ವಿರೋಧಿಸುತ್ತದೆ. ಅವರಿಗೆ ಹಿಂದೂ ರಾಜ್ಯ ಕಟ್ಟಲು ಸಂವಿಧಾನವೇ ಅಡ್ಡಿಯಾಗಿದೆ. ಅದಕ್ಕಾಗಿ ಎಸ್ಐಆರ್ ಅಸ್ತ್ರ ಹಿಡಿದಿದ್ದಾರೆ. 50 ವರ್ಷ ಆಡಳಿತ ಮಾಡಬೇಕು, ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಚುನಾವಣಾ ಪ್ರಕ್ರಿಯೆಯನ್ನು ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂಬುದು ಉದ್ದೇಶವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ದೇಶದ 31 ರಾಜ್ಯಗಳಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪೂರ್ಣಗೊಳ್ಳುವ ವೇಳೆಗೆ, 20 ಕೋಟಿ ಜನರು ಪಟ್ಟಿಯಿಂದ ಹೊರಗುಳಿಯುತ್ತಾರೆ’ ಎಂದು ಚಿಂತಕ ಶಿವಸುಂದರ ಆತಂಕ ವ್ಯಕ್ತಪಡಿಸಿದರು. </p>.<p>ಮೇ ಸಾಹಿತ್ಯ ಮೇಳ, ಲಡಾಯಿ ಪ್ರಕಾಶನ ಹಾಗೂ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ನಗರದಲ್ಲಿ ಶುಕ್ರವಾರ ನಡೆದ ‘ಎಸ್ಐಆರ್: ಪೌರತ್ವದ ಪ್ರಶ್ನೆ– ಪ್ರಭುತ್ವದ ಹುನ್ನಾರಗಳು’ ಸಂವಾದ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಐಆರ್ನಲ್ಲಿರುವ ವಿಶೇಷ ಎಂಬ ಪದದಲ್ಲೇ ಅತಿದೊಡ್ಡ ಹುನ್ನಾರವಿದೆ. ಇದು ಕೇವಲ ಮತಪಟ್ಟಿಯ ವಿಶೇಷ ಪರಿಷ್ಕರಣೆ ಅಲ್ಲ. ಈ ದೇಶದ ನಾಗರಿಕರ ನಾಗರಿಕತ್ವದ ಪರಿಷ್ಕರಣೆ’ ಎಂದರು.</p>.<p>‘ಎಸ್ಐಆರ್ ಮೂಲಕ ಪ್ರಧಾನಿ ಮೋದಿ ಅವರು ದೇಶದ 140 ಕೋಟಿ ಜನರ ಮೇಲೆ ಆರೋಪ ಪಟ್ಟಿ ಹಾಕಿದ್ದಾರೆ. ಅಂದರೆ, ಈಗ ಇರುವವರೆಲ್ಲರೂ ಈ ದೇಶದ ನಾಗರಿಕರಲ್ಲ. ಅವರು ಕೇಳುವ ದಾಖಲೆಗಳನ್ನು ಒದಗಿಸಿ, ಭಾರತೀಯರು ಎಂದು ಸಾಬೀತು ಪಡಿಸಬೇಕೆಂದು ಅಗ್ನಿಪರೀಕ್ಷೆ ಇಟ್ಟಿದ್ದಾರೆ’ ಎಂದು ಹೇಳಿದರು.</p>.<p>‘12 ರಾಜ್ಯಗಳಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಎಸ್ಐಆರ್ ಪೂರ್ವ ಹಂತದಲ್ಲಿ ಮ್ಯಾಚಿಂಗ್ ಮತ್ತು ಮ್ಯಾಪಿಂಗ್ ನಡೆದಿದೆ. ಇಲ್ಲಿ ದಾಖಲೆಗಳು ಹೊಂದಾಣಿಕೆಯಾದರೆ ಸಮಸ್ಯೆ ಇಲ್ಲ. ಇಲ್ಲವಾದರೆ ದಾಖಲೆಗಳು ಒದಗಿಸಿಲ್ಲ ಎಂಬ ಕಾರಣಕ್ಕೆ ಈ ಹಂತದಲ್ಲಿ ಈಗಾಗಲೇ ಕೋಟ್ಯಂತರ ಜನರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಅವರಲ್ಲಿ ಮುಸ್ಲಿಮರು, ದಲಿತರು, ಆದಿವಾಸಿಗಳು, ಮಹಿಳೆಯರು ಹೆಚ್ಚಿದ್ದಾರೆ’ ಎಂದರು.</p>.<p>‘ದೇಶದ ನಾಗರಿಕ ಅಲ್ಲ ಎಂದು ಘೋಷಣೆಯಾದರೆ ವ್ಯಕ್ತಿ ಬದುಕನ್ನೇ ಕಳೆದುಕೊಳ್ಳುತ್ತಾನೆ. ಮಕ್ಕಳನ್ನು ಶಾಲೆಗೆ ಸೇರಿಸಲಾಗದು. ಸ್ವಂತ ಉದ್ಯೋಗ, ಕಷ್ಟಕಾಲದಲ್ಲಿ ಪೊಲೀಸರಿಗೆ ದೂರು ಕೊಡುವ ಅವಕಾಶವನ್ನೂ ಕಳೆದುಕೊಳ್ಳುತ್ತಾನೆ’ ಎಂದರು.</p>.<p>‘ದೇಶದ ಸಂವಿಧಾನವನ್ನು ಆರ್ಎಸ್ಎಸ್ ವಿರೋಧಿಸುತ್ತದೆ. ಅವರಿಗೆ ಹಿಂದೂ ರಾಜ್ಯ ಕಟ್ಟಲು ಸಂವಿಧಾನವೇ ಅಡ್ಡಿಯಾಗಿದೆ. ಅದಕ್ಕಾಗಿ ಎಸ್ಐಆರ್ ಅಸ್ತ್ರ ಹಿಡಿದಿದ್ದಾರೆ. 50 ವರ್ಷ ಆಡಳಿತ ಮಾಡಬೇಕು, ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಚುನಾವಣಾ ಪ್ರಕ್ರಿಯೆಯನ್ನು ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂಬುದು ಉದ್ದೇಶವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>