<p><strong>ಗದಗ: </strong>‘ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಭಾನುವಾರ ಬೆಂಗಳೂರಿನ ತುಮಕೂರು ರಸ್ತೆಯ ಮಾದಾವರದಲ್ಲಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ಸಮಾವೇಶ ನಡೆಯಲಿದೆ’ ಎಂದು ಹಾಲುಮತ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಹೇಳಿದರು.</p>.<p>2ಎಗೆ ಪಂಚಮಸಾಲಿ ಸಮುದಾಯ ಸೇರಿಸುವ ಮುನ್ನ ಹಾಲಿ ಮೀಸಲಾತಿ ಶೇಕಡಾವಾರು ಪ್ರಮಾಣ ಹೆಚ್ಚಿಸಿ, ಸೇರ್ಪಡೆ ಮಾಡಿ. ಜೊತೆಗೆ ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿ, ಕುರುಬರನ್ನು ಆ ಪಟ್ಟಿಗೆ ಸೇರಿಸಲಿ ಎಂದು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಉತ್ತರ ಕರ್ನಾಟಕದದಿಂದ ಕನಿಷ್ಠ ಅಪಾರ ಜನ ಭಾಗವಹಿಸುವ ನಿರೀಕ್ಷೆ ಇದೆ. ಈ ಸಮಾವೇಶವು ಪಕ್ಷಾತೀತವಾಗಿದ್ದು, ಸಮಾಜದ ಸಹಕಾರದಿಂದ ಅಧಿಕಾರಕ್ಕೆ ಬಂದ ಸಮುದಾಯದ ಎಲ್ಲ ನಾಯಕರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅವರು ಭಾಗವಹಿಸದಿದ್ದರೆ ಮುಂದಿನ ದಿನಗಳಲ್ಲಿ ಪರ್ಯಾಯ ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ಯೋಚಿಸಲಾಗುವುದು’ ಎಂದು ತಿಳಿಸಿದರು.</p>.<p>ಹಾಲುಮತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಲ್ಹಾದ ಹೊಸಳ್ಳಿ ಮಾತನಾಡಿ, ಬೆಂಗಳೂರಿನ ಸಮಾವೇಶಕ್ಕೆ ಗದಗ ಜಿಲ್ಲೆಯಿಂದ ಸಾವಿರಾರು ಜನ ಕುರುಬರು ಸ್ವಂತ ಖರ್ಚಿನಲ್ಲಿ ಸಮಾವೇಶದಲ್ಲಿ ಭಾಗವಹಿಸಿ, ಹೋರಾಟಕ್ಕೆ ಶಕ್ತಿ ತುಂಬಲಿದ್ದಾರೆ ಎಂದು ಹೇಳಿದರು.</p>.<p>ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ರವಿ ದಂಡಿನ ಮಾತನಾಡಿ, ‘ಎಸ್ಟಿ ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳುವವರ ಪ್ರಸಾದಕ್ಕಾಗಿ ಗದುಗಿನಿಂದ 50 ಸಾವಿರ ರೊಟ್ಟಿಗಳು ಬೆಂಗಳೂರಿಗೆ ಹೋಗಲಿವೆ. ಎಸ್ಟಿಗೆ ಸೇರಿಸುವಂತೆ ಕುರುಬರ ಈ ಹೋರಾಟ ಹೊಸದಲ್ಲ. ಈ ಬಗ್ಗೆ ಹಿಂದೆ ದೇವರಾಜ ಅರಸು ಅವರ ಮೂಲಕ ಕೇಂದ್ರಕ್ಕೆ ಶಿಫಾರಸು ಹೋಗಿತ್ತು. ಆದರೆ, ರಾಜಕೀಯ ನಾಯಕರ ಇಚ್ಛಾಶಕ್ತಿ ಕೊರತೆಯಿಂದ ಇದು ಆಗಲಿಲ್ಲ’ ಎಂದರು.</p>.<p>ಹಾಲುಮತ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಮುತ್ತು ಜಡಿ, ಸತೀಶ ಗಿಡ್ಡಹನಮಣ್ಣವರ, ಸೋಮನಗೌಡ ಪಾಟೀಲ, ಉಮೇಶ ಪೂಜಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>‘ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಭಾನುವಾರ ಬೆಂಗಳೂರಿನ ತುಮಕೂರು ರಸ್ತೆಯ ಮಾದಾವರದಲ್ಲಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ಸಮಾವೇಶ ನಡೆಯಲಿದೆ’ ಎಂದು ಹಾಲುಮತ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಹೇಳಿದರು.</p>.<p>2ಎಗೆ ಪಂಚಮಸಾಲಿ ಸಮುದಾಯ ಸೇರಿಸುವ ಮುನ್ನ ಹಾಲಿ ಮೀಸಲಾತಿ ಶೇಕಡಾವಾರು ಪ್ರಮಾಣ ಹೆಚ್ಚಿಸಿ, ಸೇರ್ಪಡೆ ಮಾಡಿ. ಜೊತೆಗೆ ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿ, ಕುರುಬರನ್ನು ಆ ಪಟ್ಟಿಗೆ ಸೇರಿಸಲಿ ಎಂದು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಉತ್ತರ ಕರ್ನಾಟಕದದಿಂದ ಕನಿಷ್ಠ ಅಪಾರ ಜನ ಭಾಗವಹಿಸುವ ನಿರೀಕ್ಷೆ ಇದೆ. ಈ ಸಮಾವೇಶವು ಪಕ್ಷಾತೀತವಾಗಿದ್ದು, ಸಮಾಜದ ಸಹಕಾರದಿಂದ ಅಧಿಕಾರಕ್ಕೆ ಬಂದ ಸಮುದಾಯದ ಎಲ್ಲ ನಾಯಕರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅವರು ಭಾಗವಹಿಸದಿದ್ದರೆ ಮುಂದಿನ ದಿನಗಳಲ್ಲಿ ಪರ್ಯಾಯ ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ಯೋಚಿಸಲಾಗುವುದು’ ಎಂದು ತಿಳಿಸಿದರು.</p>.<p>ಹಾಲುಮತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಲ್ಹಾದ ಹೊಸಳ್ಳಿ ಮಾತನಾಡಿ, ಬೆಂಗಳೂರಿನ ಸಮಾವೇಶಕ್ಕೆ ಗದಗ ಜಿಲ್ಲೆಯಿಂದ ಸಾವಿರಾರು ಜನ ಕುರುಬರು ಸ್ವಂತ ಖರ್ಚಿನಲ್ಲಿ ಸಮಾವೇಶದಲ್ಲಿ ಭಾಗವಹಿಸಿ, ಹೋರಾಟಕ್ಕೆ ಶಕ್ತಿ ತುಂಬಲಿದ್ದಾರೆ ಎಂದು ಹೇಳಿದರು.</p>.<p>ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ರವಿ ದಂಡಿನ ಮಾತನಾಡಿ, ‘ಎಸ್ಟಿ ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳುವವರ ಪ್ರಸಾದಕ್ಕಾಗಿ ಗದುಗಿನಿಂದ 50 ಸಾವಿರ ರೊಟ್ಟಿಗಳು ಬೆಂಗಳೂರಿಗೆ ಹೋಗಲಿವೆ. ಎಸ್ಟಿಗೆ ಸೇರಿಸುವಂತೆ ಕುರುಬರ ಈ ಹೋರಾಟ ಹೊಸದಲ್ಲ. ಈ ಬಗ್ಗೆ ಹಿಂದೆ ದೇವರಾಜ ಅರಸು ಅವರ ಮೂಲಕ ಕೇಂದ್ರಕ್ಕೆ ಶಿಫಾರಸು ಹೋಗಿತ್ತು. ಆದರೆ, ರಾಜಕೀಯ ನಾಯಕರ ಇಚ್ಛಾಶಕ್ತಿ ಕೊರತೆಯಿಂದ ಇದು ಆಗಲಿಲ್ಲ’ ಎಂದರು.</p>.<p>ಹಾಲುಮತ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಮುತ್ತು ಜಡಿ, ಸತೀಶ ಗಿಡ್ಡಹನಮಣ್ಣವರ, ಸೋಮನಗೌಡ ಪಾಟೀಲ, ಉಮೇಶ ಪೂಜಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>