‘ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ನಡೆದಿರುವ ಹೋರಾಟವು ಜೈನ, ಬೌದ್ಧ, ಸಿಖ್ ಧರ್ಮೀಯರಂತೆ ಲಿಂಗಾಯತರ ಅಸ್ಮಿತೆಯ ಹೋರಾಟವಾಗಿದೆ. ಭಾರತದ ಪ್ರಥಮ ವಿಚಾರವಾದಿ ಎನಿಸಿದ, ಇಡೀ ವಿಶ್ವಕ್ಕೆ ಸಂಸತ್ತಿನ ಪರಿಕಲ್ಪನೆ ಪರಿಚಯಿಸಿದ ಮಹಾನ್ ಮಾನವತಾವಾದಿ ಎನಿಸಿದ ಬಸವಣ್ಣನವರು ಸ್ಥಾಪಿಸಿದ, ಲಿಂಗಾಯತ ಧರ್ಮವು ತಾತ್ವಿಕವಾಗಿ, ಸಾಮಾಜಿಕವಾಗಿ ಹಿಂದೂ ಧರ್ಮಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿದೆ. ಈ ಧರ್ಮವನ್ನು ಸ್ವತಂತ್ರ ಧರ್ಮವೆಂದು ಮಾನ್ಯ ಮಾಡುವುದರಿಂದ ಈ ಧರ್ಮದ ವ್ಯಾಪ್ತಿಯಲ್ಲಿ ಬರುವ ಯಾವುದೇ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ’ಎಂದು ಸ್ವಾಮೀಜಿ ಹೇಳಿದ್ದಾರೆ.