ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಂಟದಾರ್ಯ ಜಾತ್ರಾ ಮಹೋತ್ಸವ ರದ್ದು: ಸಿದ್ಧರಾಮ ಶ್ರೀ

Last Updated 24 ಮಾರ್ಚ್ 2020, 16:13 IST
ಅಕ್ಷರ ಗಾತ್ರ

ಗದಗ: ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಅಂದಾಜು 5 ಶತಮಾನಗಳಿಂದ ನಡೆದುಕೊಂಡು ಬಂದಿರುವ ಎಡೆಯೂರು ತೋಂಟದ ಸಿದ್ಧಲಿಂಗ ಶಿವಯೋಗಿಗಳ ಜಾತ್ರಾ ಮಹೋತ್ಸವವವನ್ನು ಈ ಬಾರಿ ರದ್ದುಗೊಳಿಸಲಾಗಿದೆ ಎಂದು ಗದುಗಿನ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದ್ದಾರೆ.

‘ಕೊರೊನಾ ಸೋಂಕು ಇಂದು ಜಗತ್ತನ್ನು ತಲ್ಲಣಗೊಳಿಸಿದೆ. ಇದು ಭೀಕರ ಸಾಂಕ್ರಾಮಿಕ ರೋಗವಾಗಿದೆ. ದೇಶದಾದ್ಯಂತ ಈ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜನರು ಗುಂಪು ಕೂಡುವುದನ್ನು ಸರ್ಕಾರ ನಿಷೇಧಿಸಿವೆ. ಜನರು ಜಾತ್ರಾ ಮಹೋತ್ಸವದಲ್ಲಿ ಗುಂಪುಗೂಡಬಾರದು, ಈ ಸೋಂಕು ಜನರಿಗೆ ಹರಡಬಾರದು ಎಂಬ ಕಾರಣಕ್ಕೆ ರಥೋತ್ಸವ ಸೇರಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ’ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ವರ್ಷದ ರಥೋತ್ಸವ ಕಾರ್ಯಕ್ರಮಗಳು ಏಪ್ರೀಲ್ 7ರಿಂದ 10ರ ವರೆಗೆ ನಿಗದಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT