ನ.12ರಂದು ಬೆಳಿಗ್ಗೆ 10ಗಂಟೆಗೆ,ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಶಿವಮೊಗ್ಗದ ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ, ನೂತನ ಶ್ರೀಗಳ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ‘ಸಿದ್ಧರಾಮ ಸ್ವಾಮೀಜಿ ಅವರು ಕನ್ನಡಕ್ಕೆ ಅನುವಾದಿಸಿರುವ ಭಾರತೀಯ ತತ್ವಶಾಸ್ತ್ರದ ವಿಮರ್ಶಾತ್ಮಕ ಅಧ್ಯಯನ ಗ್ರಂಥವು ಲೋಕಾರ್ಪಣೆಗೊಳ್ಳಲಿದೆ’ಎಂದು ಮಠದ ಆಡಳಿತಾಧಿಕಾರಿ ಎಸ್.ಎಸ್ ಪಟ್ಟಣಶೆಟ್ಟಿ, ಪ್ರಾಚಾರ್ಯ ಎಸ್.ಎಸ್ ಹರ್ಲಾಪೂರ ತಿಳಿಸಿದರು.