ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗೈಕ್ಯ ಸಿದ್ಧಲಿಂಗ ಶ್ರೀಗಳ ಜನ್ಮದಿನವನ್ನು ಭಾವೈಕ್ಯತಾ ದಿನವಾಗಿ ಆಚರಣೆ: ಸಿಎಂ

Last Updated 15 ಏಪ್ರಿಲ್ 2022, 10:09 IST
ಅಕ್ಷರ ಗಾತ್ರ

ಗದಗ: ತೋಂಟದಾರ್ಯ ಮಠದ ಲಿಂಗೈಕ್ಯ ಡಾ. ಸಿದ್ದಲಿಂಗ ಸ್ವಾಮೀಜಿ ಜನ್ಮದಿನವಾದ ಫೆಬ್ರುವರಿ 21 ಅನ್ನು ಭಾವೈಕ್ಯತಾ ದಿನವನ್ನಾಗಿ ಆಚರಿಸಲು ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗದುಗಿನ ತೋಂಟದಾರ್ಯ ಮಠದಲ್ಲಿ ನಿರ್ಮಾಣಗೊಂಡಿರುವ ತ್ರಿವಿಧ ದಾಸೋಹಿ ಲಿಂಗೈಕ್ಯ ಸಿದ್ಧಲಿಂಗ ಸ್ವಾಮೀಜಿ ಐಕ್ಯಮಂಟಪವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಶ್ರೀಗಳ ಐಕ್ಯ ಮಂಟಪ‌ವನ್ನು ಲೋಕಾರ್ಪಣೆ‌ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಪುಣ್ಯ. ನಾನು ಮುಖ್ಯಮಮತ್ರಿಯಾಗಿ ಇಲ್ಲಿಗೆ ಬಂದಿಲ್ಲ. ಬದಲಾಗಿ ಭಕ್ತನಾಗಿ ಬಂದಿದ್ದೇನೆ ಎಂದ‌ರು.

ಸ್ವಾಮಿ ವಿವೇಕಾನಂದರ ಮಾತಿನಂತೆ 'ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವನೇ ಸಾಧಕ. ಶ್ರೀಗಳು ನಮ್ಮೊಂದಿಗೆ ಬದುಕಿದ್ದು, ಅವರ ಒಡನಾಟ ಸಿಕ್ಕಿದ್ದು ನಮ್ಮ ಪುಣ್ಯ. ತೋಂಟದಾರ್ಯ ಮಠದೊಂದಿಗೆ 35 ವರ್ಷದ ಒಡನಾಟವಿದ್ದು, ನನ್ನ ಮೇಲೆ ಲಿಂಗೈಕ್ಯ ಹಿರಿಯ ಶ್ರೀಗಳ ಆಶೀರ್ವಾದವಿದೆ. ಅವರ ಐಕ್ಯ ಮಂಟಪ‌ ನಮ್ಮೆಲ್ಲರ ಭಕ್ತಿಭಾವಗಳು ಐಕ್ಯಗೊಳ್ಳುವ ಕೇಂದ್ರವಾಗಿದೆ ಎಂದು ಹೇಳಿದರು.

ಫೆಬ್ರುವರಿ 21 ಅನ್ನು ಭಾವೈಕ್ಯತಾ ದಿನವನ್ನಾಗಿ ಆಚರಿಸಬೇಕು ಎಂಬುದು ಶ್ರೀ ಮಠದ ಭಕ್ತರ ಬಹುದಿನಗಳ ಆಶಯವಾಗಿತ್ತು. ಈ ಸಂಬಂಧ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ತೋಂಟದಾರ್ಯ ಜಾತ್ರಾ ಮಹೋತ್ಸವದಂದೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಶೀಘ್ರದಲ್ಲೇ ಆದೇಶಿಸಲಾಗುವುದು ಎಂದು ಹೇಳಿದ್ದು ಶ್ರೀಮಠದ ಭಕ್ತರಲ್ಲಿ ಹರ್ಷವನ್ನುಂಟು‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT