<p>ಲಕ್ಷ್ಮೇಶ್ವರ: ತಾಲ್ಲೂಕಿನಲ್ಲಿ ಸೋಮವಾರ ಮತ್ತು ಮಂಗಳವಾರ ಸುರಿದ ರಭಸದ ಮಳೆಗೆ ಕಿತ್ತುಹೋದ ಪುಟಗಾಂವ್ಬಡ್ನಿ ಗ್ರಾಮದ ರಸ್ತೆಯನ್ನು ಶಾಸಕ ಡಾ.ಚಂದ್ರು ಲಮಾಣಿ ಬುಧವಾರ ವೀಕ್ಷಿಸಿದರು.</p>.<p>ಗ್ರಾಮದ ಹಳ್ಳಕ್ಕೆ ಕಟ್ಟಲಾಗಿರುವ ಚೆಕ್ಡ್ಯಾಂ ತುಂಬಿ ಹೆಚ್ಚಾದ ನೀರು ಪಕ್ಕದ ಹೊಲಕ್ಕೆ ನುಗ್ಗಿ ರಭಸದಿಂದ ರಸ್ತೆಗೆ ಅಪ್ಪಳಿಸಿದ್ದರಿಂದ ಈ ರಸ್ತೆ ಕಿತ್ತು ಹಾಳಾಗಿದೆ. ಇದರಿಂದಾಗಿ ಪುಟಗಾಂವ್ಬಡ್ನಿ ಮತ್ತು ಆದರಹಳ್ಳಿ ಗ್ರಾಮಗಳ ಮಧ್ಯ ಸಂಪರ್ಕ ಬಂದ್ ಆಗಿದೆ. ಈ ಕುರಿತು ಬುಧವಾರ ‘ಪ್ರಜಾವಾಣಿ’ಯಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಜನರ ಸಂಕಷ್ಟ ಆಲಿಸಿದರು.</p>.<p>ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಎಇಇ ಫಕ್ಕಿರೇಶ ತಿಮ್ಮಾಪುರ ಅವರಿಗೆ ರಕ್ಷಣ ರಸ್ತೆ ದುರಸ್ತಿ ಮಾಡಿಸಿ ಎರಡೂ ಗ್ರಾಮಗಳ ನಡುವೆ ಸಂಪರ್ಕ ಸಾಧಿಸಲು ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.</p>.<p>ಗ್ರಾಮಸ್ಥರು, ‘ಆದಷ್ಟು ಬೇಗನೇ ಹಾಳಾದ ರಸ್ತೆಯನ್ನು ರಿಪೇರಿ ಮಾಡಿಸಬೇಕು. ಆದರಹಳ್ಳಿ ದಾರಿಗುಂಟ ಪುಟಗಾಂವ್ಬಡ್ನಿ ಗ್ರಾಮದ ರೈತರ ನೂರಾರು ಎಕರೆ ಹೊಲಗಳು ಇವೆ. ಕಾರಣ ಸದ್ಯ ಬಿತ್ತನೆ ಮಾಡುವ ಸಮಯ. ಬೇಗನೆ ರಸ್ತೆ ದುರಸ್ತಿ ಮಾಡಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಷ್ಮೇಶ್ವರ: ತಾಲ್ಲೂಕಿನಲ್ಲಿ ಸೋಮವಾರ ಮತ್ತು ಮಂಗಳವಾರ ಸುರಿದ ರಭಸದ ಮಳೆಗೆ ಕಿತ್ತುಹೋದ ಪುಟಗಾಂವ್ಬಡ್ನಿ ಗ್ರಾಮದ ರಸ್ತೆಯನ್ನು ಶಾಸಕ ಡಾ.ಚಂದ್ರು ಲಮಾಣಿ ಬುಧವಾರ ವೀಕ್ಷಿಸಿದರು.</p>.<p>ಗ್ರಾಮದ ಹಳ್ಳಕ್ಕೆ ಕಟ್ಟಲಾಗಿರುವ ಚೆಕ್ಡ್ಯಾಂ ತುಂಬಿ ಹೆಚ್ಚಾದ ನೀರು ಪಕ್ಕದ ಹೊಲಕ್ಕೆ ನುಗ್ಗಿ ರಭಸದಿಂದ ರಸ್ತೆಗೆ ಅಪ್ಪಳಿಸಿದ್ದರಿಂದ ಈ ರಸ್ತೆ ಕಿತ್ತು ಹಾಳಾಗಿದೆ. ಇದರಿಂದಾಗಿ ಪುಟಗಾಂವ್ಬಡ್ನಿ ಮತ್ತು ಆದರಹಳ್ಳಿ ಗ್ರಾಮಗಳ ಮಧ್ಯ ಸಂಪರ್ಕ ಬಂದ್ ಆಗಿದೆ. ಈ ಕುರಿತು ಬುಧವಾರ ‘ಪ್ರಜಾವಾಣಿ’ಯಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಜನರ ಸಂಕಷ್ಟ ಆಲಿಸಿದರು.</p>.<p>ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಎಇಇ ಫಕ್ಕಿರೇಶ ತಿಮ್ಮಾಪುರ ಅವರಿಗೆ ರಕ್ಷಣ ರಸ್ತೆ ದುರಸ್ತಿ ಮಾಡಿಸಿ ಎರಡೂ ಗ್ರಾಮಗಳ ನಡುವೆ ಸಂಪರ್ಕ ಸಾಧಿಸಲು ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.</p>.<p>ಗ್ರಾಮಸ್ಥರು, ‘ಆದಷ್ಟು ಬೇಗನೇ ಹಾಳಾದ ರಸ್ತೆಯನ್ನು ರಿಪೇರಿ ಮಾಡಿಸಬೇಕು. ಆದರಹಳ್ಳಿ ದಾರಿಗುಂಟ ಪುಟಗಾಂವ್ಬಡ್ನಿ ಗ್ರಾಮದ ರೈತರ ನೂರಾರು ಎಕರೆ ಹೊಲಗಳು ಇವೆ. ಕಾರಣ ಸದ್ಯ ಬಿತ್ತನೆ ಮಾಡುವ ಸಮಯ. ಬೇಗನೆ ರಸ್ತೆ ದುರಸ್ತಿ ಮಾಡಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>