ಶಿರಹಟ್ಟಿ: ಸಮೀಪದ ಹಂಗನಕಟ್ಟಿಯಿಂದ ಮದುವೆ ಮುಗಿಸಿ ಧಾರವಾಡ ಜಿಲ್ಲೆಯ ಅಣ್ಣಿಗೇರಿಗೆ ಹೊರಟಿದ್ದ ಟ್ರ್ಯಾಕ್ಟರ್ನ ಹುಕ್ ಮುರಿದು ಟ್ರೇಲರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ವಿನಾಯಕ ಸಬನೇಶಿ(18), ಪ್ರದೀಪ ನಾಗಪ್ಪ ಕರಿಬಸಣ್ಣವರ(13) ಮೃತರು.
ಟ್ರಾಕ್ಟರ್ನಲ್ಲಿದ್ದ 30 ಜನರರಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಂಭೀರವಾಗಿ ಗಾಯಗೊಂಡ 7 ಜನರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.