ಸದ್ಯ ಬ್ಯಾರೇಜಿನ ಕೆಲವು ಗೇಟುಗಳನ್ನು ತೆರೆದು, ಹಚ್ಚುವರಿ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಜೂ.20ರಂದು 5,000 ಕ್ಯುಸೆಕ್ ಹಾಗೂ ಜೂ.21ರಂದು 5,500ಕ್ಯುಸೆಕ್ ನೀರನ್ನು ಬ್ಯಾರೇಜಿನಿಂದ ಹೊರಗೆ ಹರಿಸಲಾಗಿದೆ. ಬ್ಯಾರೇಜಿನಿಂದ ಹೆಚ್ಚುವರಿ ನೀರನ್ನು ನದಿಗೆ ಬಿಟ್ಟಿರುವುದರಿಂದ ತಾಲ್ಲೂಕಿನ ನದಿ ದಂಡೆಯ ಗ್ರಾಮಗಳಾದ ಶಿಂಗಟಾಲೂರು, ಶೀರನಹಳ್ಳಿ, ಗಂಗಾಪೂರ, ಕೊರ್ಲಹಳ್ಳಿ, ಕಕ್ಕೂರು, ಹೆಸರೂರು ನಿವಾಸಿಗಳಿಗೆ ಎಚ್ಚರಿಕೆ ವಹಿಸಲು ತಾಲ್ಲೂಕು ಆಡಳಿತ ಸೂಚಿಸಿದೆ. ಸದ್ಯ ಇಲ್ಲಿ ತುಂಗಭದ್ರಾ ನದಿಯಲ್ಲಿ ಸಾಕಷ್ಟು ನೀರು ಹರಿಯುತ್ತಲಿದೆ.