<p><strong>ರೋಣ:</strong> ‘ಸಾರ್ವಜನಿಕರಿಗೆ ಸಂವಿಧಾನದ ಹಕ್ಕು ಮತ್ತು ಕಾಯ್ದೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ತಾಲ್ಲೂಕು ಮಟ್ಟ ಹಾಗೂ ಪ್ರತಿ ಹೋಬಳಿಗಳಲ್ಲಿ ಅರಿವು ಕಾರ್ಯಗಾರ ನಡೆಸಲಾಗುವುದು’ ಎಂದು ತಹಶೀಲ್ದಾರ್ ನಾಗರಾಜ.ಕೆ ತಿಳಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಅರಿವು ಕಾರ್ಯಗಾರ ಆಯೋಜನೆ ಕುರಿತು ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. </p>.<p>‘ತಾಲ್ಲೂಕಿನ ಬಿ.ಎಸ್.ಬೇಲೇರಿ ಗ್ರಾಮದಲ್ಲಿ ಡಿ.23ರಂದು ಹಾಗೂ ಅಬ್ಬಿಗೇರಿ ಗ್ರಾಮದಲ್ಲಿ ಡಿ.30ರಂದು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸರ್ಕಾರ ಹಾಕಿಕೊಂಡಿರುವ ವಿವಿಧ ಯೋಜನೆ ಕುರಿತು ಫಲಕ ಅಳವಡಿಕೆ ಹಾಗೂ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ, ಪಿಎಸ್ಐ ಪ್ರಕಾಶ ಬಣಕಾರ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗೀತಾ ಆಲೂರ ಮುಖಂಡರು ಇದ್ದರು.</p>.<div><blockquote>ಅರಿವು ಕಾರ್ಯಾಗಾರದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.</blockquote><span class="attribution">–ನಾಗರಾಜ.ಕೆ ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ:</strong> ‘ಸಾರ್ವಜನಿಕರಿಗೆ ಸಂವಿಧಾನದ ಹಕ್ಕು ಮತ್ತು ಕಾಯ್ದೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ತಾಲ್ಲೂಕು ಮಟ್ಟ ಹಾಗೂ ಪ್ರತಿ ಹೋಬಳಿಗಳಲ್ಲಿ ಅರಿವು ಕಾರ್ಯಗಾರ ನಡೆಸಲಾಗುವುದು’ ಎಂದು ತಹಶೀಲ್ದಾರ್ ನಾಗರಾಜ.ಕೆ ತಿಳಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಅರಿವು ಕಾರ್ಯಗಾರ ಆಯೋಜನೆ ಕುರಿತು ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. </p>.<p>‘ತಾಲ್ಲೂಕಿನ ಬಿ.ಎಸ್.ಬೇಲೇರಿ ಗ್ರಾಮದಲ್ಲಿ ಡಿ.23ರಂದು ಹಾಗೂ ಅಬ್ಬಿಗೇರಿ ಗ್ರಾಮದಲ್ಲಿ ಡಿ.30ರಂದು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸರ್ಕಾರ ಹಾಕಿಕೊಂಡಿರುವ ವಿವಿಧ ಯೋಜನೆ ಕುರಿತು ಫಲಕ ಅಳವಡಿಕೆ ಹಾಗೂ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ, ಪಿಎಸ್ಐ ಪ್ರಕಾಶ ಬಣಕಾರ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗೀತಾ ಆಲೂರ ಮುಖಂಡರು ಇದ್ದರು.</p>.<div><blockquote>ಅರಿವು ಕಾರ್ಯಾಗಾರದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.</blockquote><span class="attribution">–ನಾಗರಾಜ.ಕೆ ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>