<p><strong>ಗದಗ: </strong>‘ಕೋವಿಡ್–19 ಲಸಿಕೆ ಕೊರತೆಗೆ ಕೇಂದ್ರ ಸರ್ಕಾರವೇ ನೇರ ಕಾರಣ’ ಎಂದು ಶಾಸಕ ಎಚ್.ಕೆ.ಪಾಟೀಲ ಆರೋಪ ಮಾಡಿದರು.</p>.<p>ಗದುಗಿನಲ್ಲಿಶನಿವಾರಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಕೇಂದ್ರ ಸರ್ಕಾರ ಲಸಿಕೆ ಉತ್ಪಾದನೆಗೆ ಎರಡು ಕಂಪನಿಗಳಿಗೆ ಮಾತ್ರ ಅವಕಾಶ ನೀಡಿದ್ದು ತಪ್ಪು ನಿರ್ಧಾರ. ಜತೆಗೆ ಆರಂಭದಲ್ಲಿ ಉತ್ಪಾದಿಸಿದ 6 ಕೋಟಿ ಲಸಿಕೆಗಳನ್ನು ವಿದೇಶಕ್ಕೆ ಕಳುಹಿಸಿದ್ದು ದೇಶವಾಸಿಗಳಿಗೆ ಮಾಡಿದ ದ್ರೋಹ. ಪ್ರಧಾನಿ ಮೋದಿ ಅವರು ಆಮದು ಮಾಡಿಕೊಂಡಾದರೂ ದೇಶದ ಜನತೆಗೆ ಲಸಿಕೆ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಗದುಗಿನಂತಹ ಪುಟ್ಟ ಜಿಲ್ಲೆಯಲ್ಲೇ ದಿನವೊಂದರ ಲೆಕ್ಕದಲ್ಲಿ ಲಕ್ಷ ಜನರಿಗೆ ಲಸಿಕೆ ಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ವಾರಕ್ಕೆ 10 ಸಾವಿರದಂತೆ 2 ಸಾರಿ ಬಂದರೆ ಉದ್ದೇಶ ಈಡೇರುವುದಿಲ್ಲ. ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೂ ಬರಬೇಕು’ ಎಂದು ಹೇಳಿದರು.</p>.<p>‘ಕಪ್ಪು ಶಿಲೀಂಧ್ರಕ್ಕೆ ರೋಗಕ್ಕೆ ತುತ್ತಾದವರಿಗೆ ಬೇಕಾದ ಔಷಧಿಗಳನ್ನು ಒದಗಿಸಲು ಸರ್ಕಾರ ತಕ್ಷಣ ಕಾರ್ಯಪ್ರವೃತ್ತರಾಗಬೇಕು’ ಎಂದು ಆಗ್ರಹಿಸಿದರು.</p>.<p><strong>ಚರ್ಚೆ ಬೇಡ; ಎಚ್ಕೆಪಿ ಸಲಹೆ</strong></p>.<p>‘ಕೆಆರ್ಎಸ್ ಅಣೆಕಟ್ಟು ಬಿರುಕು ಬಿಟ್ಟಿದ್ದರೆ ಅಣೆಕಟ್ಟು ಸುರಕ್ಷಾ ಮತ್ತು ನಿರ್ವಹಣಾ ಸಮಿತಿ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲಿ. ಅದು ಬಿಟ್ಟು ಈ ವಿಚಾರವಾಗಿ ರಾಜಕೀಯ ಚರ್ಚೆ ಬೇಡ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಎಚ್.ಕೆ.ಪಾಟೀಲ ಸಲಹೆ ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಸದೆ ಸುಮಲತಾ ಅಂಬರೀಷ್ ಹಾಗೂ ಅಂಬರೀಷ್ ಅಭಿಮಾನಿಗಳ ಮಧ್ಯೆ ನಡೆಯುತ್ತಿರುವ ಮಾತಿನ ಸಮರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಅಶೋಕ ಮಂದಾಲಿ, ಉಮರ್ ಫಾರೂಕ ಹುಬ್ಬಳ್ಳಿ, ಬಸವರಾಜ ಕಡೇಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>‘ಕೋವಿಡ್–19 ಲಸಿಕೆ ಕೊರತೆಗೆ ಕೇಂದ್ರ ಸರ್ಕಾರವೇ ನೇರ ಕಾರಣ’ ಎಂದು ಶಾಸಕ ಎಚ್.ಕೆ.ಪಾಟೀಲ ಆರೋಪ ಮಾಡಿದರು.</p>.<p>ಗದುಗಿನಲ್ಲಿಶನಿವಾರಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಕೇಂದ್ರ ಸರ್ಕಾರ ಲಸಿಕೆ ಉತ್ಪಾದನೆಗೆ ಎರಡು ಕಂಪನಿಗಳಿಗೆ ಮಾತ್ರ ಅವಕಾಶ ನೀಡಿದ್ದು ತಪ್ಪು ನಿರ್ಧಾರ. ಜತೆಗೆ ಆರಂಭದಲ್ಲಿ ಉತ್ಪಾದಿಸಿದ 6 ಕೋಟಿ ಲಸಿಕೆಗಳನ್ನು ವಿದೇಶಕ್ಕೆ ಕಳುಹಿಸಿದ್ದು ದೇಶವಾಸಿಗಳಿಗೆ ಮಾಡಿದ ದ್ರೋಹ. ಪ್ರಧಾನಿ ಮೋದಿ ಅವರು ಆಮದು ಮಾಡಿಕೊಂಡಾದರೂ ದೇಶದ ಜನತೆಗೆ ಲಸಿಕೆ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಗದುಗಿನಂತಹ ಪುಟ್ಟ ಜಿಲ್ಲೆಯಲ್ಲೇ ದಿನವೊಂದರ ಲೆಕ್ಕದಲ್ಲಿ ಲಕ್ಷ ಜನರಿಗೆ ಲಸಿಕೆ ಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ವಾರಕ್ಕೆ 10 ಸಾವಿರದಂತೆ 2 ಸಾರಿ ಬಂದರೆ ಉದ್ದೇಶ ಈಡೇರುವುದಿಲ್ಲ. ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೂ ಬರಬೇಕು’ ಎಂದು ಹೇಳಿದರು.</p>.<p>‘ಕಪ್ಪು ಶಿಲೀಂಧ್ರಕ್ಕೆ ರೋಗಕ್ಕೆ ತುತ್ತಾದವರಿಗೆ ಬೇಕಾದ ಔಷಧಿಗಳನ್ನು ಒದಗಿಸಲು ಸರ್ಕಾರ ತಕ್ಷಣ ಕಾರ್ಯಪ್ರವೃತ್ತರಾಗಬೇಕು’ ಎಂದು ಆಗ್ರಹಿಸಿದರು.</p>.<p><strong>ಚರ್ಚೆ ಬೇಡ; ಎಚ್ಕೆಪಿ ಸಲಹೆ</strong></p>.<p>‘ಕೆಆರ್ಎಸ್ ಅಣೆಕಟ್ಟು ಬಿರುಕು ಬಿಟ್ಟಿದ್ದರೆ ಅಣೆಕಟ್ಟು ಸುರಕ್ಷಾ ಮತ್ತು ನಿರ್ವಹಣಾ ಸಮಿತಿ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲಿ. ಅದು ಬಿಟ್ಟು ಈ ವಿಚಾರವಾಗಿ ರಾಜಕೀಯ ಚರ್ಚೆ ಬೇಡ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಎಚ್.ಕೆ.ಪಾಟೀಲ ಸಲಹೆ ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಸದೆ ಸುಮಲತಾ ಅಂಬರೀಷ್ ಹಾಗೂ ಅಂಬರೀಷ್ ಅಭಿಮಾನಿಗಳ ಮಧ್ಯೆ ನಡೆಯುತ್ತಿರುವ ಮಾತಿನ ಸಮರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಅಶೋಕ ಮಂದಾಲಿ, ಉಮರ್ ಫಾರೂಕ ಹುಬ್ಬಳ್ಳಿ, ಬಸವರಾಜ ಕಡೇಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>