<p><strong>ಗದಗ:</strong> ‘ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಅಗಲುವಿಕೆಯಿಂದ ವೀರಶೈವ ಸಮಾಜದ ಹಿರಿಯ ಕೊಂಡಿ ಕಳಚಿದಂತಾಗಿದೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಗದಗ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಕೋಟಿ ಹೇಳಿದರು.</p>.<p>ನಗರದ ವೀರಶೈವ ವಾಚನಾಲಯದ ಆವರಣದಲ್ಲಿರುವ ಮಹಾಸಭಾದ ಕಾರ್ಯಾಲಯದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ನಡೆದ ಸಂತಾಪ ಸೂಚಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ದಾವಣಗೆರೆಯಲ್ಲಿ ಬಾಪೂಜಿ ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೂ ಶಿಕ್ಷಣ ಕಲ್ಪಿಸುವ ಬೃಹತ್ ಕಾರ್ಯವನ್ನು ಕೈಗೊಂಡ ಶಾಮನೂರು 6 ಬಾರಿಗೆ ಶಾಸಕರಾಗಿ, ಎರಡು ಬಾರಿಗೆ ಸಚಿವರಾಗಿ, ಒಮ್ಮೆ ಸಂಸದರಾಗಿದ್ದರು. ವೀರಶೈವ-ಲಿಂಗಾಯತ ಸಮುದಾಯವನ್ನು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಂಘಟನಾತ್ಮಕವಾಗಿ ಒಗ್ಗೂಡಿಸಿದ ಹಿರಿಯ ಜೀವಿಯ ಅಗಲುವಿಕೆಯಿಂದ ತುಂಬಲಾರದಷ್ಟು ಹಾನಿಯಾಗಿದೆ ಎಂದರು.</p>.<p>ಮಹಾಸಭಾದ ಪದಾಧಿಕಾರಿಗಳಾದ ಶೋಭಾ ಗುಗ್ಗರಿ, ಚನ್ನವೀರಪ್ಪ ದುಂದೂರ, ಸಾವಿತ್ರಿ ಹೂಗಾರ ಶಾಮನೂರು ಅವರ ವ್ಯಕ್ತಿತ್ವ ಸಾಧನೆ ಕುರಿತು ಮಾತನಾಡಿದರು.</p>.<p>ಬಳಿಕ ಎರಡು ನಿಮಿಷ ಮೌನ ಆಚರಿಸಲಾಯಿತು.</p>.<p>ಮಹಾಸಭಾದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಂಗಮೇಶ ಕವಳಿಕಾಯಿ ಸ್ವಾಗತಿಸಿದರು. ಕಾರ್ಯದರ್ಶಿ ಎಸ್.ಜಿ.ಹಿರೇಮಠ ನಿರೂಪಿಸಿದರು. ವಿಶ್ವನಾಥ ಹಳ್ಳಿಕೇರಿ ವಂದಿಸಿದರು.</p>.<p>ಈ ಸಂದರ್ಭದಲ್ಲಿ ನಗರಸಭಾ ಮಾಜಿ ಸದಸ್ಯ ಶರಣಪ್ಪ ಗದ್ದಿಕೇರಿ, ಮೋಹನ ದೊಡ್ಡಕುಂಡಿ, ಶಿವಕುಮಾರ ಬೇವಿನಮರದ, ಸುಧಾ ಚಳ್ಳಮರದ, ಲಕ್ಷ್ಮೀ ಗುರಿಕಾರ, ರತ್ನವ್ವ ಕಲ್ಲೂರ, ವಿಜಯಲಕ್ಷ್ಮೀ ಕುಸೂಗಲ್ಲ, ಶಂಭು ಕಾರಕಟ್ಟಿ, ರಮೇಶ ಪಿಳ್ಳಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಅಗಲುವಿಕೆಯಿಂದ ವೀರಶೈವ ಸಮಾಜದ ಹಿರಿಯ ಕೊಂಡಿ ಕಳಚಿದಂತಾಗಿದೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಗದಗ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಕೋಟಿ ಹೇಳಿದರು.</p>.<p>ನಗರದ ವೀರಶೈವ ವಾಚನಾಲಯದ ಆವರಣದಲ್ಲಿರುವ ಮಹಾಸಭಾದ ಕಾರ್ಯಾಲಯದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ನಡೆದ ಸಂತಾಪ ಸೂಚಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ದಾವಣಗೆರೆಯಲ್ಲಿ ಬಾಪೂಜಿ ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೂ ಶಿಕ್ಷಣ ಕಲ್ಪಿಸುವ ಬೃಹತ್ ಕಾರ್ಯವನ್ನು ಕೈಗೊಂಡ ಶಾಮನೂರು 6 ಬಾರಿಗೆ ಶಾಸಕರಾಗಿ, ಎರಡು ಬಾರಿಗೆ ಸಚಿವರಾಗಿ, ಒಮ್ಮೆ ಸಂಸದರಾಗಿದ್ದರು. ವೀರಶೈವ-ಲಿಂಗಾಯತ ಸಮುದಾಯವನ್ನು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಂಘಟನಾತ್ಮಕವಾಗಿ ಒಗ್ಗೂಡಿಸಿದ ಹಿರಿಯ ಜೀವಿಯ ಅಗಲುವಿಕೆಯಿಂದ ತುಂಬಲಾರದಷ್ಟು ಹಾನಿಯಾಗಿದೆ ಎಂದರು.</p>.<p>ಮಹಾಸಭಾದ ಪದಾಧಿಕಾರಿಗಳಾದ ಶೋಭಾ ಗುಗ್ಗರಿ, ಚನ್ನವೀರಪ್ಪ ದುಂದೂರ, ಸಾವಿತ್ರಿ ಹೂಗಾರ ಶಾಮನೂರು ಅವರ ವ್ಯಕ್ತಿತ್ವ ಸಾಧನೆ ಕುರಿತು ಮಾತನಾಡಿದರು.</p>.<p>ಬಳಿಕ ಎರಡು ನಿಮಿಷ ಮೌನ ಆಚರಿಸಲಾಯಿತು.</p>.<p>ಮಹಾಸಭಾದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಂಗಮೇಶ ಕವಳಿಕಾಯಿ ಸ್ವಾಗತಿಸಿದರು. ಕಾರ್ಯದರ್ಶಿ ಎಸ್.ಜಿ.ಹಿರೇಮಠ ನಿರೂಪಿಸಿದರು. ವಿಶ್ವನಾಥ ಹಳ್ಳಿಕೇರಿ ವಂದಿಸಿದರು.</p>.<p>ಈ ಸಂದರ್ಭದಲ್ಲಿ ನಗರಸಭಾ ಮಾಜಿ ಸದಸ್ಯ ಶರಣಪ್ಪ ಗದ್ದಿಕೇರಿ, ಮೋಹನ ದೊಡ್ಡಕುಂಡಿ, ಶಿವಕುಮಾರ ಬೇವಿನಮರದ, ಸುಧಾ ಚಳ್ಳಮರದ, ಲಕ್ಷ್ಮೀ ಗುರಿಕಾರ, ರತ್ನವ್ವ ಕಲ್ಲೂರ, ವಿಜಯಲಕ್ಷ್ಮೀ ಕುಸೂಗಲ್ಲ, ಶಂಭು ಕಾರಕಟ್ಟಿ, ರಮೇಶ ಪಿಳ್ಳಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>