<p><strong>ರೋಣ/ನರೇಗಲ್:</strong> ‘ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿದೀಪವಾಗಿವೆ. ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳು ಕಣ್ಮರೆಯಾದರೆ, ಧರ್ಮ– ಸಂಸ್ಕೃತಿ ಉಳಿಯಲಾರವು. ಸಮಾಜದ ಓರೆ ಕೋರೆಗಳನ್ನು ತಿದ್ದಿ ತೀಡುವುದೇ ಮಹಾನುಭಾವರ ಕರ್ತವ್ಯವಾಗಿದೆ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.</p>.<p>ರೋಣ ತಾಲ್ಲೂಕಿನ ಹಿರೇಹಾಳು ಗ್ರಾಮದಲ್ಲಿ ನಿರ್ಮಾಣಗೊಂಡ ಹಿರೇಮಠದ ಉದ್ಘಾಟನೆ, ಜಗದ್ಗುರು ರೇಣುಕಾಚಾರ್ಯ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಅಂಗವಾಗಿ ಸೋಮವಾರ ನಡೆದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.</p>.<p>‘ದೇವಾಲಯಗಳು ಮತ್ತು ಮಠ ಮಂದಿರಗಳು ಧರ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಬೆಂದು ಬಸವಳಿದು ಬಂದ ಜೀವಾತ್ಮರಿಗೆ ಶಾಂತಿ ನೆಮ್ಮದಿಯನ್ನು ಉಂಟು ಮಾಡುವ ಕೇಂದ್ರಗಳಾಗಿವೆ. ಬದುಕು ವಿಕಾಸಗೊಳ್ಳಲು ಅಧ್ಯಾತ್ಮ ಜ್ಞಾನದ ಜತೆಗೆ ಅರಿವು, ಆಚರಣೆಗಳ ಅವಶ್ಯಕತೆಯಿದೆ. ಮನುಷ್ಯನಲ್ಲಿ ಆತ್ಮಬಲ ಬೆಳೆಯಲು ಅಧ್ಯಾತ್ಮದ ಹಸಿವು ಬೇಕು’ ಎಂದರು.</p>.<p>‘ಜಗದ್ಗುರು ರೇಣುಕಾಚಾರ್ಯರು ವಿಶ್ವ ಬಂಧುತ್ವದ ಆದರ್ಶ ಮೌಲ್ಯಗಳನ್ನು ಬೋಧಿಸಿದ್ದಾರೆ. ಅಹಿಂಸಾವಾದಿ ಧ್ಯಾನ ಪರ್ಯಂತರವಾದ ದಶಧರ್ಮ ಸೂತ್ರಗಳು ಸಕಲರ ಬಾಳಿನಲ್ಲಿ ಬೆಳಕು ಮೂಡಿಸುತ್ತವೆ. ಹಿರೇಹಾಳು ಗ್ರಾಮದ ರಂಭಾಪುರಿ ಪೀಠದ ಶಾಖಾಮಠ ಇದಾಗಿದ್ದು ಇಂದು ನೂತನ ಕಟ್ಟಡ ನಿರ್ಮಾಣಗೊಂಡು ಜಗದ್ಗುರು ರೇಣುಕಾಚಾರ್ಯರ ಮೂರ್ತಿ ಪ್ರತಿಷ್ಠಾಪನೆ ಕಳಸಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅತ್ಯಂತ ಸಂತೋಷವಾಗಿದೆ’ ಎಂದರು.</p>.<p>ಬೇನಾಳ ಹಿರೇಮಠದ ಸದಾಶಿವ ಶಿವಾಚಾರ್ಯರು, ಸೂಡಿ ಜುಕ್ತಿ ಹಿರೇಮಠದ ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಚಳಗೇರಿ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯರು, ಯಲಬುರ್ಗಾ ಹಿರೇಮಠದ ಬಸವಲಿಂಗೇಶ್ವರ ಶಿವಾಚಾರ್ಯರು, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಲಿಂಗಸುಗೂರಿನ ಮಾತಾ ಮಾಣಿಕ್ಯೇಶ್ವರಿ ಆಶ್ರಮದ ನಂದೀಶ್ವರಿ ಅಮ್ಮನವರು ಪಾಲ್ಗೊಂಡಿದ್ದರು.</p>.<p>ಅಡ್ನೂರು-ರಾಜೂರ ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮಿಗಳು ಸಮಾರಂಭದ ನೇತೃತ್ವ ವಹಿಸಿದ್ದರು. ಬಂಡಿ ಹಿರೇಮಠದ ಪ್ರಕಾಶಯ್ಯ ಶಾಸ್ತ್ರಿಗಳು ಪುರಾಣ ಪ್ರವಚನ ಮಾಡಿ ಮಂಗಲಗೊಳಿಸಿದರು.</p>.<p>ಚಿಕ್ಕಮಗಳೂರು ಶ್ರೀದೇವಿ ಗುರುಕುಲದ ಜಿ. ದಯಾನಂದ ಮೂರ್ತಿ ಶಾಸ್ತ್ರಿಗಳು ಪ್ರತಿಷ್ಠಾಪನೆಯ ವೈದಿಕ ಕಾರ್ಯಗಳನ್ನು ನೆರವೇರಿಸಿದರು. ಸಮಾರಂಭದ ಆರಂಭದಲ್ಲಿ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಂಭ್ರಮದಿಂದ ಜರುಗಿತು. </p>.<p><strong>ನಿಡಗುಂದಿಯಲ್ಲಿ ವೀರಭದ್ರೇಶ್ವರ ಶಿಲಾಮಂದಿರಕ್ಕೆ ಶಿಲಾನ್ಯಾಸ </strong></p><p>ನರೇಗಲ್ ಸಮೀಪದ ನಿಡಗುಂದಿ ಗ್ರಾಮದ ವೀರಭದ್ರೇಶ್ವರ ನೂತನ ಶಿಲಾ ದೇಗುಲ ನಿರ್ಮಾಣಕ್ಕೆ ರಂಭಾಪುರಿ ಜಗದ್ಗುರುಗಳು ಸೋಮವಾರ ಭೂಮಿಪೂಜೆ ನೆರವೇರಿಸಿ ಶಿಲಾನ್ಯಾಸ ಮಾಡಿದರು. ನರೇಗಲ್ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನಿಡಗುಂದಿಕೊಪ್ಪದ ಅಭಿನವ ಚನ್ನಬಸವ ಸ್ವಾಮೀಜಿ ರೋಣ ಬೂದೀಶ್ವರ ಮಠದ ವಿಶ್ವನಾಥ ದೇವರು ಮತ್ತು ಹಲವಾರು ಗಣ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ/ನರೇಗಲ್:</strong> ‘ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿದೀಪವಾಗಿವೆ. ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳು ಕಣ್ಮರೆಯಾದರೆ, ಧರ್ಮ– ಸಂಸ್ಕೃತಿ ಉಳಿಯಲಾರವು. ಸಮಾಜದ ಓರೆ ಕೋರೆಗಳನ್ನು ತಿದ್ದಿ ತೀಡುವುದೇ ಮಹಾನುಭಾವರ ಕರ್ತವ್ಯವಾಗಿದೆ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.</p>.<p>ರೋಣ ತಾಲ್ಲೂಕಿನ ಹಿರೇಹಾಳು ಗ್ರಾಮದಲ್ಲಿ ನಿರ್ಮಾಣಗೊಂಡ ಹಿರೇಮಠದ ಉದ್ಘಾಟನೆ, ಜಗದ್ಗುರು ರೇಣುಕಾಚಾರ್ಯ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಅಂಗವಾಗಿ ಸೋಮವಾರ ನಡೆದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.</p>.<p>‘ದೇವಾಲಯಗಳು ಮತ್ತು ಮಠ ಮಂದಿರಗಳು ಧರ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಬೆಂದು ಬಸವಳಿದು ಬಂದ ಜೀವಾತ್ಮರಿಗೆ ಶಾಂತಿ ನೆಮ್ಮದಿಯನ್ನು ಉಂಟು ಮಾಡುವ ಕೇಂದ್ರಗಳಾಗಿವೆ. ಬದುಕು ವಿಕಾಸಗೊಳ್ಳಲು ಅಧ್ಯಾತ್ಮ ಜ್ಞಾನದ ಜತೆಗೆ ಅರಿವು, ಆಚರಣೆಗಳ ಅವಶ್ಯಕತೆಯಿದೆ. ಮನುಷ್ಯನಲ್ಲಿ ಆತ್ಮಬಲ ಬೆಳೆಯಲು ಅಧ್ಯಾತ್ಮದ ಹಸಿವು ಬೇಕು’ ಎಂದರು.</p>.<p>‘ಜಗದ್ಗುರು ರೇಣುಕಾಚಾರ್ಯರು ವಿಶ್ವ ಬಂಧುತ್ವದ ಆದರ್ಶ ಮೌಲ್ಯಗಳನ್ನು ಬೋಧಿಸಿದ್ದಾರೆ. ಅಹಿಂಸಾವಾದಿ ಧ್ಯಾನ ಪರ್ಯಂತರವಾದ ದಶಧರ್ಮ ಸೂತ್ರಗಳು ಸಕಲರ ಬಾಳಿನಲ್ಲಿ ಬೆಳಕು ಮೂಡಿಸುತ್ತವೆ. ಹಿರೇಹಾಳು ಗ್ರಾಮದ ರಂಭಾಪುರಿ ಪೀಠದ ಶಾಖಾಮಠ ಇದಾಗಿದ್ದು ಇಂದು ನೂತನ ಕಟ್ಟಡ ನಿರ್ಮಾಣಗೊಂಡು ಜಗದ್ಗುರು ರೇಣುಕಾಚಾರ್ಯರ ಮೂರ್ತಿ ಪ್ರತಿಷ್ಠಾಪನೆ ಕಳಸಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅತ್ಯಂತ ಸಂತೋಷವಾಗಿದೆ’ ಎಂದರು.</p>.<p>ಬೇನಾಳ ಹಿರೇಮಠದ ಸದಾಶಿವ ಶಿವಾಚಾರ್ಯರು, ಸೂಡಿ ಜುಕ್ತಿ ಹಿರೇಮಠದ ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಚಳಗೇರಿ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯರು, ಯಲಬುರ್ಗಾ ಹಿರೇಮಠದ ಬಸವಲಿಂಗೇಶ್ವರ ಶಿವಾಚಾರ್ಯರು, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಲಿಂಗಸುಗೂರಿನ ಮಾತಾ ಮಾಣಿಕ್ಯೇಶ್ವರಿ ಆಶ್ರಮದ ನಂದೀಶ್ವರಿ ಅಮ್ಮನವರು ಪಾಲ್ಗೊಂಡಿದ್ದರು.</p>.<p>ಅಡ್ನೂರು-ರಾಜೂರ ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮಿಗಳು ಸಮಾರಂಭದ ನೇತೃತ್ವ ವಹಿಸಿದ್ದರು. ಬಂಡಿ ಹಿರೇಮಠದ ಪ್ರಕಾಶಯ್ಯ ಶಾಸ್ತ್ರಿಗಳು ಪುರಾಣ ಪ್ರವಚನ ಮಾಡಿ ಮಂಗಲಗೊಳಿಸಿದರು.</p>.<p>ಚಿಕ್ಕಮಗಳೂರು ಶ್ರೀದೇವಿ ಗುರುಕುಲದ ಜಿ. ದಯಾನಂದ ಮೂರ್ತಿ ಶಾಸ್ತ್ರಿಗಳು ಪ್ರತಿಷ್ಠಾಪನೆಯ ವೈದಿಕ ಕಾರ್ಯಗಳನ್ನು ನೆರವೇರಿಸಿದರು. ಸಮಾರಂಭದ ಆರಂಭದಲ್ಲಿ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಂಭ್ರಮದಿಂದ ಜರುಗಿತು. </p>.<p><strong>ನಿಡಗುಂದಿಯಲ್ಲಿ ವೀರಭದ್ರೇಶ್ವರ ಶಿಲಾಮಂದಿರಕ್ಕೆ ಶಿಲಾನ್ಯಾಸ </strong></p><p>ನರೇಗಲ್ ಸಮೀಪದ ನಿಡಗುಂದಿ ಗ್ರಾಮದ ವೀರಭದ್ರೇಶ್ವರ ನೂತನ ಶಿಲಾ ದೇಗುಲ ನಿರ್ಮಾಣಕ್ಕೆ ರಂಭಾಪುರಿ ಜಗದ್ಗುರುಗಳು ಸೋಮವಾರ ಭೂಮಿಪೂಜೆ ನೆರವೇರಿಸಿ ಶಿಲಾನ್ಯಾಸ ಮಾಡಿದರು. ನರೇಗಲ್ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನಿಡಗುಂದಿಕೊಪ್ಪದ ಅಭಿನವ ಚನ್ನಬಸವ ಸ್ವಾಮೀಜಿ ರೋಣ ಬೂದೀಶ್ವರ ಮಠದ ವಿಶ್ವನಾಥ ದೇವರು ಮತ್ತು ಹಲವಾರು ಗಣ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>