<p><strong>ಶಿರಹಟ್ಟಿ:</strong> ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ತಾಲ್ಲೂಕಿನ ತೆಗ್ಗಿನ ಭಾವನೂರು ಗ್ರಾಮದಲ್ಲಿ ತಹಶೀಲ್ದಾರ್ ಕಲಗೌಡ ಪಾಟೀಲ ಶನಿವಾರ ಉದ್ಘಾಟಿಸಿದರು.</p>.<p>ರಸ್ತೆ, ಸೇತುವೆ ಅಭಿವೃದ್ಧಿ ಪಡಿಸಲು ಒತ್ತಾಯ: ತೆಗ್ಗಿನಭಾವನೂರ ಗ್ರಾಮದಿಂದ ಚಿಕ್ಕವಡ್ಡಟಿ, ನವೆಭಾವನೂರ, ಹೂಸಳ್ಳಿ ಗ್ರಾಮ ಸೇರಿದಂತೆ 7 ಹಳ್ಳಿಗಳು ಹಾಗೂ ಸಾವಿರಕ್ಕೂ ಅಧಿಕ ಹೆಕ್ಟೇರ್ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯು ಸಂಪೂರ್ಣ ಹಾಳಾಗಿದೆ. ಮಳೆಗಾಲದಲ್ಲಿ ಈ ರಸ್ತೆ ಕೇಸರು ಗದ್ದೆಯಂತಾಗುತ್ತದೆ, ಮಾರ್ಗ ಮಧ್ಯೆದಲ್ಲಿರುವ ಸೇತುವೆಯೂ ತಳಭಾಗದಲ್ಲಿ ಇರುವುದರಿಂದ ಮಳೆಗಾಲದಲ್ಲಿ ನೀರು ಸೇತುವೆ ಮೇಲೆ ಹರಿಯುತ್ತದೆ, ಇದರಿಂದ ರೈತರು, ಹಳ್ಳಿ ಜನರು ಆಕಡೆಯಿಂದ ಈ ಕಡೆ ಬರಲು ದಿನಗಟ್ಟಲೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದನ್ನು ಸರಿಪಡಿಸುವಂತೆ ಹಲವಾರು ಬಾರಿ ಮನವಿ ನೀಡಿದರು ಯಾವ ಪ್ರಯೋಜನವಾಗಿಲ್ಲ. ಆದ್ದರಿಂದ ಶೀಘ್ರದಲ್ಲೇ ರಸ್ತೆ ಮತ್ತು ಸೇತುವೆಯನ್ನು ಅಭಿವೃದ್ಧಿ ಪಡಿಸಿ ಗ್ರಾಮಸ್ಥರು ತಹಶೀಲ್ದಾರ್ ಕಲಗೌಡ ಪಾಟೀಲ್ ಅವರ ಮುಂದೆ ಅವಲತ್ತುಕೊಂಡರು.</p>.<p>ತಾ.ಪಂ ಇಒ ನಿಂಗಪ್ಪ ಓಲೇಕಾರ, ಗ್ರಾ.ಪಂ ಅಧ್ಯಕ್ಷೆ ಹನುಮವ್ವ ಪಾಟೀಲ್, ಸದಸ್ಯ ಹೊನಕೇರೆಪ್ಪ ಸಂಶಿ, ಯಶೋದ ಪಾಟೀಲ್, ಫಕ್ಕೀರವ್ವ ಪೂಜಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ:</strong> ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ತಾಲ್ಲೂಕಿನ ತೆಗ್ಗಿನ ಭಾವನೂರು ಗ್ರಾಮದಲ್ಲಿ ತಹಶೀಲ್ದಾರ್ ಕಲಗೌಡ ಪಾಟೀಲ ಶನಿವಾರ ಉದ್ಘಾಟಿಸಿದರು.</p>.<p>ರಸ್ತೆ, ಸೇತುವೆ ಅಭಿವೃದ್ಧಿ ಪಡಿಸಲು ಒತ್ತಾಯ: ತೆಗ್ಗಿನಭಾವನೂರ ಗ್ರಾಮದಿಂದ ಚಿಕ್ಕವಡ್ಡಟಿ, ನವೆಭಾವನೂರ, ಹೂಸಳ್ಳಿ ಗ್ರಾಮ ಸೇರಿದಂತೆ 7 ಹಳ್ಳಿಗಳು ಹಾಗೂ ಸಾವಿರಕ್ಕೂ ಅಧಿಕ ಹೆಕ್ಟೇರ್ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯು ಸಂಪೂರ್ಣ ಹಾಳಾಗಿದೆ. ಮಳೆಗಾಲದಲ್ಲಿ ಈ ರಸ್ತೆ ಕೇಸರು ಗದ್ದೆಯಂತಾಗುತ್ತದೆ, ಮಾರ್ಗ ಮಧ್ಯೆದಲ್ಲಿರುವ ಸೇತುವೆಯೂ ತಳಭಾಗದಲ್ಲಿ ಇರುವುದರಿಂದ ಮಳೆಗಾಲದಲ್ಲಿ ನೀರು ಸೇತುವೆ ಮೇಲೆ ಹರಿಯುತ್ತದೆ, ಇದರಿಂದ ರೈತರು, ಹಳ್ಳಿ ಜನರು ಆಕಡೆಯಿಂದ ಈ ಕಡೆ ಬರಲು ದಿನಗಟ್ಟಲೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದನ್ನು ಸರಿಪಡಿಸುವಂತೆ ಹಲವಾರು ಬಾರಿ ಮನವಿ ನೀಡಿದರು ಯಾವ ಪ್ರಯೋಜನವಾಗಿಲ್ಲ. ಆದ್ದರಿಂದ ಶೀಘ್ರದಲ್ಲೇ ರಸ್ತೆ ಮತ್ತು ಸೇತುವೆಯನ್ನು ಅಭಿವೃದ್ಧಿ ಪಡಿಸಿ ಗ್ರಾಮಸ್ಥರು ತಹಶೀಲ್ದಾರ್ ಕಲಗೌಡ ಪಾಟೀಲ್ ಅವರ ಮುಂದೆ ಅವಲತ್ತುಕೊಂಡರು.</p>.<p>ತಾ.ಪಂ ಇಒ ನಿಂಗಪ್ಪ ಓಲೇಕಾರ, ಗ್ರಾ.ಪಂ ಅಧ್ಯಕ್ಷೆ ಹನುಮವ್ವ ಪಾಟೀಲ್, ಸದಸ್ಯ ಹೊನಕೇರೆಪ್ಪ ಸಂಶಿ, ಯಶೋದ ಪಾಟೀಲ್, ಫಕ್ಕೀರವ್ವ ಪೂಜಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>