ಮೂಲಸೌಲಭ್ಯಗಳನ್ನು ಒದಗಿಸದೆ ನೀರಾವರಿ ಇಲಾಖೆಯವರು ಗ್ರಾಮಸ್ಥರನ್ನು ನೂತನ ಬಿದರಳ್ಳಿ ಗ್ರಾಮಕ್ಕೆ ಸ್ಥಳಾಂತರಿಸಿದ್ದಾರೆ. ಇದರಿಂದ ಗ್ರಾಮದಲ್ಲಿ ವಾಸಿಸುತ್ತಿರುವವರಿಗೆ ತುಂಬಾ ತೊಂದರೆಯಾಗಿದೆ. ಸರ್ಕಾರ ತಕ್ಷಣವೇ ನೂತನ ಬಿದರಳ್ಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕುನಾಗರಾಜ ಮತ್ತೂರು ಬಿದರಳ್ಳಿ ಗ್ರಾಮಸ್ಥ
ನೂತನ ಗುಮ್ಮಗೋಳ ಗ್ರಾಮದಲ್ಲಿ ಯಾವುದೇ ಸೌಲಭ್ಯಗಳಿಲ್ಲವಾದ್ದರಿಂದ ಗ್ರಾಮಸ್ಥರು ನೂತನ ಗ್ರಾಮಕ್ಕೆ ಸ್ಥಳಾಂತರಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರ ನೂತನ ಗ್ರಾಮವನ್ನು ಪುನರ್ ನಿರ್ಮಿಸಬೇಕುಹನುಮಂತ ಬೆಂಡಿಕಾಯಿ ಗುಮ್ಮಗೋಳ ಗ್ರಾಮಸ್ಥ
ಪ್ರವಾಹ ಪೀಡಿತ ಹಳೆಶಿಂಗಟಾಲೂರ ಗ್ರಾಮದ ಕೆಲವು ಕುಟುಂಬಗಳು ಹಲವು ವರ್ಷಗಳಿಂದ ಮನೆಗಳಿಲ್ಲದೆ ಸರ್ಕಾರಿ ಕಟ್ಟಡಗಳಲ್ಲಿ ವಾಸಿಸುತ್ತಿವೆ. ಅವರಿಗೆ ಮನೆಗಳನ್ನು ನಿರ್ಮಿಸಿಕೊಡುವಂತೆ ಜನತಾ ದರ್ಶನ ಸೇರಿದಂತೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಪ್ರವಾಹ ಪೀಡಿತರಿಗೆ ಮನೆಗಳು ಸಿಕ್ಕಿಲ್ಲಬಸವೇಶ್ವರಕುಮಾರ ಸದಾಶಿವಪ್ಪನವರ ಪ್ರವಾಹ ಪೀಡಿತ ಹಳೆಶಿಂಗಟಾಲೂರ ಗ್ರಾಮಸ್ಥ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.