<p>ಲಕ್ಷ್ಮೇಶ್ವರ (ಗದಗ ಜಿಲ್ಲೆ): ‘1978ರಲ್ಲಿ ವಿಶ್ವಕರ್ಮ ಸಮಾಜವನ್ನು ಹಿಂದುಳಿದ ಪಟ್ಟಿಗೆ ಸೇರಿಸಲಾಯಿತು. ಈವರೆಗೆ ಸಾಮಾಜಿಕ ನ್ಯಾಯ ಪಡೆದುಕೊಳ್ಳಲು ಆಗುತ್ತಿಲ್ಲ’ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ.ನಂಜುಂಡಿ ವಿಷಾದಿಸಿದರು.</p>.<p>‘ವಿಶ್ವಕರ್ಮ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡಬೇಕು’ ಎಂದು ಒತ್ತಾ<br />ಯಿಸಿ ಇಲ್ಲಿ ಹಮ್ಮಿಕೊಂಡಿರುವ ಜಾಗೃತಾ ಸಮಾವೇಶಕ್ಕಾಗಿ ಸೋಮವಾರ ಭೇಟಿ ನೀಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದರು.</p>.<p>‘ವಿಶ್ವಕರ್ಮ ಸಮಾಜದವರು ಮೂಲತಃ ಗ್ರಾಮೀಣ ಪ್ರದೇಶದಿಂದ ಬಂದವರು. ಶಿಕ್ಷಣದಿಂದ ಸಾಕಷ್ಟು ಹಿಂದುಳಿದಿದ್ದಾರೆ. ಶಿಕ್ಷಣ ಪಡೆದವರಿಗೆ ಉದ್ಯೋಗ ಸಿಗುತ್ತಿಲ್ಲ. ಈ ಸಮಾಜವನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಸಮಾಜದವರು ರಾಜಕೀಯ ಪ್ರಜ್ಞೆಯಿಂದ ದೂರ ಇದ್ದಾರೆ. ಮೀಸಲಾತಿ ಇಲ್ಲದೇ ಅಧಿಕಾರ ಸಿಗದು. ಅಧಿಕಾರ ಇಲ್ಲದೇ ಸಮಾಜದ ಉದ್ಧಾರವಾಗದು. ಎಸ್ಟಿ ಮೀಸಲಾತಿ ನಮ್ಮ ಹಕ್ಕು, ಈ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ 745 ಹೋಬಳಿಗಳಿಗೆ ಭೇಟಿ ನೀಡಿ ಸಮಾವೇಶ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಷ್ಮೇಶ್ವರ (ಗದಗ ಜಿಲ್ಲೆ): ‘1978ರಲ್ಲಿ ವಿಶ್ವಕರ್ಮ ಸಮಾಜವನ್ನು ಹಿಂದುಳಿದ ಪಟ್ಟಿಗೆ ಸೇರಿಸಲಾಯಿತು. ಈವರೆಗೆ ಸಾಮಾಜಿಕ ನ್ಯಾಯ ಪಡೆದುಕೊಳ್ಳಲು ಆಗುತ್ತಿಲ್ಲ’ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ.ನಂಜುಂಡಿ ವಿಷಾದಿಸಿದರು.</p>.<p>‘ವಿಶ್ವಕರ್ಮ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡಬೇಕು’ ಎಂದು ಒತ್ತಾ<br />ಯಿಸಿ ಇಲ್ಲಿ ಹಮ್ಮಿಕೊಂಡಿರುವ ಜಾಗೃತಾ ಸಮಾವೇಶಕ್ಕಾಗಿ ಸೋಮವಾರ ಭೇಟಿ ನೀಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದರು.</p>.<p>‘ವಿಶ್ವಕರ್ಮ ಸಮಾಜದವರು ಮೂಲತಃ ಗ್ರಾಮೀಣ ಪ್ರದೇಶದಿಂದ ಬಂದವರು. ಶಿಕ್ಷಣದಿಂದ ಸಾಕಷ್ಟು ಹಿಂದುಳಿದಿದ್ದಾರೆ. ಶಿಕ್ಷಣ ಪಡೆದವರಿಗೆ ಉದ್ಯೋಗ ಸಿಗುತ್ತಿಲ್ಲ. ಈ ಸಮಾಜವನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಸಮಾಜದವರು ರಾಜಕೀಯ ಪ್ರಜ್ಞೆಯಿಂದ ದೂರ ಇದ್ದಾರೆ. ಮೀಸಲಾತಿ ಇಲ್ಲದೇ ಅಧಿಕಾರ ಸಿಗದು. ಅಧಿಕಾರ ಇಲ್ಲದೇ ಸಮಾಜದ ಉದ್ಧಾರವಾಗದು. ಎಸ್ಟಿ ಮೀಸಲಾತಿ ನಮ್ಮ ಹಕ್ಕು, ಈ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ 745 ಹೋಬಳಿಗಳಿಗೆ ಭೇಟಿ ನೀಡಿ ಸಮಾವೇಶ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>