ಮುಂಡರಗಿ: ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಈಚೆಗೆ ಜರುಗಿದ 2023-24ನೇ ಸಾಲಿನ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ತೋರಿದ್ದಾರೆ.
ವಿದ್ಯಾರ್ಥಿನಿ ಪವಿತ್ರ ರಘುನಾಥನಹಳ್ಳಿ ಭಲ್ಲೆ ಎಸೆತದಲ್ಲಿ ಪ್ರಥಮ ಹಾಗೂ ವಿಜಯ ಬಾರಕೇರ ಗುಡ್ಡಗಾಡು ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕ- ಬಾಲಕಿಯರ ವಾಲಿಬಾಲ್ ತಂಡಗಳು ಹಾಗೂ ಬಾಲಕಿಯರ ಟೆನಿಕ್ವಾಯಿಟ್ ತಂಡವು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣದ ಉಪನ್ಯಾಸಕ ಕುಮಾರ ಕಲ್ಮಠ ವರಿಗೆ ಅನ್ನದಾನೀಶ್ವರ ಸ್ವಾಮೀಜಿ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು, ಕಾಲೇಜು ಸಿಬ್ಬಂದಿ ಅಭಿನಂದನೆ ಸಲ್ಲಿಸಿದರು.