ಅರಣ್ಯ ಇಲಾಖೆಯ ಅಧಿಕಾರಿಗಳು ಈಚೆಗೆ ಬಂದು ಕೆರೆಯನ್ನು ಸರ್ವೆ ಮಾಡಿಕೊಂಡು ಹೋಗಿರುತ್ತಾರೆ. ಕೆರೆ ಅಭಿವೃದ್ಧಿ ಕಾಮಗಾರಿಯೂ ಮುಗಿಯುತ್ತಿದ್ದಂತೆ ಸ್ಥಳೀಯ ಯುವಕರ ತಂಡಗಳನ್ನು ಬಳಸಿಕೊಂಡು ವಿವಿಧ ಜಾತಿಯ 3 ಸಾವಿರ ಸಸಿಗಳನ್ನು ನೆಟ್ಟು ಹಸಿರಿನ ವಾತಾವರಣ ನಿರ್ಮಾಣ ಮಾಡುವ ಭರವಸೆ ನೀಡಿದ್ದಾರೆ. ಇದರಿಂದ ಅಂತರ್ಜಲ ವೃದ್ಧಿಯಾಗಲಿದೆ. ಹಸಿರು ನಳನಳಿಸಲಿದೆ ಎಂದು ಸಮಿತಿಯ ಸದಸ್ಯರಾದ ಬಸವರಾಜ ವಂಕಲಕುಂಟಿ, ಶಿವನಗೌಡ ಪಾಟೀಲ, ನಿಂಗನಗೌಡ ಲಕ್ಕನಗೌಡ್ರ, ಉಮೇಶ ಸಂಗನಾಳಮಠ, ಆನಂದ ಕುಲಕರ್ಣಿ ಸಂತಸ ವ್ಯಕ್ತಪಡಿಸಿದರು.