‘ಮಾರ್ಚ್ 29ಕ್ಕೆ ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಐದು ದಿನಗಳಲ್ಲಿ ನೀರು ಮೇವುಂಡಿ ಹತ್ತಿರ ನಮ್ಮ ಜಾಕ್ವೆಲ್ ತಲುಪುವ ನಿರೀಕ್ಷೆ ಇದೆ. ನಂತರ ಮತ್ತೆ ಎಂದಿನಂತೆ ನದಿ ನೀರು ಪೂರೈಸಲಾಗುವುದು. ಅದಕ್ಕೂ ಪೂರ್ವದಲ್ಲಿ ಜಾಕ್ವೆಲ್ ಸಮೀಪ ರೈತರು ಅನಧಿಕೃತವಾಗಿ ನೀರನ್ನು ಬಳಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಡಕ್ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ವಾಸುದೇವ ಸ್ವಾಮಿ ಮತ್ತು ನಾನು ಮೇವುಂಡಿಗೆ ತೆರಳಿ ರೈತರಿಗೆ ಮನವರಿಕೆ ಮಾಡಲಿದ್ದೇವೆ. ಅಲ್ಲಿಯೇ ಕಾಯಂ ಆಗಿ ಪೊಲೀಸ್ ವ್ಯಾನ್ ನಿಲ್ಲಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ’ ಎಂದು ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ‘ಪ್ರಜಾವಾಣಿ’ಗೆ ತಿಳಿಸಿದರು.