ಮುಂಡರಗಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹರಿದಿರುವ ತುಂಗಭದ್ರಾ ನದಿ ಪಾತ್ರವು ಸಂಪೂರ್ಣವಾಗಿ ಬರಿದಾಗಿ, ಜನಜೀವನ ಅಸ್ತವ್ಯಸ್ತಗೊಂಡಿತ್ತು. ತಾಲ್ಲೂಕಿನ ಹಮ್ಮಿಗಿ ಗ್ರಾಮದಲ್ಲಿರುವ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಬ್ಯಾರೇಜಿಗೆ ಭದ್ರಾ ಜಲಾಶಯದಿಂದ ಈಗ 0.3 ಟಿಎಂಸಿ ಅಡಿ ನೀರು ಹರಿಸಿದ್ದರಿಂದ ನದಿ ಪಾತ್ರದ ಗ್ರಾಮಗಳ ಜನತೆಯಲ್ಲಿ ಸಂತಸ ಮೂಡಿದೆ.