<p>ಲಕ್ಷ್ಮೇಶ್ವರ: ಕುಡಿಯುವ ನೀರು ಪೂರೈಕೆಯಲ್ಲಿ ಪುರಸಭೆ ಅಧಿಕಾರಿಗಳು ಭಾರಿ ಅವ್ಯವಹಾರ ನಡೆಸಿದ್ದು, ಈ ಕುರಿತು ಲೋಕಾಯುಕ್ತರಿಂದ ತನಿಖೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಗೋಡಿ ಆಗ್ರಹಿಸಿದರು.</p>.<p>ಪಟ್ಟಣದ ತಾಲ್ಲೂಕು ಕಾರ್ಯನಿತರ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಳೆದ ಒಂದು ತಿಂಗಳಿಂದ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಈ ಕುರಿತು ವಾರದ ಹಿಂದೆ ಸಮಸ್ಯೆ ಪರಿಹರಿಸುವಂತೆ ನಮ್ಮ ಸಂಘಟನೆಯಿಂದ ಮನವಿ ಮಾಡಲಾಗಿತ್ತು. ಅಧಿಕಾರಿಗಳಿಗೆ ಜನ ಅನುಭವಿಸುತ್ತಿರುವ ಬವಣೆ ಅರ್ಥ ಆಗುತ್ತಿಲ್ಲ. ಮೇವುಂಡಿ ಜಾಕ್ವೆಲ್ನಲ್ಲಿನ ಮೋಟಾರ್ ದುರಸ್ತಿ ಮಾಡಿಸುವಲ್ಲಿ ಪುರಸಭೆ ಅಧಿಕಾರಿಗಳು ಭಾರಿ ಅವ್ಯವಹಾರ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ ಎಂದರು.</p>.<p>‘ಈ ಕುರಿತು ಜಿಲ್ಲಾಧಿಕಾರಿಗಳು ಲೋಕಾಯುಕ್ತರಿಂದ ತನಿಖೆ ಮಾಡಿಸಬೇಕು. ಬರುವ ಶುಕ್ರವಾರದ ಒಳಗೆ ನೀರು ಪೂರೈಕೆ ಆಗದಿದ್ದರೆ ಶನಿವಾರ ಲಕ್ಷ್ಮೇಶ್ವರ ಬಂದ್ ಮಾಡಿ ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ ಅಮರಾಪುರ ಮಾತನಾಡಿ ‘ಮೂರು ದಿನಗಳಲ್ಲಿ ಜನತೆಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಭರವಸೆ ನೀಡಿದ್ದರು. ಆದರೆ ಇನ್ನೂ ನೀರು ಪೂರೈಕೆ ಆಗಿಲ್ಲ. ಇದರಿಂದಾಗಿ ಪುರಸಭೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದರು.</p>.<p>ಇಸ್ಮಾಯಿಲ್ ಆಡೂರ, ಪ್ರವೀಣ ಆಚಾರಿ, ಗೌಸ್ ಮೋದಿನ್, ತಿಪ್ಪಣ್ಣ ರೊಟ್ಟಿಗವಾಡ, ಮಹಮ್ಮದಲಿ ಶಿಗ್ಗಾವಿ, ಮೈನು ಮನಿಯಾರ, ಮಂಜುನಾಥ ಹೊತ್ತಗಿಮಠ. ಕೈಸರ್ ಮಹಮ್ಮದಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಷ್ಮೇಶ್ವರ: ಕುಡಿಯುವ ನೀರು ಪೂರೈಕೆಯಲ್ಲಿ ಪುರಸಭೆ ಅಧಿಕಾರಿಗಳು ಭಾರಿ ಅವ್ಯವಹಾರ ನಡೆಸಿದ್ದು, ಈ ಕುರಿತು ಲೋಕಾಯುಕ್ತರಿಂದ ತನಿಖೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಗೋಡಿ ಆಗ್ರಹಿಸಿದರು.</p>.<p>ಪಟ್ಟಣದ ತಾಲ್ಲೂಕು ಕಾರ್ಯನಿತರ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಳೆದ ಒಂದು ತಿಂಗಳಿಂದ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಈ ಕುರಿತು ವಾರದ ಹಿಂದೆ ಸಮಸ್ಯೆ ಪರಿಹರಿಸುವಂತೆ ನಮ್ಮ ಸಂಘಟನೆಯಿಂದ ಮನವಿ ಮಾಡಲಾಗಿತ್ತು. ಅಧಿಕಾರಿಗಳಿಗೆ ಜನ ಅನುಭವಿಸುತ್ತಿರುವ ಬವಣೆ ಅರ್ಥ ಆಗುತ್ತಿಲ್ಲ. ಮೇವುಂಡಿ ಜಾಕ್ವೆಲ್ನಲ್ಲಿನ ಮೋಟಾರ್ ದುರಸ್ತಿ ಮಾಡಿಸುವಲ್ಲಿ ಪುರಸಭೆ ಅಧಿಕಾರಿಗಳು ಭಾರಿ ಅವ್ಯವಹಾರ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ ಎಂದರು.</p>.<p>‘ಈ ಕುರಿತು ಜಿಲ್ಲಾಧಿಕಾರಿಗಳು ಲೋಕಾಯುಕ್ತರಿಂದ ತನಿಖೆ ಮಾಡಿಸಬೇಕು. ಬರುವ ಶುಕ್ರವಾರದ ಒಳಗೆ ನೀರು ಪೂರೈಕೆ ಆಗದಿದ್ದರೆ ಶನಿವಾರ ಲಕ್ಷ್ಮೇಶ್ವರ ಬಂದ್ ಮಾಡಿ ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ ಅಮರಾಪುರ ಮಾತನಾಡಿ ‘ಮೂರು ದಿನಗಳಲ್ಲಿ ಜನತೆಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಭರವಸೆ ನೀಡಿದ್ದರು. ಆದರೆ ಇನ್ನೂ ನೀರು ಪೂರೈಕೆ ಆಗಿಲ್ಲ. ಇದರಿಂದಾಗಿ ಪುರಸಭೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದರು.</p>.<p>ಇಸ್ಮಾಯಿಲ್ ಆಡೂರ, ಪ್ರವೀಣ ಆಚಾರಿ, ಗೌಸ್ ಮೋದಿನ್, ತಿಪ್ಪಣ್ಣ ರೊಟ್ಟಿಗವಾಡ, ಮಹಮ್ಮದಲಿ ಶಿಗ್ಗಾವಿ, ಮೈನು ಮನಿಯಾರ, ಮಂಜುನಾಥ ಹೊತ್ತಗಿಮಠ. ಕೈಸರ್ ಮಹಮ್ಮದಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>