<p><strong>ನರಗುಂದ: </strong>ಕಲುಷಿತ ನೀರು ಸೇವನೆಯಿಂದ ಪಟ್ಟಣದ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.</p>.<p>ಪಟ್ಟಣದ ದಂಡಾಪೂರ, ದೇಸಾಯಿಭಾವಿ ಓಣಿ, ಅರ್ಭಾಣ ಓಣಿಯ ನಳಗಳಿಗೆ ಕಲುಷಿತ ನೀರು ಪೂರೈಕೆಯಾಗಿದ್ದು, ಇದನ್ನು ಕುಡಿದ ಜನರು ವಾಂತಿ, ಭೇದಿಯಿಂದ ಬಳಲಿದರು. ತೀವ್ರವಾಗಿ ಅಸ್ವಸ್ಥಗೊಂಡ ರೋಗಿಗಳನ್ನು ದಾಖಲಿಸಿಕೊಂಡು ಚಕಿತ್ಸೆ ನೀಡಲಾಗುತ್ತಿದೆ, ಇನ್ನುಳಿದವರಿಗೆ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ ಎಂದು ವೈದ್ಯರು ತಿಳಿಸಿದರು.</p>.<p>ಕುಡಿಯುವ ನೀರು ಪೂರೈಸುವ ಪೈಪ್ಗಳು ಅಲ್ಲಲ್ಲಿ ಒಡೆದಿದ್ದು, ಕಲುಷಿತ ನೀರು ಮಿಶ್ರಣವಾಗುತ್ತಿದೆ. ಕೆಲವೊಮ್ಮೆ ಚರಂಡಿ ನೀರು, ಕುಡಿಯುವ ನೀರಿನ ಜತೆಗೆ ಮಿಶ್ರಣಗೊಳ್ಳುತ್ತದೆ ಎಂದು ಸಾರ್ವಜನಿಕರು ದೂರಿದರು.</p>.<p>ಸೋಮವಾರ ತಹಶೀಲ್ದಾರ್ ಆಶಪ್ಪ ಅವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಪುರಸಭೆ ಸಿಬ್ಬಂದಿ ಕರೆಯಿಸಿ, ಕಲುಷಿತ ನೀರು ಪೂರೈಕೆ ಬಗ್ಗೆ ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ: </strong>ಕಲುಷಿತ ನೀರು ಸೇವನೆಯಿಂದ ಪಟ್ಟಣದ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.</p>.<p>ಪಟ್ಟಣದ ದಂಡಾಪೂರ, ದೇಸಾಯಿಭಾವಿ ಓಣಿ, ಅರ್ಭಾಣ ಓಣಿಯ ನಳಗಳಿಗೆ ಕಲುಷಿತ ನೀರು ಪೂರೈಕೆಯಾಗಿದ್ದು, ಇದನ್ನು ಕುಡಿದ ಜನರು ವಾಂತಿ, ಭೇದಿಯಿಂದ ಬಳಲಿದರು. ತೀವ್ರವಾಗಿ ಅಸ್ವಸ್ಥಗೊಂಡ ರೋಗಿಗಳನ್ನು ದಾಖಲಿಸಿಕೊಂಡು ಚಕಿತ್ಸೆ ನೀಡಲಾಗುತ್ತಿದೆ, ಇನ್ನುಳಿದವರಿಗೆ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ ಎಂದು ವೈದ್ಯರು ತಿಳಿಸಿದರು.</p>.<p>ಕುಡಿಯುವ ನೀರು ಪೂರೈಸುವ ಪೈಪ್ಗಳು ಅಲ್ಲಲ್ಲಿ ಒಡೆದಿದ್ದು, ಕಲುಷಿತ ನೀರು ಮಿಶ್ರಣವಾಗುತ್ತಿದೆ. ಕೆಲವೊಮ್ಮೆ ಚರಂಡಿ ನೀರು, ಕುಡಿಯುವ ನೀರಿನ ಜತೆಗೆ ಮಿಶ್ರಣಗೊಳ್ಳುತ್ತದೆ ಎಂದು ಸಾರ್ವಜನಿಕರು ದೂರಿದರು.</p>.<p>ಸೋಮವಾರ ತಹಶೀಲ್ದಾರ್ ಆಶಪ್ಪ ಅವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಪುರಸಭೆ ಸಿಬ್ಬಂದಿ ಕರೆಯಿಸಿ, ಕಲುಷಿತ ನೀರು ಪೂರೈಕೆ ಬಗ್ಗೆ ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>