<p><strong>ಮುಂಡರಗಿ:</strong> ‘ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಮಹಿಳೆಯರು ಜೀವನದಲ್ಲಿ ಮುಂದೆ ಬರಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕಿ ಪದ್ಮಾ ಗೋವಿಂದರಡ್ಡಿ ತಿಳಿಸಿದರು.</p>.<p>ಇಲ್ಲಿಯ ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಎನ್.ಎಸ್.ಎಸ್. ಘಟಕ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ನಾಯಕತ್ವ ಶಿಬಿರ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಹಿಳೆಯರು ಉನ್ನತ ಪದವಿ ಹಾಗೂ ಉನ್ನತ ಶಿಕ್ಷಣ ಪಡೆದುಕೊಳ್ಳುವುದು ಕಷ್ಟವಾಗಿತ್ತು. ಇಂದಿನ ಸಮಾಜದಲ್ಲಿ ಪುರುಷರಂತೆ ಮಹಿಳೆಯರು ಕೂಡ ಎಲ್ಲ ರಂಗಗಳಲ್ಲಿ ಮುಂದುವರಿಯಬಹುದಾಗಿದೆ’ ಎಂದು ಹೇಳಿದರು.</p>.<p>ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ತಿಮ್ಮಾನಾಯಕ ಕೆ.ಬಿ. ಮಾತನಾಡಿ, ‘ಮಹಿಳೆಯರು ಕುಟುಂಬ ನಿರ್ವಹಿಸಿದಂತೆ ಸಮಾಜವನ್ನು ಸುಲಭವಾಗಿ ನಿರ್ವಹಿಸಬಲ್ಲರು’ ಎಂದು ಅಭಿಪ್ರಾಯಪಟ್ಟರು.</p>.<p>ಹಿರಿಯ ಉಪನ್ಯಾಸಕಿ ಕಾವೇರಿ ಬೋಲಾ ಮಾತನಾಡಿ, ‘ಜೀವನದಲ್ಲಿ ನಿಶ್ವಿತ ಗುರಿಯಿಂದ ಸಾಧನೆ ಸಾಧ್ಯ. ಸಾಧನೆಗೆ ಪುರುಷ, ಮಹಿಳೆ ಎಂಬ ಬೇಧ ಭಾವವಿಲ್ಲ’ ಎಂದು ತಿಳಿಸಿದರು.</p>.<p>ಉಪನ್ಯಾಸಕಿ ಶ್ವೇತಾ ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಯಮುನಾ ನಾಯ್ಕ್ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು. ಕಾಶೀನಾಥ ಬಿಳಿಮಗ್ಗದ ಮಾತನಾಡಿದರು. ಪ್ರಾಚಾರ್ಯೆ ಉಮಾ ಕೊಳ್ಳಿ, ಉಪನ್ಯಾಸಕ ಬಸವರಾಜ ಹೂಗಾರ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ‘ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಮಹಿಳೆಯರು ಜೀವನದಲ್ಲಿ ಮುಂದೆ ಬರಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕಿ ಪದ್ಮಾ ಗೋವಿಂದರಡ್ಡಿ ತಿಳಿಸಿದರು.</p>.<p>ಇಲ್ಲಿಯ ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಎನ್.ಎಸ್.ಎಸ್. ಘಟಕ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ನಾಯಕತ್ವ ಶಿಬಿರ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಹಿಳೆಯರು ಉನ್ನತ ಪದವಿ ಹಾಗೂ ಉನ್ನತ ಶಿಕ್ಷಣ ಪಡೆದುಕೊಳ್ಳುವುದು ಕಷ್ಟವಾಗಿತ್ತು. ಇಂದಿನ ಸಮಾಜದಲ್ಲಿ ಪುರುಷರಂತೆ ಮಹಿಳೆಯರು ಕೂಡ ಎಲ್ಲ ರಂಗಗಳಲ್ಲಿ ಮುಂದುವರಿಯಬಹುದಾಗಿದೆ’ ಎಂದು ಹೇಳಿದರು.</p>.<p>ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ತಿಮ್ಮಾನಾಯಕ ಕೆ.ಬಿ. ಮಾತನಾಡಿ, ‘ಮಹಿಳೆಯರು ಕುಟುಂಬ ನಿರ್ವಹಿಸಿದಂತೆ ಸಮಾಜವನ್ನು ಸುಲಭವಾಗಿ ನಿರ್ವಹಿಸಬಲ್ಲರು’ ಎಂದು ಅಭಿಪ್ರಾಯಪಟ್ಟರು.</p>.<p>ಹಿರಿಯ ಉಪನ್ಯಾಸಕಿ ಕಾವೇರಿ ಬೋಲಾ ಮಾತನಾಡಿ, ‘ಜೀವನದಲ್ಲಿ ನಿಶ್ವಿತ ಗುರಿಯಿಂದ ಸಾಧನೆ ಸಾಧ್ಯ. ಸಾಧನೆಗೆ ಪುರುಷ, ಮಹಿಳೆ ಎಂಬ ಬೇಧ ಭಾವವಿಲ್ಲ’ ಎಂದು ತಿಳಿಸಿದರು.</p>.<p>ಉಪನ್ಯಾಸಕಿ ಶ್ವೇತಾ ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಯಮುನಾ ನಾಯ್ಕ್ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು. ಕಾಶೀನಾಥ ಬಿಳಿಮಗ್ಗದ ಮಾತನಾಡಿದರು. ಪ್ರಾಚಾರ್ಯೆ ಉಮಾ ಕೊಳ್ಳಿ, ಉಪನ್ಯಾಸಕ ಬಸವರಾಜ ಹೂಗಾರ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>