<p><strong>ಲಕ್ಷ್ಮೇಶ್ವರ</strong>: ಕಳೆದ ಎರಡು ವರ್ಷಗಳಿಂದ ನೂತನ ಗ್ರಾಮ ಪಂಚಾಯಿತಿ ಯೋಜನೆ ಅನುದಾನದಲ್ಲಿ ಜಿಲ್ಲಾ ಪಂಚಾಯಿತಿ ಇಲಾಖೆ ವತಿಯಿಂದ ನಿರ್ಮಿಸುತ್ತಿರುವ ತಾಲ್ಲೂಕಿನ ಮಾಡಳ್ಳಿ ಗ್ರಾಮದ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಪೂರ್ಣಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಕಟ್ಟದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಇದೀಗ ಕುಡುಕರ ಅಡ್ಡೆಯಾಗಿ ಮಾರ್ಪಟ್ಟಿದೆ. ಗ್ರಾಮದಲ್ಲಿ ಹೊಸ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಿದರೇ ಗ್ರಾಮದ ಅಭಿವೃದ್ಧಿ ಆಗುತ್ತದೆ ಎಂದು ಕನಸು ಕಂಡಿದ್ದ ಗ್ರಾಮಸ್ಥರ ಕನಸು ಈಡೇರದಂತಾಗಿದೆ. ಆದಷ್ಟೂ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>‘ಹೊಸ ಪಂಚಾಯಿತಿ ಕಟ್ಟಡ ಅರ್ಧಕ್ಕೆ ನಿಂತಿದೆ. ಮತ್ತೆ ಕಾಮಗಾರಿ ಪ್ರಾರಂಭಿಸಲು ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ₹20 ಲಕ್ಷ ಕ್ರಿಯಾಯೋಜನೆ ಸಿದ್ಧ ಪಡಿಸಲಾಗಿದೆ. ಪ್ರಕ್ರಿಯೆ ಮುಗಿದ ತಕ್ಷಣ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು’ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ</strong>: ಕಳೆದ ಎರಡು ವರ್ಷಗಳಿಂದ ನೂತನ ಗ್ರಾಮ ಪಂಚಾಯಿತಿ ಯೋಜನೆ ಅನುದಾನದಲ್ಲಿ ಜಿಲ್ಲಾ ಪಂಚಾಯಿತಿ ಇಲಾಖೆ ವತಿಯಿಂದ ನಿರ್ಮಿಸುತ್ತಿರುವ ತಾಲ್ಲೂಕಿನ ಮಾಡಳ್ಳಿ ಗ್ರಾಮದ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಪೂರ್ಣಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಕಟ್ಟದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಇದೀಗ ಕುಡುಕರ ಅಡ್ಡೆಯಾಗಿ ಮಾರ್ಪಟ್ಟಿದೆ. ಗ್ರಾಮದಲ್ಲಿ ಹೊಸ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಿದರೇ ಗ್ರಾಮದ ಅಭಿವೃದ್ಧಿ ಆಗುತ್ತದೆ ಎಂದು ಕನಸು ಕಂಡಿದ್ದ ಗ್ರಾಮಸ್ಥರ ಕನಸು ಈಡೇರದಂತಾಗಿದೆ. ಆದಷ್ಟೂ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>‘ಹೊಸ ಪಂಚಾಯಿತಿ ಕಟ್ಟಡ ಅರ್ಧಕ್ಕೆ ನಿಂತಿದೆ. ಮತ್ತೆ ಕಾಮಗಾರಿ ಪ್ರಾರಂಭಿಸಲು ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ₹20 ಲಕ್ಷ ಕ್ರಿಯಾಯೋಜನೆ ಸಿದ್ಧ ಪಡಿಸಲಾಗಿದೆ. ಪ್ರಕ್ರಿಯೆ ಮುಗಿದ ತಕ್ಷಣ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು’ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>