ಗದಗ: ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ಧಿ ಸಂದೇಶದ ಜಾಗೃತಿ ರಥಕ್ಕೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಭಾನುವಾರ ಚಾಲನೆ ನೀಡಿದರು.
ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಪ್ರವಾಸಿ ಮಿತ್ರರು, ಗಣ್ಯರು ಇದ್ದರು.
ಮುಳಗುಂದ ನಾಕಾ, ಜುಮ್ಮಾ ಮಸೀದಿ ಸರ್ಕಲ್, ಗಾಂಧಿ ವೃತ್ತ, ರೋಟರಿ ವೃತ್ತ, ಹಳೆ ಡಿಸಿ ಆಫೀಸ್ ವೃತ್ತದ ಮೂಲಕ ಭೀಷ್ಮ ಕೆರೆಯ ಬಸವೇಶ್ವರ ಪುತ್ಥಳಿವರೆಗೆ ಬಂದು ಜಾಥಾ ಮುಕ್ತಾಯಗೊಂಡಿತು.
ಬಸವೇಶ್ವರ ಪುತ್ಥಳಿ ಆವರಣದಲ್ಲಿ ಸಸಿ ನೆಡುವುದರ ಮೂಲಕ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಯಿತು.