<p><strong>ನರೇಗಲ್</strong>: ಯಜ್ಞೋಪವೀತ ಪರಮ ಪವಿತ್ರವಾದದ್ದು, ಪ್ರಜಾಪತಿಗಿಂತಲೂ ಮೊದಲೇ ಉತ್ಪನ್ನಗೊಂಡಿದ್ದು, ಆಯುಷ್ಯವನ್ನು ಹೆಚ್ಚಿಸುವಂತದ್ದು, ಮನುಷ್ಯನನ್ನು ಶುಭ್ರ ಮಾಡುವಂತದ್ದು, ಬಲ ಹಾಗೂ ತೇಜಸ್ಸನ್ನು ಹೆಚ್ಚಿಸುವಂತದ್ದು’ ಎಂದು ದತ್ತಾತ್ರೇಯ ದೇವಸ್ಥಾನ ಅರ್ಚಕ ಶ್ರೀವಲಭಶಾಸ್ತ್ರಿ ಸದರಜೋಶಿ ಹೇಳಿದರು.</p>.<p>ಪಟ್ಟಣದ ದತ್ತಾತ್ರೇಯ ದೇವಸ್ಥಾನದಲ್ಲಿ ಶನಿವಾರ ನಡೆದ ಶ್ರಾವಣಿ ಯಜ್ಞೋಪವೀತ ಧಾರಣೆ ಹಾಗೂ ಹೋಮದ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>‘ಯಜ್ಞೋಪವೀತ ಧಾರಣೆಗೆ ಸಂಸ್ಕೃತಿಯಲ್ಲಿ ವಿಶೇಷ ಮಹತ್ವವನ್ನು ನೀಡಲಾಗಿದೆ. ಅಂಗಡಿಯಿಂದ ತಂದ ಜನಿವಾರಕ್ಕೆ ಸಂಸ್ಕಾರ ಮಾಡಿ ಯಜ್ಞೋಪವೀತಾಭಿಮಾನಿ ದೇವತೆಗಳನ್ನು ಪೂಜಿಸಿ ಶ್ರದ್ಧಾ ಭಕ್ತಿಯಿಂದ ಧರಿಸಬೇಕು. ಜನಿವಾರ ಧರಿಸಿದ ಮೇಲೆ ಯಾವುದೇ ಕಾರಣಕ್ಕೂ ಧರಿಸದೇ ಬಿಡುವಂತಿಲ್ಲ’ ಎಂದರು.</p>.<p>ಅರುಣ ಕುಲಕರ್ಣಿ ಮಾತನಾಡಿ, ‘ಯಜ್ಞೋಪವೀತವನ್ನು ಧರಿಸಿದ ವ್ಯಕ್ತಿ ಕೆಲವು ಆಚರಣೆಗಳನ್ನು ಮಾಡಲೇಬೇಕಾಗುತ್ತದೆ. ನಿತ್ಯವೂ ತ್ರಿಕಾಲ ಸಂದ್ಯಾವಂದನೆ, ಗಾಯತ್ರಿ ಮಂತ್ರ ಉಚ್ಛಾರಣೆ ಹಾಗೂ ಜನಿವಾರ ತುಂಡಾದರೆ ತಕ್ಷಣವೇ ಅದನ್ನು ಬದಲಿಸಬೇಕು’ ಎಂದರು.</p>.<p>ಅರುಣ ಗ್ರಾಮಪುರೋಹಿತ, ಆರ್.ಡಿ ಕುಲಕರ್ಣಿ, ನಾಗೇಶಭಟ್ಟ ಗ್ರಾಮಪುರೋಹಿತ, ಆನಂದ ಕುಲಕರ್ಣಿ, ಅಜೀತ ಕುಲಕರ್ಣಿ, ಪ್ರಶಾಂತ ಗ್ರಾಮಪುರೋಹಿತ, ಆನಂದ ಕಾಳೆ, ನಾಗರಾಜ ನಾಡಗೇರ, ರಾಮಕೃಷ್ಣ ಸದರಜೋಶಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್</strong>: ಯಜ್ಞೋಪವೀತ ಪರಮ ಪವಿತ್ರವಾದದ್ದು, ಪ್ರಜಾಪತಿಗಿಂತಲೂ ಮೊದಲೇ ಉತ್ಪನ್ನಗೊಂಡಿದ್ದು, ಆಯುಷ್ಯವನ್ನು ಹೆಚ್ಚಿಸುವಂತದ್ದು, ಮನುಷ್ಯನನ್ನು ಶುಭ್ರ ಮಾಡುವಂತದ್ದು, ಬಲ ಹಾಗೂ ತೇಜಸ್ಸನ್ನು ಹೆಚ್ಚಿಸುವಂತದ್ದು’ ಎಂದು ದತ್ತಾತ್ರೇಯ ದೇವಸ್ಥಾನ ಅರ್ಚಕ ಶ್ರೀವಲಭಶಾಸ್ತ್ರಿ ಸದರಜೋಶಿ ಹೇಳಿದರು.</p>.<p>ಪಟ್ಟಣದ ದತ್ತಾತ್ರೇಯ ದೇವಸ್ಥಾನದಲ್ಲಿ ಶನಿವಾರ ನಡೆದ ಶ್ರಾವಣಿ ಯಜ್ಞೋಪವೀತ ಧಾರಣೆ ಹಾಗೂ ಹೋಮದ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>‘ಯಜ್ಞೋಪವೀತ ಧಾರಣೆಗೆ ಸಂಸ್ಕೃತಿಯಲ್ಲಿ ವಿಶೇಷ ಮಹತ್ವವನ್ನು ನೀಡಲಾಗಿದೆ. ಅಂಗಡಿಯಿಂದ ತಂದ ಜನಿವಾರಕ್ಕೆ ಸಂಸ್ಕಾರ ಮಾಡಿ ಯಜ್ಞೋಪವೀತಾಭಿಮಾನಿ ದೇವತೆಗಳನ್ನು ಪೂಜಿಸಿ ಶ್ರದ್ಧಾ ಭಕ್ತಿಯಿಂದ ಧರಿಸಬೇಕು. ಜನಿವಾರ ಧರಿಸಿದ ಮೇಲೆ ಯಾವುದೇ ಕಾರಣಕ್ಕೂ ಧರಿಸದೇ ಬಿಡುವಂತಿಲ್ಲ’ ಎಂದರು.</p>.<p>ಅರುಣ ಕುಲಕರ್ಣಿ ಮಾತನಾಡಿ, ‘ಯಜ್ಞೋಪವೀತವನ್ನು ಧರಿಸಿದ ವ್ಯಕ್ತಿ ಕೆಲವು ಆಚರಣೆಗಳನ್ನು ಮಾಡಲೇಬೇಕಾಗುತ್ತದೆ. ನಿತ್ಯವೂ ತ್ರಿಕಾಲ ಸಂದ್ಯಾವಂದನೆ, ಗಾಯತ್ರಿ ಮಂತ್ರ ಉಚ್ಛಾರಣೆ ಹಾಗೂ ಜನಿವಾರ ತುಂಡಾದರೆ ತಕ್ಷಣವೇ ಅದನ್ನು ಬದಲಿಸಬೇಕು’ ಎಂದರು.</p>.<p>ಅರುಣ ಗ್ರಾಮಪುರೋಹಿತ, ಆರ್.ಡಿ ಕುಲಕರ್ಣಿ, ನಾಗೇಶಭಟ್ಟ ಗ್ರಾಮಪುರೋಹಿತ, ಆನಂದ ಕುಲಕರ್ಣಿ, ಅಜೀತ ಕುಲಕರ್ಣಿ, ಪ್ರಶಾಂತ ಗ್ರಾಮಪುರೋಹಿತ, ಆನಂದ ಕಾಳೆ, ನಾಗರಾಜ ನಾಡಗೇರ, ರಾಮಕೃಷ್ಣ ಸದರಜೋಶಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>