<p><strong>ರೋಣ:</strong> ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ತೇವಾಂಶದ ಹೆಚ್ಚಾದ ಕಾರಣ ತಾಲ್ಲೂಕಿನ ರೈತರ ಹೆಸರು ಬೆಳೆಗೆ ಹಳದಿ ರೋಗ ಆವರಿಸುತ್ತಿದ್ದು, ರೋಗ ನಿಯಂತ್ರಣಕ್ಕೆ ರೈತರು ಪರದಾಡುವ ಸ್ಥಿತಿ ಉಂಟಾಗಿದೆ.</p>.<p>ತಾಲ್ಲೂಕಿನ ಬೆಳವಣಕಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಕೃಷಿ ಭೂಮಿಗಳಲ್ಲಿ ಈಗಾಗಲೇ ಫಸಲು ಬಿಡುವ ಹಂತಕ್ಕೆ ಹೆಸರು ಬೆಳೆ ತಲುಪಿದೆ. ಹಳದಿ ರೋಗ ವ್ಯಾಪಕವಾಗಿ ಹರಡುತ್ತಿರುವ ಕಾರಣ ಇಳುವರಿ ಕುಂಟಿತಗೊಳ್ಳುವ ಭೀತಿಗೆ ರೈತರು ಒಳಗಾಗಿದ್ದಾರೆ.</p>.<p>‘ರೈತರು ಈಗಾಗಲೇ ಸಾಕಷ್ಟು ಖರ್ಚು ಮಾಡಿದ್ದು, ರೋಗ ನಿಯಂತ್ರಣಕ್ಕಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಿಗಳನ್ನು ಡ್ರೋನ್ ಮೂಲಕ ಸಿಂಪರಣೆಗೆ ಸಾಕಷ್ಟು ಖರ್ಚು ಮಾಡಿದ್ದೇವೆ ಆದರೂ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ’ ಎಂದು ಬೆಳವಣಿಕಿ ಗ್ರಾಮದ ರೈತ ಶಿವಾನಂದ ಅಳಗವಾಡಿ ಹೇಳಿದರು.</p>.<p>‘ಹಳದಿ ರೋಗ ನಿಯಂತ್ರಣಕ್ಕೆ ಬಾರದಿದ್ದರೆ ಕಾಳು ಕಟ್ಟುವುದಿಲ್ಲ ಈ ಹಂತದವರೆಗೂ ಉತ್ತಮವಾಗಿ ಬೆಳೆ ಬಂದಿದ್ದರು ಫಸಲು ಬಿಡುವ ಸಮಯಕ್ಕೆ ಸರಿಯಾಗಿ ರೋಗ ವ್ಯಾಪಿಸಿದೆ’ ಎಂದು ರೈತ ಭೀಮಪ್ಪ ತಾಳಿ ಮತ್ತು ಬಸವಂತಪ್ಪ ಸುಣಗದ ಅಳಲು ತೋಡಿಕೊಂಡರು.</p>.<p><strong>ರೋಗ ನಿಯಂತ್ರಣಕ್ಕೆ ಸಲಹೆ</strong></p><p> ಹಳದಿ ರೋಗ ನಿಯಂತ್ರಣಕ್ಕೆ ಬಿತ್ತನೆ ಪೂರ್ವದಲ್ಲಿಯೇ ಇಮಿಡಾಕ್ಲೋಪ್ರೀಡ್ 60 ಎಫ್.ಎಸ್ 5 ಮಿ.ಗ್ರಾಂ ಪ್ರತಿ ಕೆಜಿ ಬಿತ್ತನೆ ಬೀಜಕ್ಕೆ ಲೇಪನ ಮಾಡಿ ಬಿತ್ತನೆ ಮಾಡಬೇಕು. ರೋಗ ಪ್ರಾರಂಭದ ಹಂತದಲ್ಲಿ ಗುರುತಿಸಿ ರೋಗಪೀಡಿತ ಸಸಿಗಳನ್ನು ಕಿತ್ತು ಮಣ್ಣಿನಲ್ಲಿ ಹೂಳಬೇಕು. ರೋಗ ನಿಯಂತ್ರಣಕ್ಕಾಗಿ ಪ್ರತಿ ಲೀಟರ್ ನೀರಿಗೆ 0.3 ಗ್ರಾಂ ಥೈಯೋಮಿಥೋಕ್ಸಾಮ್ 25% ಡಬ್ಲೂಜಿ 10 ರಿಂದ 15 ದಿನಗಳ ಅಂತರದಲ್ಲಿ ಅಂಟು ಮಿಶ್ರಣ ಮಾಡಿ ಸಿಂಪಡಣೆ ಮಾಡಬೇಕು ಎಂದು ಪ್ರಭಾರಿ ಸಹಾಯಕ ಕೃಷಿ ನಿರ್ದೇಶಕ ಎಸ್.ಎಫ್. ತಹಶೀಲ್ದಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ:</strong> ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ತೇವಾಂಶದ ಹೆಚ್ಚಾದ ಕಾರಣ ತಾಲ್ಲೂಕಿನ ರೈತರ ಹೆಸರು ಬೆಳೆಗೆ ಹಳದಿ ರೋಗ ಆವರಿಸುತ್ತಿದ್ದು, ರೋಗ ನಿಯಂತ್ರಣಕ್ಕೆ ರೈತರು ಪರದಾಡುವ ಸ್ಥಿತಿ ಉಂಟಾಗಿದೆ.</p>.<p>ತಾಲ್ಲೂಕಿನ ಬೆಳವಣಕಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಕೃಷಿ ಭೂಮಿಗಳಲ್ಲಿ ಈಗಾಗಲೇ ಫಸಲು ಬಿಡುವ ಹಂತಕ್ಕೆ ಹೆಸರು ಬೆಳೆ ತಲುಪಿದೆ. ಹಳದಿ ರೋಗ ವ್ಯಾಪಕವಾಗಿ ಹರಡುತ್ತಿರುವ ಕಾರಣ ಇಳುವರಿ ಕುಂಟಿತಗೊಳ್ಳುವ ಭೀತಿಗೆ ರೈತರು ಒಳಗಾಗಿದ್ದಾರೆ.</p>.<p>‘ರೈತರು ಈಗಾಗಲೇ ಸಾಕಷ್ಟು ಖರ್ಚು ಮಾಡಿದ್ದು, ರೋಗ ನಿಯಂತ್ರಣಕ್ಕಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಿಗಳನ್ನು ಡ್ರೋನ್ ಮೂಲಕ ಸಿಂಪರಣೆಗೆ ಸಾಕಷ್ಟು ಖರ್ಚು ಮಾಡಿದ್ದೇವೆ ಆದರೂ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ’ ಎಂದು ಬೆಳವಣಿಕಿ ಗ್ರಾಮದ ರೈತ ಶಿವಾನಂದ ಅಳಗವಾಡಿ ಹೇಳಿದರು.</p>.<p>‘ಹಳದಿ ರೋಗ ನಿಯಂತ್ರಣಕ್ಕೆ ಬಾರದಿದ್ದರೆ ಕಾಳು ಕಟ್ಟುವುದಿಲ್ಲ ಈ ಹಂತದವರೆಗೂ ಉತ್ತಮವಾಗಿ ಬೆಳೆ ಬಂದಿದ್ದರು ಫಸಲು ಬಿಡುವ ಸಮಯಕ್ಕೆ ಸರಿಯಾಗಿ ರೋಗ ವ್ಯಾಪಿಸಿದೆ’ ಎಂದು ರೈತ ಭೀಮಪ್ಪ ತಾಳಿ ಮತ್ತು ಬಸವಂತಪ್ಪ ಸುಣಗದ ಅಳಲು ತೋಡಿಕೊಂಡರು.</p>.<p><strong>ರೋಗ ನಿಯಂತ್ರಣಕ್ಕೆ ಸಲಹೆ</strong></p><p> ಹಳದಿ ರೋಗ ನಿಯಂತ್ರಣಕ್ಕೆ ಬಿತ್ತನೆ ಪೂರ್ವದಲ್ಲಿಯೇ ಇಮಿಡಾಕ್ಲೋಪ್ರೀಡ್ 60 ಎಫ್.ಎಸ್ 5 ಮಿ.ಗ್ರಾಂ ಪ್ರತಿ ಕೆಜಿ ಬಿತ್ತನೆ ಬೀಜಕ್ಕೆ ಲೇಪನ ಮಾಡಿ ಬಿತ್ತನೆ ಮಾಡಬೇಕು. ರೋಗ ಪ್ರಾರಂಭದ ಹಂತದಲ್ಲಿ ಗುರುತಿಸಿ ರೋಗಪೀಡಿತ ಸಸಿಗಳನ್ನು ಕಿತ್ತು ಮಣ್ಣಿನಲ್ಲಿ ಹೂಳಬೇಕು. ರೋಗ ನಿಯಂತ್ರಣಕ್ಕಾಗಿ ಪ್ರತಿ ಲೀಟರ್ ನೀರಿಗೆ 0.3 ಗ್ರಾಂ ಥೈಯೋಮಿಥೋಕ್ಸಾಮ್ 25% ಡಬ್ಲೂಜಿ 10 ರಿಂದ 15 ದಿನಗಳ ಅಂತರದಲ್ಲಿ ಅಂಟು ಮಿಶ್ರಣ ಮಾಡಿ ಸಿಂಪಡಣೆ ಮಾಡಬೇಕು ಎಂದು ಪ್ರಭಾರಿ ಸಹಾಯಕ ಕೃಷಿ ನಿರ್ದೇಶಕ ಎಸ್.ಎಫ್. ತಹಶೀಲ್ದಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>