<p><strong>ಗದಗ:</strong> ‘ಯುವಜನರಿಗೆ ಸಂಸತ್ತಿನ ಕಾರ್ಯವಿಧಾನವನ್ನು ಅನುಭವಾತ್ಮಕವಾಗಿ ತಿಳಿಸಲು ಯುವ ಸಂಸತ್ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ’ ಎಂದು ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡರ ಹೇಳಿದರು.</p>.<p>ನಗರದ ಆದರ್ಶ ಶಿಕ್ಷಣ ಸಮಿತಿಯ ವಿ.ಆರ್.ಕುಷ್ಟಗಿ ಸ್ಮಾರಕ ವಾಣಿಜ್ಯ ಕಾಲೇಜಿನಲ್ಲಿ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಹಾಗೂ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ ಮತ್ತು ಮೇರಾ ಭಾರತ್ ಸಹಯೋಗದಲ್ಲಿ ನಡೆದ ವಿಕಸಿತ ಭಾರತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.</p>.<p>‘ಭಾರತ ಸಂವಿಧಾನದ ಮೌಲ್ಯಗಳು, ಹಕ್ಕು–ಕರ್ತವ್ಯಗಳ ಬಗ್ಗೆ ಸ್ಪಷ್ಟ ಅರಿವು ಮೂಡುತ್ತದೆ. ಹಾಗೆಯೇ ದೇಶದ ಸಮಸ್ಯೆಗಳ ಬಗ್ಗೆ ಚಿಂತನೆ ಮಾಡಿ ಪರಿಹಾರ ಸೂಚಿಸುವ ಮನೋಭಾವ ಬೆಳೆಸುತ್ತದೆ. ಜತೆಗೆ ಸಹಿಷ್ಣುತೆ ಮತ್ತು ಪರಸ್ಪರ ಗೌರವ, ವಿಭಿನ್ನ ಅಭಿಪ್ರಾಯಗಳನ್ನು ಆಲಿಸಿ ಗೌರವಿಸುವ ಸಂಸ್ಕಾರ ಬೆಳೆಸುತ್ತದೆ. ಭವಿಷ್ಯದ ನಾಯಕತ್ವಕ್ಕೆ ಪೂರಕವಾಗಿದೆ’ ಎಂದು ಹೇಳಿದರು.</p>.<p>ಸಂಸ್ಥೆಯ ಉಪಾಧ್ಯಕ್ಷ ಪಿ.ಆರ್.ಅಡವಿ ಮಾತನಾಡಿ, ಪ್ರತಿಯೊಬ್ಬ ಭಾರತೀಯ ನಾಗರಿಕನೂ ಸಂವಿಧಾನವನ್ನು ಗೌರವಿಸುವುದು, ದೇಶದ ಏಕತೆ ಅಖಂಡತೆ ಮತ್ತು ಶಾಂತಿಗಾಗಿ ಕೈಜೋಡಿಸುವುದು ಅಗತ್ಯವಾಗಿದೆ ಎಂದರು.</p>.<p>ಮೇರಾ ಯುವ ಭಾರತ್ ಉಪ ನಿರ್ದೇಶಕ ಲೋಕೇಶ್ ಕುಮಾರ್, ಮುಂದಿನ ಹಂತದ ಯುವ ಸಂಸತ್ ಕಾರ್ಯಕ್ರಮದ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು. ಮುಂದಿನ ಹಂತಕ್ಕೆ ವಿದ್ಯಾರ್ಥಿಗಳು ಹೇಗೆ ಸಿದ್ಧತೆ ನಡೆಸಬೇಕು ಎಂಬುದನ್ನು ವಿವರಿಸಿದರು.</p>.<p>ಸಂಸ್ಥೆಯ ಕಾರ್ಯದರ್ಶಿ ಎ.ಡಿ.ಗೋಡಕಿಂಡಿ, ಬೆಟಗೇರಿ ಪೊಲೀಸ್ ಠಾಣೆಯ ಪಿಎಸ್ಐ ಎಲ್.ಎಂ.ಆರಿ ಉಪಸ್ಥಿತರಿದ್ದರು.</p>.<p>ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ವಿ.ಕುಷ್ಟಗಿ ಅವರು ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಅಭಿನಂದನಾ ಪತ್ರ ವಿತರಿಸಿದರು.</p>.<p> <strong>ಐವರು ರಾಜ್ಯ ಮಟ್ಟಕ್ಕೆ ಆಯ್ಕೆ</strong> </p><p>ಮೊದಲ ಹಂತದಲ್ಲಿ 149 ಸ್ಪರ್ಧಿಗಳು ನೋಂದಣಿ ಮಾಡಿಕೊಂಡಿದ್ದು ಅವರಲ್ಲಿ ಎರಡನೇ ಹಂತಕ್ಕೆ 48 ಸ್ಪರ್ಧಿಗಳು ಆಯ್ಕೆಯಾಗಿದ್ದರು. ಅಂತಿಮವಾಗಿ 5 ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು. ಎಎಸ್ಎಸ್ ವಾಣಿಜ್ಯ ಮಹಾವಿದ್ಯಾಲಯದ ಭರತ್ ಸ್ವಾಮಿ ಪ್ರಥಮ ಸಮೀರ್ ದೇಸಾಯಿ ತೃತೀಯ ರಮೇಶ್ ಹಂಸನೂರ್ ಐದನೇ ಸ್ಥಾನ ಗಳಿಸಿದರು. ಜೆ.ಟಿ ಮಹಾವಿದ್ಯಾಲಯದ ಸಿಂಚನಾ ದ್ವಿತೀಯ ಸ್ಥಾನ ಪಡೆದರೆ; ಕೆಯುಡಿ ಮುಖ್ಯ ಕ್ಯಾಂಪಸ್ನ ಸಪ್ನಾ ಬಟ್ಟಿ ನಾಲ್ಕನೇ ಸ್ಥಾನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಯುವಜನರಿಗೆ ಸಂಸತ್ತಿನ ಕಾರ್ಯವಿಧಾನವನ್ನು ಅನುಭವಾತ್ಮಕವಾಗಿ ತಿಳಿಸಲು ಯುವ ಸಂಸತ್ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ’ ಎಂದು ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡರ ಹೇಳಿದರು.</p>.<p>ನಗರದ ಆದರ್ಶ ಶಿಕ್ಷಣ ಸಮಿತಿಯ ವಿ.ಆರ್.ಕುಷ್ಟಗಿ ಸ್ಮಾರಕ ವಾಣಿಜ್ಯ ಕಾಲೇಜಿನಲ್ಲಿ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಹಾಗೂ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ ಮತ್ತು ಮೇರಾ ಭಾರತ್ ಸಹಯೋಗದಲ್ಲಿ ನಡೆದ ವಿಕಸಿತ ಭಾರತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.</p>.<p>‘ಭಾರತ ಸಂವಿಧಾನದ ಮೌಲ್ಯಗಳು, ಹಕ್ಕು–ಕರ್ತವ್ಯಗಳ ಬಗ್ಗೆ ಸ್ಪಷ್ಟ ಅರಿವು ಮೂಡುತ್ತದೆ. ಹಾಗೆಯೇ ದೇಶದ ಸಮಸ್ಯೆಗಳ ಬಗ್ಗೆ ಚಿಂತನೆ ಮಾಡಿ ಪರಿಹಾರ ಸೂಚಿಸುವ ಮನೋಭಾವ ಬೆಳೆಸುತ್ತದೆ. ಜತೆಗೆ ಸಹಿಷ್ಣುತೆ ಮತ್ತು ಪರಸ್ಪರ ಗೌರವ, ವಿಭಿನ್ನ ಅಭಿಪ್ರಾಯಗಳನ್ನು ಆಲಿಸಿ ಗೌರವಿಸುವ ಸಂಸ್ಕಾರ ಬೆಳೆಸುತ್ತದೆ. ಭವಿಷ್ಯದ ನಾಯಕತ್ವಕ್ಕೆ ಪೂರಕವಾಗಿದೆ’ ಎಂದು ಹೇಳಿದರು.</p>.<p>ಸಂಸ್ಥೆಯ ಉಪಾಧ್ಯಕ್ಷ ಪಿ.ಆರ್.ಅಡವಿ ಮಾತನಾಡಿ, ಪ್ರತಿಯೊಬ್ಬ ಭಾರತೀಯ ನಾಗರಿಕನೂ ಸಂವಿಧಾನವನ್ನು ಗೌರವಿಸುವುದು, ದೇಶದ ಏಕತೆ ಅಖಂಡತೆ ಮತ್ತು ಶಾಂತಿಗಾಗಿ ಕೈಜೋಡಿಸುವುದು ಅಗತ್ಯವಾಗಿದೆ ಎಂದರು.</p>.<p>ಮೇರಾ ಯುವ ಭಾರತ್ ಉಪ ನಿರ್ದೇಶಕ ಲೋಕೇಶ್ ಕುಮಾರ್, ಮುಂದಿನ ಹಂತದ ಯುವ ಸಂಸತ್ ಕಾರ್ಯಕ್ರಮದ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು. ಮುಂದಿನ ಹಂತಕ್ಕೆ ವಿದ್ಯಾರ್ಥಿಗಳು ಹೇಗೆ ಸಿದ್ಧತೆ ನಡೆಸಬೇಕು ಎಂಬುದನ್ನು ವಿವರಿಸಿದರು.</p>.<p>ಸಂಸ್ಥೆಯ ಕಾರ್ಯದರ್ಶಿ ಎ.ಡಿ.ಗೋಡಕಿಂಡಿ, ಬೆಟಗೇರಿ ಪೊಲೀಸ್ ಠಾಣೆಯ ಪಿಎಸ್ಐ ಎಲ್.ಎಂ.ಆರಿ ಉಪಸ್ಥಿತರಿದ್ದರು.</p>.<p>ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ವಿ.ಕುಷ್ಟಗಿ ಅವರು ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಅಭಿನಂದನಾ ಪತ್ರ ವಿತರಿಸಿದರು.</p>.<p> <strong>ಐವರು ರಾಜ್ಯ ಮಟ್ಟಕ್ಕೆ ಆಯ್ಕೆ</strong> </p><p>ಮೊದಲ ಹಂತದಲ್ಲಿ 149 ಸ್ಪರ್ಧಿಗಳು ನೋಂದಣಿ ಮಾಡಿಕೊಂಡಿದ್ದು ಅವರಲ್ಲಿ ಎರಡನೇ ಹಂತಕ್ಕೆ 48 ಸ್ಪರ್ಧಿಗಳು ಆಯ್ಕೆಯಾಗಿದ್ದರು. ಅಂತಿಮವಾಗಿ 5 ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು. ಎಎಸ್ಎಸ್ ವಾಣಿಜ್ಯ ಮಹಾವಿದ್ಯಾಲಯದ ಭರತ್ ಸ್ವಾಮಿ ಪ್ರಥಮ ಸಮೀರ್ ದೇಸಾಯಿ ತೃತೀಯ ರಮೇಶ್ ಹಂಸನೂರ್ ಐದನೇ ಸ್ಥಾನ ಗಳಿಸಿದರು. ಜೆ.ಟಿ ಮಹಾವಿದ್ಯಾಲಯದ ಸಿಂಚನಾ ದ್ವಿತೀಯ ಸ್ಥಾನ ಪಡೆದರೆ; ಕೆಯುಡಿ ಮುಖ್ಯ ಕ್ಯಾಂಪಸ್ನ ಸಪ್ನಾ ಬಟ್ಟಿ ನಾಲ್ಕನೇ ಸ್ಥಾನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>