<p><strong>ಗದಗ: </strong>ಅಂದು ಕೆರೆ, ಇಂದು ಕ್ರಿಕೆಟ್ ಮೈದಾನ... ಹೌದು.. ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ಭೀಷ್ಮಕೆರೆ ಇಂದು ಕ್ರಿಕೆಟ್ ಮೈದಾನವಾಗಿದೆ. ಎರಡು ವರ್ಷಗಳಿಂದ ಆವರಿಸಿರುವ ಬರಗಾಲದಿಂದ ನೀರು ಸಂಗ್ರಹವಾಗದೇ ಭೀಷ್ಮಕೆರೆ ಮಕ್ಕಳಿಗೆ ಕ್ರಿಕೆಟ್ ಆಟವಾಡಲು ಹಾಗೂ ಜಾನುವಾರುಗಳ ಮೇಯುವ ಸ್ಥಳವಾಗಿ ಮಾರ್ಪಟ್ಟಿದೆ.</p>.<p><br /> 130 ಎಕರೆಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಈ ಕೆರೆಯಲ್ಲಿ ನೀರು ಸಂಗ್ರಹ ಗೊಂಡರೆ ಗದಗ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ಹೆಚ್ಚಾಗಿ ಕೊಳವೆ ಬಾವಿಗಳಲ್ಲಿ ನೀರು ತುಂಬಿಕೊಳ್ಳುತ್ತದೆ. ಎರಡು ವರ್ಷಗಳಿಂದ ಮಳೆ ಇಲ್ಲದೆ ಕೆರೆ ಸಂಪೂರ್ಣ ಬತ್ತಿ ಹೋಗಿದೆ. <br /> <br /> ಪ್ರತಿ ದಿನ ಜಾನುವಾರುಗಳು ಇಲ್ಲಿ ಹುಲ್ಲು ಮೇಯುತ್ತವೆ. ಶಾಲೆ ಬಿಟ್ಟ ಬಳಿಕ ಕೆರೆ ಸುತ್ತಮುತ್ತಲ ಪ್ರದೇಶದ ಮಕ್ಕಳು ಸಹ ಇಲ್ಲಿ ಆಟವಾಡುತ್ತಾರೆ. ಎರಡು ವರ್ಷದ ಹಿಂದೆ ಜಿಲ್ಲೆಯಲ್ಲಿ ಮಳೆ ಹೆಚ್ಚು ಬಂದಿದ್ದರಿಂದ ಕೆರೆ ಭರ್ತಿಯಾಗಿತ್ತು. <br /> <br /> ಆಗ ರಜೆಯಲ್ಲಿ ಮಕ್ಕಳು, ಯುವಕರು ಈಜಾಡುತ್ತಿದ್ದರು. ಬಹುತೇಕ ರಜೆ ದಿನಗಳನ್ನು ಮಕ್ಕಳು ನೀರಿನಲ್ಲಿಯೇ ಆಟವಾಡುತ್ತ ಕಳೆಯುತ್ತಿದ್ದರು. ಮಹಿಳೆಯರು ಬಟ್ಟೆಗಳನ್ನು ತೊಳೆದುಕೊಂಡು ಹೋಗುತ್ತಿದ್ದರು. ಜಾನುವಾರುಗಳ ಮೈಗಳನ್ನು ಇಲ್ಲಿಯೇ ಸ್ವಚ್ಛ ಮಾಡಲಾಗುತ್ತಿತ್ತು.<br /> <br /> ಜಿಲ್ಲೆಯಲ್ಲಿ ಈಗ ಬರಗಾಲ. ಕುಡಿಯುವ ನೀರಿಗೂ ಜನರು ಪರದಾಡುವಂತಾಗಿದೆ. ಅಂತರ್ಜಲ ಬತ್ತಿಹೋಗಿ ಕೊಳವೆಬಾವಿಗಳಲ್ಲಿ ನೀರು ಸಹ ಬರುತ್ತಿಲ್ಲ. <br /> <br /> ಭೀಷ್ಮಕೆರೆಗೆ ಬರುವ ನೀರಿನ ಮೂಲವನ್ನೇ ಬಂದ್ ಮಾಡಲಾಗಿದೆ. ಸಣ್ಣ ಪ್ರಮಾಣದಲ್ಲಿ ಮಳೆಯಾದರೂ ಕೆರೆಗೆ ನೀರು ಬರುತ್ತಿತ್ತು. ಕೆರೆ ಭರ್ತಿಯಾದ ಸಂದರ್ಭದಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ಬರುತ್ತಿತ್ತು ಎಂಬ ಕಾರಣಕ್ಕೆ ನೀರಿನ ಎಲ್ಲ ಮೂಲಗಳನ್ನೇ ಮುಚ್ಚಲಾಗಿದೆ ಎಂಬ ಆರೋಪವೂ ಇದೆ.<br /> <br /> ರಾಷ್ಟ್ರೀಯ ಕೆರೆ ಸಂರಕ್ಷಣೆ ಯೋಜನೆಯಿಡಿ ರೂ. 2.50 ಕೋಟಿ ಅನುದಾನ ಬಿಡುಗಡೆ ಮಾಡಿ ಭೀಷ್ಮಕೆರೆಯ ನೈಸರ್ಗಿಕ ಪುನಶ್ಚೇತನ ಹಾಗೂ ಅಭಿವೃದ್ಧಿಯನ್ನು 2005ರಲ್ಲಿ ಕೈಗೊಂಡಿತು. ಕೆರೆಯಲ್ಲಿ ನೀರು ಇಲ್ಲದಿರುವುದರಿಂದ ಬಯಲು ಮೈದಾನವಾಗಿದೆ. <br /> <br /> ಕೆರೆ, ಸಾರ್ವಜನಿಕ ಸೌಕರ್ಯಗಳು, ತರಿಭೂಮಿ, ವಿಹಾರ ಮಾರ್ಗ, ದೋಣಿ ವಿಹಾರ ತಾಣ, ಉದ್ಯಾನ, ಸಸ್ಯ ಪಾಲನಾಲಯ, ಕೆರೆ ಒಡ್ಡು ಬಲ ಪಡಿಸುವ ಪ್ರದೇಶ ಎಂದು ವಿಂಗಡಿಸಲಾಗಿದೆ. ಕೆರೆಯನ್ನು ಅಭಿವೃದ್ಧಿ ಪಡಿಸಿ ಆಕರ್ಷಣಾ ಕೇಂದ್ರವನ್ನಾಗಿ ಮಾಡಬೇಕು ಎಂದು ಒತ್ತಾಯ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಅಂದು ಕೆರೆ, ಇಂದು ಕ್ರಿಕೆಟ್ ಮೈದಾನ... ಹೌದು.. ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ಭೀಷ್ಮಕೆರೆ ಇಂದು ಕ್ರಿಕೆಟ್ ಮೈದಾನವಾಗಿದೆ. ಎರಡು ವರ್ಷಗಳಿಂದ ಆವರಿಸಿರುವ ಬರಗಾಲದಿಂದ ನೀರು ಸಂಗ್ರಹವಾಗದೇ ಭೀಷ್ಮಕೆರೆ ಮಕ್ಕಳಿಗೆ ಕ್ರಿಕೆಟ್ ಆಟವಾಡಲು ಹಾಗೂ ಜಾನುವಾರುಗಳ ಮೇಯುವ ಸ್ಥಳವಾಗಿ ಮಾರ್ಪಟ್ಟಿದೆ.</p>.<p><br /> 130 ಎಕರೆಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಈ ಕೆರೆಯಲ್ಲಿ ನೀರು ಸಂಗ್ರಹ ಗೊಂಡರೆ ಗದಗ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ಹೆಚ್ಚಾಗಿ ಕೊಳವೆ ಬಾವಿಗಳಲ್ಲಿ ನೀರು ತುಂಬಿಕೊಳ್ಳುತ್ತದೆ. ಎರಡು ವರ್ಷಗಳಿಂದ ಮಳೆ ಇಲ್ಲದೆ ಕೆರೆ ಸಂಪೂರ್ಣ ಬತ್ತಿ ಹೋಗಿದೆ. <br /> <br /> ಪ್ರತಿ ದಿನ ಜಾನುವಾರುಗಳು ಇಲ್ಲಿ ಹುಲ್ಲು ಮೇಯುತ್ತವೆ. ಶಾಲೆ ಬಿಟ್ಟ ಬಳಿಕ ಕೆರೆ ಸುತ್ತಮುತ್ತಲ ಪ್ರದೇಶದ ಮಕ್ಕಳು ಸಹ ಇಲ್ಲಿ ಆಟವಾಡುತ್ತಾರೆ. ಎರಡು ವರ್ಷದ ಹಿಂದೆ ಜಿಲ್ಲೆಯಲ್ಲಿ ಮಳೆ ಹೆಚ್ಚು ಬಂದಿದ್ದರಿಂದ ಕೆರೆ ಭರ್ತಿಯಾಗಿತ್ತು. <br /> <br /> ಆಗ ರಜೆಯಲ್ಲಿ ಮಕ್ಕಳು, ಯುವಕರು ಈಜಾಡುತ್ತಿದ್ದರು. ಬಹುತೇಕ ರಜೆ ದಿನಗಳನ್ನು ಮಕ್ಕಳು ನೀರಿನಲ್ಲಿಯೇ ಆಟವಾಡುತ್ತ ಕಳೆಯುತ್ತಿದ್ದರು. ಮಹಿಳೆಯರು ಬಟ್ಟೆಗಳನ್ನು ತೊಳೆದುಕೊಂಡು ಹೋಗುತ್ತಿದ್ದರು. ಜಾನುವಾರುಗಳ ಮೈಗಳನ್ನು ಇಲ್ಲಿಯೇ ಸ್ವಚ್ಛ ಮಾಡಲಾಗುತ್ತಿತ್ತು.<br /> <br /> ಜಿಲ್ಲೆಯಲ್ಲಿ ಈಗ ಬರಗಾಲ. ಕುಡಿಯುವ ನೀರಿಗೂ ಜನರು ಪರದಾಡುವಂತಾಗಿದೆ. ಅಂತರ್ಜಲ ಬತ್ತಿಹೋಗಿ ಕೊಳವೆಬಾವಿಗಳಲ್ಲಿ ನೀರು ಸಹ ಬರುತ್ತಿಲ್ಲ. <br /> <br /> ಭೀಷ್ಮಕೆರೆಗೆ ಬರುವ ನೀರಿನ ಮೂಲವನ್ನೇ ಬಂದ್ ಮಾಡಲಾಗಿದೆ. ಸಣ್ಣ ಪ್ರಮಾಣದಲ್ಲಿ ಮಳೆಯಾದರೂ ಕೆರೆಗೆ ನೀರು ಬರುತ್ತಿತ್ತು. ಕೆರೆ ಭರ್ತಿಯಾದ ಸಂದರ್ಭದಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ಬರುತ್ತಿತ್ತು ಎಂಬ ಕಾರಣಕ್ಕೆ ನೀರಿನ ಎಲ್ಲ ಮೂಲಗಳನ್ನೇ ಮುಚ್ಚಲಾಗಿದೆ ಎಂಬ ಆರೋಪವೂ ಇದೆ.<br /> <br /> ರಾಷ್ಟ್ರೀಯ ಕೆರೆ ಸಂರಕ್ಷಣೆ ಯೋಜನೆಯಿಡಿ ರೂ. 2.50 ಕೋಟಿ ಅನುದಾನ ಬಿಡುಗಡೆ ಮಾಡಿ ಭೀಷ್ಮಕೆರೆಯ ನೈಸರ್ಗಿಕ ಪುನಶ್ಚೇತನ ಹಾಗೂ ಅಭಿವೃದ್ಧಿಯನ್ನು 2005ರಲ್ಲಿ ಕೈಗೊಂಡಿತು. ಕೆರೆಯಲ್ಲಿ ನೀರು ಇಲ್ಲದಿರುವುದರಿಂದ ಬಯಲು ಮೈದಾನವಾಗಿದೆ. <br /> <br /> ಕೆರೆ, ಸಾರ್ವಜನಿಕ ಸೌಕರ್ಯಗಳು, ತರಿಭೂಮಿ, ವಿಹಾರ ಮಾರ್ಗ, ದೋಣಿ ವಿಹಾರ ತಾಣ, ಉದ್ಯಾನ, ಸಸ್ಯ ಪಾಲನಾಲಯ, ಕೆರೆ ಒಡ್ಡು ಬಲ ಪಡಿಸುವ ಪ್ರದೇಶ ಎಂದು ವಿಂಗಡಿಸಲಾಗಿದೆ. ಕೆರೆಯನ್ನು ಅಭಿವೃದ್ಧಿ ಪಡಿಸಿ ಆಕರ್ಷಣಾ ಕೇಂದ್ರವನ್ನಾಗಿ ಮಾಡಬೇಕು ಎಂದು ಒತ್ತಾಯ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>