<p><strong>ಲಕ್ಷ್ಮೇಶ್ವರ:</strong> ಪಟ್ಟಣದ ಸಾಹಿತಿ ಬಳಗದ ಸದಸ್ಯರು ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಭೆ ಸೇರಿ ಈಚೆಗೆ ವಾಹನ ಅಪಘಾತದಲ್ಲಿ ನಿಧನರಾದ ನಿವೃತ್ತ ಪ್ರಾಧ್ಯಾಪಕ ಬಿ.ಎಸ್. ಗೊರವರ ಹಾಗೂ ಅನಾರೋಗ್ಯದಿಂದ ನಿಧನರಾದ ಲಕ್ಷ್ಮೇಶ್ವರದ ಹಿರಿಯ ಪತ್ರಕರ್ತ ಡಿ.ಸಿ. ಕುಲಕರ್ಣಿ ಇವರಿಗೆ ಶೃದ್ಧಾಂಜಲಿ ಸಲ್ಲಿಸಿದರು.<br /> <br /> ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಪ್ರೊ.ಸಿ.ವಿ. ಕೆರಮನಿ ಬಿ.ಎಸ್. ಗೊರವರ ಅವರ ಕುರಿತು ಮತನಾಡಿ, `ಗೊರವರು ಅವರು ಒಬ್ಬ ಉತ್ತಮ ಪ್ರಾಧ್ಯಾಪಕರಾಗಿ ಜಿಲ್ಲೆಯಲ್ಲಿಯೇ ಒಳ್ಳೆಯ ಹೆಸರು ಗಳಿಸಿದ್ದರು. ಶಿಕ್ಷಕ ವೃತ್ತಿಗೆ ಜೊತೆ ಜೊತೆಗೆ ಎನ್ಸಿಸಿ, ಎನ್ಎಸ್ಎಸ್ ಅಧಿಕಾರಿಗಳಾಗಿ ಉತ್ತಮ ಸೇವೆ ಸಲ್ಲಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದರು. ಎಂದರು. <br /> <br /> ಅವರಿಂದ ವಿದ್ಯೆ ಕಲಿತ ಯಾರೊಬ್ಬರೂ ಅವರನ್ನು ಮರೆಯಲು ಸಾಧ್ಯವಿಲ್ಲ. ಅವರ ಸವಿನೆನಪಿಗಾಗಿ ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸುವ ಅಗತ್ಯ ಇದ್ದು ಈ ನಿಟ್ಟಿನಲ್ಲಿ ಅವರ ಕುಟುಂಬ ವರ್ಗ ಹಾಗೂ ಅವರ ಶಿಷ್ಯ ಈಗಾಗಲೇ ಕಾರ್ಯಪ್ರವೃತ್ತವಾಗಿದೆ~ ಎಂದು ತಿಳಿಸಿ ಅವರ ಕನ್ನಡ ಪ್ರೀತಿಯನ್ನು ಕೊಂಡಾಡಿದರು.<br /> <br /> ನಿವೃತ್ತ ಶಿಕ್ಷಕ ಪೂರ್ಣಾಜಿ ಖರಾಟೆ ಹಾಗೂ ವಕೀಲ ಬಿ.ಎಸ್. ಬಾಳೇಶ್ವರಮಠ ಡಿ.ಸಿ. ಕುಲಕರ್ಣಿಯವರ ಕುರಿತು `ಈ ಭಾಗದಲ್ಲಿ ಡಿ.ಸಿ. ಕುಲಕರ್ಣಿ ಎಂದೇ ಖ್ಯಾತರಾಗಿದ್ದ ದತ್ತಣ್ಣ ಕುಲಕರ್ಣಿಯವರು ಕಳೆದ 25 ವರ್ಷಗಳಿಂದ ಚಪ್ಪಲಿ ಧರಿಸದೇ ಪತ್ರಿಕಾ ವರದಿಗಾರರಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. <br /> <br /> ಅವರ ಸೇವೆ ಇಂದಿನ ಯುವ ಪತ್ರಕರ್ತರಿಗೆ ಮಾದರಿಯಾಗಿದ್ದು ಅವರ ಸಹನೆ, ಸಹಕಾರ ಮನೋಭಾವನೆಯನ್ನು ಎಲ್ಲ ಯುವ ಪತ್ರಕರ್ತರು ತಮ್ಮ ಜೀವನದಲ್ಲಿ ಅಳವಡಿಸಿಕಳ್ಳುವ ಅಗತ್ಯ ಇದೆ~ ಎಂದರು.<br /> <br /> ಹಿರಿಯ ಸಾಹಿತಿ ಕೊತ್ತಲ ಮಹಾದೇವಪ್ಪ, ಎಸ್.ವಿ. ಕಮ್ಮಾರ, ಎಸ್.ಎಸ್. ನಾಗಲೋಟಿ, ಬಿ.ಎಂ.ಕಾಳಗಿ, ಎಂ.ಕೆ. ಕಳ್ಳಿಮಠ, ವಿರುಪಾಕ್ಷಪ್ಪ ಅರಳಿ, ಬಿ.ಸ್. ಆಕಳವಾಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ಪಟ್ಟಣದ ಸಾಹಿತಿ ಬಳಗದ ಸದಸ್ಯರು ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಭೆ ಸೇರಿ ಈಚೆಗೆ ವಾಹನ ಅಪಘಾತದಲ್ಲಿ ನಿಧನರಾದ ನಿವೃತ್ತ ಪ್ರಾಧ್ಯಾಪಕ ಬಿ.ಎಸ್. ಗೊರವರ ಹಾಗೂ ಅನಾರೋಗ್ಯದಿಂದ ನಿಧನರಾದ ಲಕ್ಷ್ಮೇಶ್ವರದ ಹಿರಿಯ ಪತ್ರಕರ್ತ ಡಿ.ಸಿ. ಕುಲಕರ್ಣಿ ಇವರಿಗೆ ಶೃದ್ಧಾಂಜಲಿ ಸಲ್ಲಿಸಿದರು.<br /> <br /> ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಪ್ರೊ.ಸಿ.ವಿ. ಕೆರಮನಿ ಬಿ.ಎಸ್. ಗೊರವರ ಅವರ ಕುರಿತು ಮತನಾಡಿ, `ಗೊರವರು ಅವರು ಒಬ್ಬ ಉತ್ತಮ ಪ್ರಾಧ್ಯಾಪಕರಾಗಿ ಜಿಲ್ಲೆಯಲ್ಲಿಯೇ ಒಳ್ಳೆಯ ಹೆಸರು ಗಳಿಸಿದ್ದರು. ಶಿಕ್ಷಕ ವೃತ್ತಿಗೆ ಜೊತೆ ಜೊತೆಗೆ ಎನ್ಸಿಸಿ, ಎನ್ಎಸ್ಎಸ್ ಅಧಿಕಾರಿಗಳಾಗಿ ಉತ್ತಮ ಸೇವೆ ಸಲ್ಲಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದರು. ಎಂದರು. <br /> <br /> ಅವರಿಂದ ವಿದ್ಯೆ ಕಲಿತ ಯಾರೊಬ್ಬರೂ ಅವರನ್ನು ಮರೆಯಲು ಸಾಧ್ಯವಿಲ್ಲ. ಅವರ ಸವಿನೆನಪಿಗಾಗಿ ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸುವ ಅಗತ್ಯ ಇದ್ದು ಈ ನಿಟ್ಟಿನಲ್ಲಿ ಅವರ ಕುಟುಂಬ ವರ್ಗ ಹಾಗೂ ಅವರ ಶಿಷ್ಯ ಈಗಾಗಲೇ ಕಾರ್ಯಪ್ರವೃತ್ತವಾಗಿದೆ~ ಎಂದು ತಿಳಿಸಿ ಅವರ ಕನ್ನಡ ಪ್ರೀತಿಯನ್ನು ಕೊಂಡಾಡಿದರು.<br /> <br /> ನಿವೃತ್ತ ಶಿಕ್ಷಕ ಪೂರ್ಣಾಜಿ ಖರಾಟೆ ಹಾಗೂ ವಕೀಲ ಬಿ.ಎಸ್. ಬಾಳೇಶ್ವರಮಠ ಡಿ.ಸಿ. ಕುಲಕರ್ಣಿಯವರ ಕುರಿತು `ಈ ಭಾಗದಲ್ಲಿ ಡಿ.ಸಿ. ಕುಲಕರ್ಣಿ ಎಂದೇ ಖ್ಯಾತರಾಗಿದ್ದ ದತ್ತಣ್ಣ ಕುಲಕರ್ಣಿಯವರು ಕಳೆದ 25 ವರ್ಷಗಳಿಂದ ಚಪ್ಪಲಿ ಧರಿಸದೇ ಪತ್ರಿಕಾ ವರದಿಗಾರರಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. <br /> <br /> ಅವರ ಸೇವೆ ಇಂದಿನ ಯುವ ಪತ್ರಕರ್ತರಿಗೆ ಮಾದರಿಯಾಗಿದ್ದು ಅವರ ಸಹನೆ, ಸಹಕಾರ ಮನೋಭಾವನೆಯನ್ನು ಎಲ್ಲ ಯುವ ಪತ್ರಕರ್ತರು ತಮ್ಮ ಜೀವನದಲ್ಲಿ ಅಳವಡಿಸಿಕಳ್ಳುವ ಅಗತ್ಯ ಇದೆ~ ಎಂದರು.<br /> <br /> ಹಿರಿಯ ಸಾಹಿತಿ ಕೊತ್ತಲ ಮಹಾದೇವಪ್ಪ, ಎಸ್.ವಿ. ಕಮ್ಮಾರ, ಎಸ್.ಎಸ್. ನಾಗಲೋಟಿ, ಬಿ.ಎಂ.ಕಾಳಗಿ, ಎಂ.ಕೆ. ಕಳ್ಳಿಮಠ, ವಿರುಪಾಕ್ಷಪ್ಪ ಅರಳಿ, ಬಿ.ಸ್. ಆಕಳವಾಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>