ಜ್ವರ, ತಲೆನೋವು, ಚರ್ಮ ರೋಗದಿಂದ ನರಳುತ್ತಿದ್ದಾರೆ. ಹೆಚ್ಚಿನ ಅನಾಹುತ ಸಂಭವಿಸುವ ಮುನ್ನ ಮೊಬೈಲ್ ಟವರ್ ತೆರವುಗೊಳಿಸಬೇಕು ಎಂದು ಪಟ್ಟು ಹಿಡಿದರು.ಅನುಮತಿ ಇಲ್ಲದೆ ಪಾಲಾ ಬದಾಮಿಯಲ್ಲಿ ಮಾನವ ಸರಪಳಿ ರಚಿಸಿ ರಸ್ತೆತಡೆ ನಡೆಸುತ್ತಿದ್ದ ನಿವಾಸಿಗಳು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಬಲವಂತವಾಗಿ ಪ್ರತಿಭಟನಾಕಾರರನ್ನು ತೆರವುಗೊಳಿಸಿದರು.
`ನೂತನ ನಿಯಮದಂತೆ ಜನನಿಬಿಡ ಸ್ಥಳಗಳಲ್ಲಿ ಮೊಬೈಲ್ ಟವರ್ಗಳನ್ನು ಹಾಕುವಂತಿಲ್ಲ. ಇದರಿಂದ ಜನರಿಗೆ ಸಾಕಷ್ಟು ತೊಂದರೆ ಆಗುತ್ತದೆ. ನಿಯಮ ಉಲ್ಲಂಘಿಸಿ ಟವರ್ ಅಳವಡಿಸಲಾಗಿದೆ' ಎಂದು ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದರು.