<p><strong>ಗಜೇಂದ್ರಗಡ: ‘</strong>ಭಾರತೀಯ ಗ್ರಾಮೀಣ ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸಿದ ಕೀರ್ತಿ ರಂಗಭೂಮಿಗೆ ಸಲ್ಲುತ್ತದೆ’ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.<br /> <br /> ಮಾರುತೇಶ್ವರ ಹಾಗೂ ಅಳಿಯ ಬಸವೇಶ್ವರ ಕಾರ್ತಿಕೋತ್ಸವದ ಪ್ರಯುಕ್ತ ಇಲ್ಲಿಗೆ ಸಮೀಪದ ಹಿರೇಅಳಗುಂಡಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಧರ್ಮ ತುಂಬಿದ ಮನೆ’ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚಿತ್ರರಂಗದ ಭರಾಟೆಯ ಮುಂದೆ ರಂಗಭೂಮಿ ನಶಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ರಂಗಭೂಮಿ ಮತ್ತು ಅದರಲ್ಲಿ ದುಡಿಯುತ್ತಿರುವ ಹಿರಿಯ ಕಲಾವಿದರ ಬದುಕಿಗೆ ನೆರವಾಗಬೇಕಾದ ಯೋಜನೆಗಳನ್ನು ಸರ್ಕಾರ ಜಾರಿಗೆ ತರಬೇಕು ಎಂದು ಅವರು ಸಲಹೆ ನೀಡಿದರು.<br /> <br /> ಆರ್ಥಿಕ ದೃಷ್ಟಿಯಿಂದ ರಂಗಭೂಮಿ ಲಾಭದಾಯಕ ಕ್ಷೇತ್ರವಲ್ಲ ಆದ್ದರಿಂದ ಯುವ ಜನತೆ ಈ ಕ್ಷೇತ್ರಕ್ಕೆ ಬರಲು ಹಿಂಜರಿಯುತ್ತಿದ್ದಾರೆ. ಈ ಸ್ಥಿತಿ ಹೋಗಲಾಡಿಸಲು ಸರ್ಕಾರ ದಿಟ್ಟ ಹೆಜ್ಜೆ ಇಡಬೇಕಿದೆ ಎಂದರು.<br /> <br /> ಇದೇ ಸಂದರ್ಭದಲ್ಲಿ ಗ್ರಾಮದ ಯೋಧ ಲಕ್ಷ್ಮಣ್ಣ ಕೋಣ್ಣನವರ ಅವರನ್ನು ಸನ್ಮಾನಿಸಲಾಯಿತು.<br /> ಮುಶಿಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೀತಾಬಾಯಿ ಕುಲಕರ್ಣಿ, ಸಂಗನಗೌಡ ಮಾಲಿಪಾಟೀಲ, ಅಂದಾನಗೌಡ ಪಾಟೀಲ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ: ‘</strong>ಭಾರತೀಯ ಗ್ರಾಮೀಣ ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸಿದ ಕೀರ್ತಿ ರಂಗಭೂಮಿಗೆ ಸಲ್ಲುತ್ತದೆ’ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.<br /> <br /> ಮಾರುತೇಶ್ವರ ಹಾಗೂ ಅಳಿಯ ಬಸವೇಶ್ವರ ಕಾರ್ತಿಕೋತ್ಸವದ ಪ್ರಯುಕ್ತ ಇಲ್ಲಿಗೆ ಸಮೀಪದ ಹಿರೇಅಳಗುಂಡಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಧರ್ಮ ತುಂಬಿದ ಮನೆ’ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚಿತ್ರರಂಗದ ಭರಾಟೆಯ ಮುಂದೆ ರಂಗಭೂಮಿ ನಶಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ರಂಗಭೂಮಿ ಮತ್ತು ಅದರಲ್ಲಿ ದುಡಿಯುತ್ತಿರುವ ಹಿರಿಯ ಕಲಾವಿದರ ಬದುಕಿಗೆ ನೆರವಾಗಬೇಕಾದ ಯೋಜನೆಗಳನ್ನು ಸರ್ಕಾರ ಜಾರಿಗೆ ತರಬೇಕು ಎಂದು ಅವರು ಸಲಹೆ ನೀಡಿದರು.<br /> <br /> ಆರ್ಥಿಕ ದೃಷ್ಟಿಯಿಂದ ರಂಗಭೂಮಿ ಲಾಭದಾಯಕ ಕ್ಷೇತ್ರವಲ್ಲ ಆದ್ದರಿಂದ ಯುವ ಜನತೆ ಈ ಕ್ಷೇತ್ರಕ್ಕೆ ಬರಲು ಹಿಂಜರಿಯುತ್ತಿದ್ದಾರೆ. ಈ ಸ್ಥಿತಿ ಹೋಗಲಾಡಿಸಲು ಸರ್ಕಾರ ದಿಟ್ಟ ಹೆಜ್ಜೆ ಇಡಬೇಕಿದೆ ಎಂದರು.<br /> <br /> ಇದೇ ಸಂದರ್ಭದಲ್ಲಿ ಗ್ರಾಮದ ಯೋಧ ಲಕ್ಷ್ಮಣ್ಣ ಕೋಣ್ಣನವರ ಅವರನ್ನು ಸನ್ಮಾನಿಸಲಾಯಿತು.<br /> ಮುಶಿಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೀತಾಬಾಯಿ ಕುಲಕರ್ಣಿ, ಸಂಗನಗೌಡ ಮಾಲಿಪಾಟೀಲ, ಅಂದಾನಗೌಡ ಪಾಟೀಲ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>