<p><strong>ನರಗುಂದ:</strong> ಸಿಐಟಿಯು ಜಿಲ್ಲಾ ಹಾಗೂ ತಾಲ್ಲೂಕು ಸಮಿತಿ ಸದಸ್ಯರು ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಿನಿ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.<br /> <br /> ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಮುಖಂಡ ಮಹಾಗುಂಡಪ್ಪ ಅಂಗಡಿ ಮಾತನಾಡಿ, `ಈಗಾಗಲೇ ರಾಜ್ಯ ಸರ್ಕಾರಕ್ಕೆ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಲವಾರು ಸಲ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ನಿರಂತರ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿದ್ದು ಇದರಿಂದ ಕಾರ್ಮಿಕರಿಗೆ ನ್ಯಾಯ ಸಿಗದಂತಾಗಿದೆ.<br /> <br /> ಆದ್ದರಿಂದ ಕಾರ್ಮಿಕ ವಿರೋಧಿ ನೀತಿ ಕೈ ಬಿಟ್ಟು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ಕಾರ್ಮಿಕರಿಗೆ ಸಂಬಂಧಿಸಿದಂತೆ ಎಪಿಎಲ್-ಬಿಪಿಎಲ್ ಎಂದು ಮೀನಾಮೇಷ ಮಾಡದೇ ಕೂಡಲೇ ಎಲ್ಲಾ ಕುಟುಂಬಗಳಗೆ ಕನಿಷ್ಟ ಆಹಾರ ಧಾನ್ಯ ವಿತರಿಸುವಲ್ಲಿ ಕ್ರಮಕೈಗೊಳ್ಳಬೇಕು.<br /> <br /> ಕನಿಷ್ಟ ವೇತನ ಜಾರಿಗೊಳಿಸಬೇಕು. ಕನಿಷ್ಟ ವೇತನ ಮಂಡಳಿ ಜಾರಿ ಮಾಡಿದ ಶಿಫಾರಸ್ಸನ್ನು ಅನುಷ್ಟಾನಗೊಳಿಸಬೇಕು. ಕೇಂದ್ರ ಸರ್ಕಾರದ ರೀತಿಯಲ್ಲಿ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕರ ಸಮ್ಮೇಳನ ನಡೆಸಬೇಕು. ಸರ್ಕಾರ ವಿವಿಧ ತ್ರಿಪಕ್ಷೀಯ ಸಮಿತಿ ರಚಿಸುವಾಗ ಕಾರ್ಮಿಕರ ಸಂಘಟನೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು.<br /> <br /> ಗುತ್ತಿಗೆ ಕಾರ್ಮಿಕ ಪದ್ಧತಿ ಕೈ ಬಿಟ್ಟು ಕಾಯಂ ಕಾರ್ಮಿಕರನ್ನು ನೇಮಕಗೊಳಿಸಬೇಕು. ಎಲ್ಲಾ ಕಾರ್ಮಿಕರಿಗೂ ನಿವೇಶನ ಮತ್ತು ವಸತಿಯನ್ನು ಉಚಿತವಾಗಿ ನೀಡಬೇಕು. ಸರ್ಕಾರದ ಒಡೆತನದ ಕೈಗಾರಿಕೆಗಳನ್ನು ಪುನರುಜ್ಜೀವನಗೊಳಿಸಬೇಕು.<br /> <br /> 45ನೇ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನ ಪ್ರಕಾರ ಸರ್ಕಾರಗಳ ವಿವಿಧ ಯೋಜನೆಗಳಲ್ಲಿ ನೇಮಕಗೊಂಡ ಅಂಗನವಾಡಿ, ಬಿಸಿಯೂಟ, ಆಶಾ, ಕಂಪ್ಯೂಟರ್ಸ್ ಆಪರೇಟರ್ಗಳನ್ನು ಖಾಯಂಗೊಳಿಸುವಂತೆ ಆಗ್ರಹಿಸಿದರು.<br /> <br /> ಆರ್.ಎಚ್.ಹೆಗಡೆ, ಎಸ್.ಎಸ್. ಬೆಳವಣಕಿ, ಮಿಯಾಸಾಬ ನದಾಫ್, ಅಲಿಸಾಬ ಮನದಲಿ, ಎಂ.ಎಂ. ಬೀಳಗಿ, ಅಡಿವೆಪ್ಪ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ಸಿಐಟಿಯು ಜಿಲ್ಲಾ ಹಾಗೂ ತಾಲ್ಲೂಕು ಸಮಿತಿ ಸದಸ್ಯರು ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಿನಿ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.<br /> <br /> ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಮುಖಂಡ ಮಹಾಗುಂಡಪ್ಪ ಅಂಗಡಿ ಮಾತನಾಡಿ, `ಈಗಾಗಲೇ ರಾಜ್ಯ ಸರ್ಕಾರಕ್ಕೆ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಲವಾರು ಸಲ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ನಿರಂತರ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿದ್ದು ಇದರಿಂದ ಕಾರ್ಮಿಕರಿಗೆ ನ್ಯಾಯ ಸಿಗದಂತಾಗಿದೆ.<br /> <br /> ಆದ್ದರಿಂದ ಕಾರ್ಮಿಕ ವಿರೋಧಿ ನೀತಿ ಕೈ ಬಿಟ್ಟು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ಕಾರ್ಮಿಕರಿಗೆ ಸಂಬಂಧಿಸಿದಂತೆ ಎಪಿಎಲ್-ಬಿಪಿಎಲ್ ಎಂದು ಮೀನಾಮೇಷ ಮಾಡದೇ ಕೂಡಲೇ ಎಲ್ಲಾ ಕುಟುಂಬಗಳಗೆ ಕನಿಷ್ಟ ಆಹಾರ ಧಾನ್ಯ ವಿತರಿಸುವಲ್ಲಿ ಕ್ರಮಕೈಗೊಳ್ಳಬೇಕು.<br /> <br /> ಕನಿಷ್ಟ ವೇತನ ಜಾರಿಗೊಳಿಸಬೇಕು. ಕನಿಷ್ಟ ವೇತನ ಮಂಡಳಿ ಜಾರಿ ಮಾಡಿದ ಶಿಫಾರಸ್ಸನ್ನು ಅನುಷ್ಟಾನಗೊಳಿಸಬೇಕು. ಕೇಂದ್ರ ಸರ್ಕಾರದ ರೀತಿಯಲ್ಲಿ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕರ ಸಮ್ಮೇಳನ ನಡೆಸಬೇಕು. ಸರ್ಕಾರ ವಿವಿಧ ತ್ರಿಪಕ್ಷೀಯ ಸಮಿತಿ ರಚಿಸುವಾಗ ಕಾರ್ಮಿಕರ ಸಂಘಟನೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು.<br /> <br /> ಗುತ್ತಿಗೆ ಕಾರ್ಮಿಕ ಪದ್ಧತಿ ಕೈ ಬಿಟ್ಟು ಕಾಯಂ ಕಾರ್ಮಿಕರನ್ನು ನೇಮಕಗೊಳಿಸಬೇಕು. ಎಲ್ಲಾ ಕಾರ್ಮಿಕರಿಗೂ ನಿವೇಶನ ಮತ್ತು ವಸತಿಯನ್ನು ಉಚಿತವಾಗಿ ನೀಡಬೇಕು. ಸರ್ಕಾರದ ಒಡೆತನದ ಕೈಗಾರಿಕೆಗಳನ್ನು ಪುನರುಜ್ಜೀವನಗೊಳಿಸಬೇಕು.<br /> <br /> 45ನೇ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನ ಪ್ರಕಾರ ಸರ್ಕಾರಗಳ ವಿವಿಧ ಯೋಜನೆಗಳಲ್ಲಿ ನೇಮಕಗೊಂಡ ಅಂಗನವಾಡಿ, ಬಿಸಿಯೂಟ, ಆಶಾ, ಕಂಪ್ಯೂಟರ್ಸ್ ಆಪರೇಟರ್ಗಳನ್ನು ಖಾಯಂಗೊಳಿಸುವಂತೆ ಆಗ್ರಹಿಸಿದರು.<br /> <br /> ಆರ್.ಎಚ್.ಹೆಗಡೆ, ಎಸ್.ಎಸ್. ಬೆಳವಣಕಿ, ಮಿಯಾಸಾಬ ನದಾಫ್, ಅಲಿಸಾಬ ಮನದಲಿ, ಎಂ.ಎಂ. ಬೀಳಗಿ, ಅಡಿವೆಪ್ಪ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>