ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜ್ಞಾನದೇಗುಲ–2015’ 30ರಿಂದ

‘ಪ್ರಜಾವಾಣಿ’ ಬಳಗದಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
Last Updated 27 ಮೇ 2015, 7:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವೃತ್ತಿಪರ ಆಯ್ಕೆ ಕುರಿತು ಚಿಂತನೆಯಲ್ಲಿರುವ ವಿದ್ಯಾರ್ಥಿಗಳು, ಪೋಷಕರಿಗೆ ನೆರವಾಗುವ ಸಲುವಾಗಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಬಳಗದ ಆಶ್ರಯದಲ್ಲಿ ‘ಜ್ಞಾನ ದೇಗುಲ–2015’ ಶೈಕ್ಷಣಿಕ ಮೇಳವು ಇದೇ 30 ಹಾಗೂ 31ರಂದು ಇಲ್ಲಿನ ಗೋಕುಲ ಗಾರ್ಡನ್‌ನಲ್ಲಿ ನಡೆಯಲಿದೆ.

ವಿದ್ಯಾರ್ಥಿಗಳಿಗಾಗಿ ಪತ್ರಿಕೆಯು ಕಳೆದ 6 ವರ್ಷಗಳಿಂದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತಿದೆ. ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿ ಇಂತಹದ್ದೊಂದು ಬೃಹತ್‌ ಶೈಕ್ಷಣಿಕ ಮೇಳ ಆಯೋಜಿಸಲಾಗಿದೆ. ಎರಡೂ ದಿನ ಬೆಳಿಗ್ಗೆ 10ರಿಂದ ರಾತ್ರಿ 8ರ ತನಕ ಮೇಳ ನಡೆಯಲಿದೆ. ಸಿಇಟಿ/ ಕಾಮೆಡ್‌–ಕೆ ಪರೀಕ್ಷೆ ಬರೆದು ಕೌನ್ಸೆಲಿಂಗ್‌ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. 

ರಾಜ್ಯದ  ವಿಶ್ವವಿದ್ಯಾಲಯಗಳು, ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಈ ಮೇಳದಲ್ಲಿ ಪಾಲ್ಗೊಳ್ಳುತ್ತಿವೆ. ಎಂಜಿನಿಯರಿಂಗ್‌, ವೈದ್ಯಕೀಯ, ವಾಸ್ತುಶಿಲ್ಪ, ಬ್ಯಾಂಕಿಂಗ್‌, ಬಿಸಿನೆಸ್‌ ಮ್ಯಾನೇಜ್‌ಮೆಂಟ್‌, ಏರೋನಾಟಿಕ್ಸ್‌, ಅನಿಮೇಶನ್‌, ವ್ಯವಹಾರ ನಿರ್ವಹಣೆ ಮೊದಲಾದ ವಿಷಯಕ್ಕೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳಲಿವೆ. ಉಚಿತ ಪ್ರವೇಶವಿದೆ.  www.jnanadegula.in  ವೆಬ್‌ಸೈಟ್‌ನಲ್ಲಿ ಆಸಕ್ತರು ಹೆಸರು ನೋಂದಾಯಿಸಬಹುದು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT