<p><strong>ಸಾಗರ: </strong>ಇಲ್ಲಿನ ಮಹಾಗಣಪತಿ ದೇವರ ರಥೋತ್ಸವದ ನಂತರ ರಥದಲ್ಲಿರುವ ಗಣಪತಿಯ ಉತ್ಸವ ಮೂರ್ತಿಯನ್ನು ಸಮೀಪದಿಂದ ದರ್ಶನ ಮಾಡಲು ಅವಕಾಶ ಕಲ್ಪಿಸುವ ಸಲುವಾಗಿ ಸ್ಟೀಲ್ ಓವರ್ ಬ್ರಿಡ್ಜ್ ನಿರ್ಮಾಣ ಮಾಡಲು ಟೆಂಡರ್ ಕರೆಯುವಂತೆ ಶಾಸಕ ಎಚ್. ಹಾಲಪ್ಪ ಹರತಾಳು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮಾರ್ಚ್ 28ರಿಂದ ನಡೆಯಲಿರುವ ಮಹಾಗಣಪತಿ ಜಾತ್ರೋತ್ಸವಅಂಗವಾಗಿ ಶನಿವಾರ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ‘ಈ ಬಾರಿ ಗಣಪತಿ ಜಾತ್ರೆಯನ್ನು ಮಾರಿಕಾಂಬಾ ಜಾತ್ರೆ ಮಾದರಿಯಲ್ಲೇ ಎಲ್ಲರ ಸಲಹೆ ಪಡೆದು ಅರ್ಥಪೂರ್ಣವಾಗಿ ಆಚರಿಸಲಾಗುವುದು’ ಎಂದು ತಿಳಿಸಿದರು.</p>.<p>ಗಣಪತಿ ಜಾತ್ರೆಗೆ ಪ್ರತಿವರ್ಷ ಮುಜರಾಯಿ ಇಲಾಖೆಯಿಂದ ₹ 7 ಲಕ್ಷ ನೀಡಲಾಗುತ್ತಿದೆ. ಮಳಿಗೆ ಹರಾಜು ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಂದ ಸುಮಾರು ₹ 25 ಲಕ್ಷ ಸಂಗ್ರಹವಾಗುತ್ತಿದೆ. ಈ ಬಾರಿ ಜಾತ್ರೆಗೆ ₹ 25 ಲಕ್ಷ ಅನುದಾನ ನೀಡುವಂತೆ ಮುಜರಾಯಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದರು.</p>.<p>ಗಣಪತಿ ಜಾತ್ರೆಯಲ್ಲಿ ಸುತ್ತಮುತ್ತಲಿನ ಪರಿಸರವನ್ನು ಚೊಕ್ಕಟವಾಗಿಡುವಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳು ನಿಗಾ ವಹಿಸಬೇಕು. ಪ್ರತಿವರ್ಷದಂತೆ ಈ ವರ್ಷವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ನಗರಸಭೆ ಸದಸ್ಯ ಟಿ.ಡಿ. ಮೇಘರಾಜ್, ಪೌರಾಯುಕ್ತ ಎಸ್.ರಾಜು, ಮೆಸ್ಕಾಂ ಎಂಜಿನಿಯರ್ ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಇಲ್ಲಿನ ಮಹಾಗಣಪತಿ ದೇವರ ರಥೋತ್ಸವದ ನಂತರ ರಥದಲ್ಲಿರುವ ಗಣಪತಿಯ ಉತ್ಸವ ಮೂರ್ತಿಯನ್ನು ಸಮೀಪದಿಂದ ದರ್ಶನ ಮಾಡಲು ಅವಕಾಶ ಕಲ್ಪಿಸುವ ಸಲುವಾಗಿ ಸ್ಟೀಲ್ ಓವರ್ ಬ್ರಿಡ್ಜ್ ನಿರ್ಮಾಣ ಮಾಡಲು ಟೆಂಡರ್ ಕರೆಯುವಂತೆ ಶಾಸಕ ಎಚ್. ಹಾಲಪ್ಪ ಹರತಾಳು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮಾರ್ಚ್ 28ರಿಂದ ನಡೆಯಲಿರುವ ಮಹಾಗಣಪತಿ ಜಾತ್ರೋತ್ಸವಅಂಗವಾಗಿ ಶನಿವಾರ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ‘ಈ ಬಾರಿ ಗಣಪತಿ ಜಾತ್ರೆಯನ್ನು ಮಾರಿಕಾಂಬಾ ಜಾತ್ರೆ ಮಾದರಿಯಲ್ಲೇ ಎಲ್ಲರ ಸಲಹೆ ಪಡೆದು ಅರ್ಥಪೂರ್ಣವಾಗಿ ಆಚರಿಸಲಾಗುವುದು’ ಎಂದು ತಿಳಿಸಿದರು.</p>.<p>ಗಣಪತಿ ಜಾತ್ರೆಗೆ ಪ್ರತಿವರ್ಷ ಮುಜರಾಯಿ ಇಲಾಖೆಯಿಂದ ₹ 7 ಲಕ್ಷ ನೀಡಲಾಗುತ್ತಿದೆ. ಮಳಿಗೆ ಹರಾಜು ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಂದ ಸುಮಾರು ₹ 25 ಲಕ್ಷ ಸಂಗ್ರಹವಾಗುತ್ತಿದೆ. ಈ ಬಾರಿ ಜಾತ್ರೆಗೆ ₹ 25 ಲಕ್ಷ ಅನುದಾನ ನೀಡುವಂತೆ ಮುಜರಾಯಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದರು.</p>.<p>ಗಣಪತಿ ಜಾತ್ರೆಯಲ್ಲಿ ಸುತ್ತಮುತ್ತಲಿನ ಪರಿಸರವನ್ನು ಚೊಕ್ಕಟವಾಗಿಡುವಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳು ನಿಗಾ ವಹಿಸಬೇಕು. ಪ್ರತಿವರ್ಷದಂತೆ ಈ ವರ್ಷವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ನಗರಸಭೆ ಸದಸ್ಯ ಟಿ.ಡಿ. ಮೇಘರಾಜ್, ಪೌರಾಯುಕ್ತ ಎಸ್.ರಾಜು, ಮೆಸ್ಕಾಂ ಎಂಜಿನಿಯರ್ ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>