ಶಿವಮೊಗ್ಗ: ಶುಂಠಿ ಬೆಳೆಯ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 4 ವರ್ಷಗಳ ಕಠಿಣ ಶಿಕ್ಷೆ, ₹ 20 ಸಾವಿರ ದಂಡ ವಿಧಿಸಿದೆ.
ಶಿಕಾರಿಪುರ ತಾಲ್ಲೂಕಿನ ಹುಣಸೆಕಟ್ಟೆಯ ಈಶ್ವರ (44) ಶಿಕ್ಷೆಗೆ ಒಳಗಾದವರು. ಗುಡ್ಡದಹೊಸಳ್ಳಿ ಜಮೀನಿನಲ್ಲಿ ₹ 71 ಸಾವಿರ ಮೌಲ್ಯದ ಗಾಂಜಾ ಬೆಳೆದಿದ್ದ. ಡಿವೈಎಸ್ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ದಾಳಿ ನಡೆಸಿ, ವಶಪಡಿಸಿಕೊಂಡಿತ್ತು. ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಚಾರಣೆ ನಡೆಸಿದ ಪ್ರಭಾವತಿ ಹಿರೇಮಠ ಅವರು ಗುರುವಾರ ತೀರ್ಪು ಪ್ರಕಟಿಸಿದ್ದಾರೆ.
ಸರ್ಕಾರದ ಪರವಾಗಿ ಅಭಿಯೋಜಕ ವಿ.ಜಿ.ಯಳಗೇರಿ ವಾದ ಮಂಡಿಸಿದ್ದರು.