ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜು ಮಾತನಾಡಿ ‘ಮೇಕೆದಾಟು ಅಣೆಕಟ್ಟೆ ನಿರ್ಮಾಣ ಕಾಮಗಾರಿಯು ಕಳೆದ 5–6 ವರ್ಷದ ಹಿಂದೆಯೇ ಆರಂಭಗೊಂಡು ಈಗ ಮುಗಿಯಬೇಕಿತ್ತು. ಇದೀಗ ಕೇಂದ್ರ ಜಲ ಆಯೋಗದ ಅನುಮತಿಯೂ ದೊರೆತಿದೆ. ವಾಸ್ತವದಲ್ಲಿ ಈ ಕಾಮಗಾರಿಗೆ ಯಾರ ಅನುಮತಿಯೂ ಬೇಕಿಲ್ಲ. ಯಾವ ನ್ಯಾಯಾಲಯವೂ ತಡೆಯಾಜ್ಞೆ ನೀಡಿಲ್ಲ. ಆದಾಗ್ಯೂ ಕರ್ನಾಟಕ ಸರ್ಕಾರ ಈ ವಿಚಾರದಲ್ಲಿ ಮಂದಗತಿಯ ಧೋರಣೆ ಅನುಸರಿಸುತ್ತಿದೆ’ ಎಂದು ಟೀಕಿಸಿದರು.