ಐದು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಭರತ್, ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ ನೆಲೆಸಿದ್ದ. ಟೈಲ್ಸ್ ಹಾಕುವ ಕೆಲಸ ಮಾಡುತ್ತಿದ್ದ ಈತ, ಗುರುವಾರ ಬೆಳಿಗ್ಗೆ ಪಿಸ್ತೂಲ್ ಮಾರಲು ಗ್ರಾಹಕರನ್ನು ಹುಡುಕುತ್ತಿದ್ದ. ಈ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂತು. ಕೂಡಲೇ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದೆವು ಎಂದು ಪೊಲೀಸರು ಹೇಳಿದ್ದಾರೆ.