ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ನಿಲ್ಲುವಂತೆ ಕಾಣುತ್ತಿಲ್ಲ. ನಗರ ಹಾಗೂ ಗ್ರಾಮೀಣ ಭಾಗದಲ್ಲಿನ ಅನೇಕ ಮನೆಗಳು ಈಗಾಗಲೇ ಬಿದ್ದಿವೆ. ಇನ್ನು ಕೆಲ ಮನೆಗಳು ಕುಸಿಯುತ್ತಿವೆ. ಅನೇಕ ಕಡೆಗಳಲ್ಲಿ ಪ್ರಾಣ ಹಾನಿಯೂ ಆಗಿದೆ. ಆದರೆ ಮುಖ್ಯಮಂತ್ರಿ ಹಾಗೂ ಸಚಿವರು ಜನರ ಕಷ್ಟಕ್ಕೆ ಸ್ಪಂದಿಸಲು ಮುಂದಾಗಿಲ್ಲ ಎಂದು ಆರೋಪಿಸಿದರು.