<p><strong>ಸಾಗರ: </strong>ಇಲ್ಲಿನ ಗಣಪತಿ ಕೆರೆ ದಂಡೆಯ ಮೇಲಿರುವ ಜಾಮಿಯಾ ಮಸೀದಿ ಕಟ್ಟಡ ನವೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಭಾನುವಾರ ಎರಡು ಗುಂಪುಗಳನಡುವೆ ಘರ್ಷಣೆ ನಡೆದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.</p>.<p>ಒಂದು ಹಂತದಲ್ಲಿ ಎರಡು ಗುಂಪುಗಳಲ್ಲಿದ್ದ ಜನರು ಪರಸ್ಪರ ಕೈಕೈ ಮಿಲಾಯಿಸಲು ಮುಂದಾಗಿ ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.</p>.<p>ಪ್ರಾರ್ಥನಾ ಮಂದಿರದ ಕಟ್ಟಡದ ನವೀಕರಣ ಕಾಮಗಾರಿಯನ್ನು ನಿಯಮಉಲ್ಲಂಘಿಸಿ ನಡೆಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಶಾಸಕ ಎಚ್.ಹಾಲಪ್ಪ ಹರತಾಳು ಅಧ್ಯಕ್ಷತೆಯಲ್ಲಿ ಎರಡೂ ಸಮುದಾಯದ ಮುಖಂಡರ ಸಭೆಯನ್ನು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿತ್ತು.</p>.<p>ಕಚೇರಿಯಲ್ಲಿ ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲೇ ಅತ್ತ ಪ್ರಾರ್ಥನಾ ಮಂದಿರಎದುರು ಎರಡೂ ಸಮುದಾಯದವರು ಸೇರಿದ್ದರು. ಪ್ರಾರ್ಥನಾ ಮಂದಿರ ಹಾಗೂದೇವಸ್ಥಾನದ ನಡುವೆ ಇರುವ ಚರಂಡಿಯನ್ನು ಮುಚ್ಚಲಾಗಿದೆ ಎಂದು ಆರೋಪಿಸಿದ ಒಂದು ಗುಂಪಿನ ಜನರು ಚರಂಡಿಯಲ್ಲಿದ್ದ ಮಣ್ಣನ್ನು ತೆಗೆಯಲು ಮುಂದಾದರು. ಇದನ್ನು ಮತ್ತೊಂದು ಗುಂಪಿನವರು ವಿರೋಧಿಸಿದರು.</p>.<p>ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಾತುಕತೆಯಲ್ಲಿ ಪಾಲ್ಗೊಂಡವರು ಸ್ಥಳಕ್ಕೆ ಆಗಮಿಸಿ ಒಪ್ಪಂದದ ಬಗ್ಗೆ ವಿವರಿಸಲು ಮುಂದಾದಾಗಒಂದು ಗುಂಪಿನಿಂದ ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿದ ಮತ್ತೊಂದು ಗುಂಪು ಪ್ರತಿಯಾಗಿ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತ ದೇಶದ್ರೋಹಿಗಳನ್ನು ಬಂಧಿಸಿ ಎಂದು ಆಗ್ರಹಿಸಿತು.</p>.<p>ಈ ನಡುವೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯಿತು.</p>.<p>ದೇವರ ಹೆಸರಿನಲ್ಲಿಕೂಗಿದ ಘೋಷಣೆಯನ್ನು ತಪ್ಪಾಗಿ ಅರ್ಥೈಸಿ ‘ ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಿರುವುದಾಗಿ ನಮ್ಮ ಮೇಲೆ ಆರೋಪ ಹೊರಿಸಲಾಗುತ್ತಿದೆ. ನಮ್ಮನ್ನು ದೇಶದ್ರೋಹಿಗಳೆಂದು ಕೂಗಿದವರನ್ನು ಬಂಧಿಸಿ ಎಂದು ಒಂದು ಗುಂಪು ಆಗ್ರಹಿಸಿತು.</p>.<p>ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಆಗ ಗುಂಪುಗಳ ನಡುವೆ ಕಲ್ಲು ತೂರಾಟ ಕೂಡ ನಡೆಯಿತು. ನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಮಹಾಬಲೇಶ್ವರ್ ನಾಯ್ಕ್ ಅವರ ಹಣೆಗೆ ಕಲ್ಲು ತಾಗಿತು.</p>.<p>ನಂತರ ಸ್ಥಳಕ್ಕೆ ಆಗಮಿಸಿದ ನಗರಸಭೆ ಸದಸ್ಯ ಟಿ.ಡಿ.ಮೇಘರಾಜ್, ನಗರಸಭೆ ಮಾಜಿ ಉಪಾಧ್ಯಕ್ಷ ಸೈಯದ್ ಇಕ್ಬಾಲ್ ಅವರು ಎರಡೂ ಸಮುದಾಯದವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದರು.</p>.<p>ಸಂಪೂರ್ಣ ಘಟನೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದ್ದು, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ.ಎಲ್.ನಾಗರಾಜ್ ಹೇಳಿದರೂ ಸ್ಥಳದಲ್ಲಿದ್ದವರು ಸಮಾಧಾನಗೊಳ್ಳಲಿಲ್ಲ.</p>.<p>ಬಳಿಕ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ ಎಂಬ ವ್ಯಕ್ತಿಯನ್ನು ಸ್ಥಳಕ್ಕೆ ಕರೆಯಿಸಲಾಯಿತು. ‘ನಾನು ದೇಶವಿರೋಧಿ ಘೋಷಣೆ ಕೂಗಿಲ್ಲ. ಅದಕ್ಕೆ ಸಾಕ್ಷ್ಯವಿದ್ದಲ್ಲಿ ನನ್ನ ವಿರುದ್ಧ ಕ್ರಮ ಕೈಗೊಳ್ಳಬಹುದು’ ಎಂದಾಗ ಪರಿಸ್ಥಿತಿ ತಿಳಿಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಇಲ್ಲಿನ ಗಣಪತಿ ಕೆರೆ ದಂಡೆಯ ಮೇಲಿರುವ ಜಾಮಿಯಾ ಮಸೀದಿ ಕಟ್ಟಡ ನವೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಭಾನುವಾರ ಎರಡು ಗುಂಪುಗಳನಡುವೆ ಘರ್ಷಣೆ ನಡೆದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.</p>.<p>ಒಂದು ಹಂತದಲ್ಲಿ ಎರಡು ಗುಂಪುಗಳಲ್ಲಿದ್ದ ಜನರು ಪರಸ್ಪರ ಕೈಕೈ ಮಿಲಾಯಿಸಲು ಮುಂದಾಗಿ ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.</p>.<p>ಪ್ರಾರ್ಥನಾ ಮಂದಿರದ ಕಟ್ಟಡದ ನವೀಕರಣ ಕಾಮಗಾರಿಯನ್ನು ನಿಯಮಉಲ್ಲಂಘಿಸಿ ನಡೆಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಶಾಸಕ ಎಚ್.ಹಾಲಪ್ಪ ಹರತಾಳು ಅಧ್ಯಕ್ಷತೆಯಲ್ಲಿ ಎರಡೂ ಸಮುದಾಯದ ಮುಖಂಡರ ಸಭೆಯನ್ನು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿತ್ತು.</p>.<p>ಕಚೇರಿಯಲ್ಲಿ ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲೇ ಅತ್ತ ಪ್ರಾರ್ಥನಾ ಮಂದಿರಎದುರು ಎರಡೂ ಸಮುದಾಯದವರು ಸೇರಿದ್ದರು. ಪ್ರಾರ್ಥನಾ ಮಂದಿರ ಹಾಗೂದೇವಸ್ಥಾನದ ನಡುವೆ ಇರುವ ಚರಂಡಿಯನ್ನು ಮುಚ್ಚಲಾಗಿದೆ ಎಂದು ಆರೋಪಿಸಿದ ಒಂದು ಗುಂಪಿನ ಜನರು ಚರಂಡಿಯಲ್ಲಿದ್ದ ಮಣ್ಣನ್ನು ತೆಗೆಯಲು ಮುಂದಾದರು. ಇದನ್ನು ಮತ್ತೊಂದು ಗುಂಪಿನವರು ವಿರೋಧಿಸಿದರು.</p>.<p>ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಾತುಕತೆಯಲ್ಲಿ ಪಾಲ್ಗೊಂಡವರು ಸ್ಥಳಕ್ಕೆ ಆಗಮಿಸಿ ಒಪ್ಪಂದದ ಬಗ್ಗೆ ವಿವರಿಸಲು ಮುಂದಾದಾಗಒಂದು ಗುಂಪಿನಿಂದ ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿದ ಮತ್ತೊಂದು ಗುಂಪು ಪ್ರತಿಯಾಗಿ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತ ದೇಶದ್ರೋಹಿಗಳನ್ನು ಬಂಧಿಸಿ ಎಂದು ಆಗ್ರಹಿಸಿತು.</p>.<p>ಈ ನಡುವೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯಿತು.</p>.<p>ದೇವರ ಹೆಸರಿನಲ್ಲಿಕೂಗಿದ ಘೋಷಣೆಯನ್ನು ತಪ್ಪಾಗಿ ಅರ್ಥೈಸಿ ‘ ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಿರುವುದಾಗಿ ನಮ್ಮ ಮೇಲೆ ಆರೋಪ ಹೊರಿಸಲಾಗುತ್ತಿದೆ. ನಮ್ಮನ್ನು ದೇಶದ್ರೋಹಿಗಳೆಂದು ಕೂಗಿದವರನ್ನು ಬಂಧಿಸಿ ಎಂದು ಒಂದು ಗುಂಪು ಆಗ್ರಹಿಸಿತು.</p>.<p>ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಆಗ ಗುಂಪುಗಳ ನಡುವೆ ಕಲ್ಲು ತೂರಾಟ ಕೂಡ ನಡೆಯಿತು. ನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಮಹಾಬಲೇಶ್ವರ್ ನಾಯ್ಕ್ ಅವರ ಹಣೆಗೆ ಕಲ್ಲು ತಾಗಿತು.</p>.<p>ನಂತರ ಸ್ಥಳಕ್ಕೆ ಆಗಮಿಸಿದ ನಗರಸಭೆ ಸದಸ್ಯ ಟಿ.ಡಿ.ಮೇಘರಾಜ್, ನಗರಸಭೆ ಮಾಜಿ ಉಪಾಧ್ಯಕ್ಷ ಸೈಯದ್ ಇಕ್ಬಾಲ್ ಅವರು ಎರಡೂ ಸಮುದಾಯದವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದರು.</p>.<p>ಸಂಪೂರ್ಣ ಘಟನೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದ್ದು, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ.ಎಲ್.ನಾಗರಾಜ್ ಹೇಳಿದರೂ ಸ್ಥಳದಲ್ಲಿದ್ದವರು ಸಮಾಧಾನಗೊಳ್ಳಲಿಲ್ಲ.</p>.<p>ಬಳಿಕ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ ಎಂಬ ವ್ಯಕ್ತಿಯನ್ನು ಸ್ಥಳಕ್ಕೆ ಕರೆಯಿಸಲಾಯಿತು. ‘ನಾನು ದೇಶವಿರೋಧಿ ಘೋಷಣೆ ಕೂಗಿಲ್ಲ. ಅದಕ್ಕೆ ಸಾಕ್ಷ್ಯವಿದ್ದಲ್ಲಿ ನನ್ನ ವಿರುದ್ಧ ಕ್ರಮ ಕೈಗೊಳ್ಳಬಹುದು’ ಎಂದಾಗ ಪರಿಸ್ಥಿತಿ ತಿಳಿಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>