ಇದಕ್ಕೆ ಪ್ರತಿಕ್ರಿಯೆ ನೀಡಿರುವ ಆಂಜನೇಯ, ‘ಶಂಕರರಾವ್ ದೊಡ್ಡಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಲು ನಾನು ಸಚಿವನಾಗಿದ್ದಾಗ ಆದೇಶ ನೀಡಿದ್ದೆ. ತನಿಖೆ ನಡೆಸಿದ ನಿರ್ದೇಶನಾಲಯ 240 ಪುಟಗಳ ವರದಿ ನೀಡಿತ್ತು. ಅದರಲ್ಲಿ ಚವ್ಹಾಣ್ ಪರಿಶಿಷ್ಟ ಜಾತಿಗೆ ಸೇರಿದವರಲ್ಲ, ಮಹಾರಾಷ್ಟ್ರಕ್ಕೆ ಸೇರಿದವರು ಮತ್ತು ಸುಳ್ಳು ಪ್ರಮಾಣ ಪತ್ರ ನೀಡಿದ್ದಾರೆ ಎಂದು ತಿಳಿಸಿತ್ತು’ ಎಂದಿದ್ದಾರೆ.