<p><strong>ತೀರ್ಥಹಳ್ಳಿ: </strong>ತಾಲ್ಲೂಕಿನ ಮೇಳಿಗೆ ಸಮೀಪದ ಕೆಳಕೆರೆ ಗ್ರಾಮದ ತುಂಗಾ ನದಿ ತೀರದಲ್ಲಿ ಸೋಮವಾರ ಖಿನ್ನತೆಗೆ ಒಳಗಾಗಿದ್ದ ಬಾಲಕಿ ಪತ್ತೆಯಾಗಿದ್ದು,ಬಾಲಕಿಯನ್ನು ರಕ್ಷಿಸಿದ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಪ್ಪಿಸಿದರು.</p>.<p>ಶಿಕಾರಿಪುರ ತಾಲ್ಲೂಕಿನ ಬಾಲಕಿ (12 ವರ್ಷ) ಹಲವು ದಿನಗಳ ಹಿಂದೆ ಸಮೀಪದ ಬುಕ್ಕಾಪುರದಲ್ಲಿ ಶ್ರೀಮಂತರೊಬ್ಬರ ಮನೆಯಲ್ಲಿ ಮನೆಕೆಲಸಕ್ಕೆ ಸೇರಿಕೊಂಡಿದ್ದಳು. ಬಾಲಕಿ ತಾಯಿ ಹಣ ಪಡೆದು ಬಾಲಕಿಯನ್ನು ಮನೆಗೆಲಸಕ್ಕೆ ಸೇರಿಸಿದ್ದಳು ಎಂಬ ಸಂಗತಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.</p>.<p>ಮನೆಗೆಲಸಕ್ಕೆ ಇಟ್ಟುಕೊಂಡ ವ್ಯಕ್ತಿ ಬಾಲಕಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಪ್ರತಿದಿನ ಬೆದರಿಸಿ ಹೊಡೆಯುತ್ತಿದ್ದ ಎಂದು ಬಾಲಕಿ ಗ್ರಾಮಸ್ಥರ ಬಳಿ ಅಳಲು ತೋಡಿಕೊಂಡಳು. ಬಾಲಕಿಯನ್ನು ಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಪ್ಪಿಸಿದರು.</p>.<p>ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ದಿವಾಕರ್ ಬಾಲಕಿಯನ್ನು ಮಕ್ಕಳ ರಕ್ಷಣಾ ಘಟಕ್ಕೆ ಒಪ್ಪಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ತಾತ್ಕಾಲಿಕವಾಗಿ ಬಾಲಕಿಗೆ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಇಲಾಖೆಯಿಂದ ವಿಚಾರಣೆಗೆ ಮಹಿಳಾ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ: </strong>ತಾಲ್ಲೂಕಿನ ಮೇಳಿಗೆ ಸಮೀಪದ ಕೆಳಕೆರೆ ಗ್ರಾಮದ ತುಂಗಾ ನದಿ ತೀರದಲ್ಲಿ ಸೋಮವಾರ ಖಿನ್ನತೆಗೆ ಒಳಗಾಗಿದ್ದ ಬಾಲಕಿ ಪತ್ತೆಯಾಗಿದ್ದು,ಬಾಲಕಿಯನ್ನು ರಕ್ಷಿಸಿದ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಪ್ಪಿಸಿದರು.</p>.<p>ಶಿಕಾರಿಪುರ ತಾಲ್ಲೂಕಿನ ಬಾಲಕಿ (12 ವರ್ಷ) ಹಲವು ದಿನಗಳ ಹಿಂದೆ ಸಮೀಪದ ಬುಕ್ಕಾಪುರದಲ್ಲಿ ಶ್ರೀಮಂತರೊಬ್ಬರ ಮನೆಯಲ್ಲಿ ಮನೆಕೆಲಸಕ್ಕೆ ಸೇರಿಕೊಂಡಿದ್ದಳು. ಬಾಲಕಿ ತಾಯಿ ಹಣ ಪಡೆದು ಬಾಲಕಿಯನ್ನು ಮನೆಗೆಲಸಕ್ಕೆ ಸೇರಿಸಿದ್ದಳು ಎಂಬ ಸಂಗತಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.</p>.<p>ಮನೆಗೆಲಸಕ್ಕೆ ಇಟ್ಟುಕೊಂಡ ವ್ಯಕ್ತಿ ಬಾಲಕಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಪ್ರತಿದಿನ ಬೆದರಿಸಿ ಹೊಡೆಯುತ್ತಿದ್ದ ಎಂದು ಬಾಲಕಿ ಗ್ರಾಮಸ್ಥರ ಬಳಿ ಅಳಲು ತೋಡಿಕೊಂಡಳು. ಬಾಲಕಿಯನ್ನು ಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಪ್ಪಿಸಿದರು.</p>.<p>ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ದಿವಾಕರ್ ಬಾಲಕಿಯನ್ನು ಮಕ್ಕಳ ರಕ್ಷಣಾ ಘಟಕ್ಕೆ ಒಪ್ಪಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ತಾತ್ಕಾಲಿಕವಾಗಿ ಬಾಲಕಿಗೆ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಇಲಾಖೆಯಿಂದ ವಿಚಾರಣೆಗೆ ಮಹಿಳಾ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>